ಹರಿತಲೇಖನಿ ದಿನಕ್ಕೊಂದು ಕಥೆ: ಮೊಲ ತೋರಿದ ಮಾರ್ಗ

ಬೇಟೆಗಾರ ಭದ್ರಯ್ಯ ಯಾವಾಗಲೂ ಬಿಲ್ಲು- ಬಾಣ, ಈಟಿ- ಭರ್ಜಿ, ಕತ್ತಿ-ಮಚ್ಚುಗಳನ್ನು ಹಿಡಿದುಕೊಂಡು ಕಾಡಿನಲ್ಲಿರುವ ಪ್ರಾಣಿ- ಪಕ್ಷಿಗಳನ್ನು ಬೇಟೆಯಾಡುತ್ತಾ ಅಟ್ಟಹಾಸಗೈಯುತ್ತಿದ್ದ. ಅವನನ್ನು ಕಂಡರೆ ಸಾಕು, ಕಾಡಿನಲ್ಲಿರುವ ಪ್ರಾಣಿ- ಪಕ್ಷಿಗಳೆಲ್ಲಾ ಹೆದರಿ ಥರಥರನೆ ನಡುಗುತ್ತಾ ಓಡಿ ಹೋಗುತ್ತಿದ್ದವು.

ಹೀಗೆ ಕಾಡಿನ ಪ್ರಾಣಿ- ಪಕ್ಷಿಗಳಿಗೆಲ್ಲಾ ಯಮದೂತನಂತಿದ್ದ ಬೇಟೆಗಾರ ಭದ್ರಯ್ಯ, ಒಂದುದಿನ ಇದ್ದಕ್ಕಿದ್ದಂತೆ ತನ್ನ ಆಯುಧಗಳನ್ನು ತ್ಯಜಿಸಿ ಒಂದು ಮರದ ಕೆಳಗೆ ತಲೆ ಮೇಲೆ ಕೈಹೊತ್ತು ಚಿಂತಾಕ್ರಾಂತನಾಗಿ ಸನ್ಯಾಸಿಯಂತೆ ಕುಳಿತುಕೊಂಡಿದ್ದ. ಇಂಥ ಸ್ಥಿತಿಯಲ್ಲಿ ಅವನನ್ನು ನೋಡಿದ ಕಾಡಿನ ಪ್ರಾಣಿ- ಪಕ್ಷಿಗಳೆಲ್ಲಾ ಆಶ್ಚರ್ಯಗೊಂಡು, ‘ಇವನೇನೋ ನಾಟಕ ಮಾಡುತ್ತಿದ್ದಾನೆ’ ಎಂದು ಮಾತನಾಡಿಕೊಂಡವು. ಯಾವುದಕ್ಕೂ ತಾವು ಎಚ್ಚರಿಕೆಯಿಂದಿರಬೇಕು ಎಂದುಕೊಂಡು ಭಯದಿಂದ ಅವನ ಹತ್ತಿರಕ್ಕೆ ಹೋಗದೆ ದೂರ ದೂರ ಹೊರಟವು.

ನರಿಯೊಂದು ಬಹುದೂರದಲ್ಲೇ ನಿಂತು, ‘ಈ ಬೇಟೆಗಾರ ಭದ್ರಯ್ಯ ಸಾಮಾನ್ಯನಲ್ಲ. ಜೀವ ತೆಗೆಯುವ ರಾಕ್ಷಸ. ಇಂದು ಏನೋ ಆಟ ಕಟ್ಟುತ್ತಿದ್ದಾನೆ. ನಂಬಬೇಡಿ ಎಚ್ಚರಿಕೆಯಿಂದಿರಿ’ ಎಂದು ಕೂಗಿ ಎಚ್ಚರಿಸಿತು. ದೊಡ್ಡ ಆಲದ ಮರದ ತುದಿಯಲ್ಲಿ ಕುಳಿತಿದ್ದ ರಣಹದ್ದು ಸಹ ನರಿಯ ಎಚ್ಚರಿಕೆಯ ಕೂಗಿಗೆ ದನಿಗೂಡಿಸಿ, ‘ನರಿ ಹೇಳುತ್ತಿರುವುದು ನಿಜ. ಈ ಕೊಲೆಗಡುಕ ಬೇಟೆಗಾರ ಭದ್ರಯ್ಯ ಸನ್ಯಾಸಿಯಂತೆ ನಟಿಸುತ್ತಾ ಏನೋ ಮಸಲತ್ತು ಮಾಡುತ್ತಿದ್ದಾನೆ. ಜೋಕೇ’ ಎಂದು ಜೋರಾಗಿ ಕಿರುಚಿತು.

ಇದನ್ನೆಲ್ಲಾ ಬಹಳ ಹೊತ್ತಿನಿಂದಲೂ ಸೂಕ್ಷ್ಮವಾಗಿ ಒಂದು ಮೊಲ ಗಮನಿಸುತ್ತಿತ್ತು. ಅದಕ್ಕೆ ಬೇಟೆಗಾರ ಭದ್ರಯ್ಯ ನಾಟಕವಾಡುತ್ತಿದ್ದಾನೆ ಎಂದು ಎನಿಸಲಿಲ್ಲ. ಬದಲಿಗೆ ಅವನು ಯಾವುದೋ ಕಷ್ಟಕ್ಕೆ ಸಿಲುಕಿಕೊಂಡಿರಬಹುದು ಎನಿಸಿತು. ಏನಾದರೂ ಸರಿ, ಅವನನ್ನೇ ವಿಚಾರಿಸಿಬಿಡೋಣವೆಂದು ಮೊಲವು ಧೈರ್ಯ ತಂದುಕೊಂಡು ಭದ್ರಯ್ಯನ ಬಳಿಗೆ ಹೋಯಿತು. ಅವನು ಸುಮ್ಮನೆ ಮೊಲವನ್ನು ನೋಡಿದನೇ ಹೊರತು ಅದಕ್ಕೆ ತೊಂದರೆ ಮಾಡಲಿಲ್ಲ.

ಮೊಲ ಅವನ ಮೈಮೇಲೆಲ್ಲಾ ಹತ್ತಿ ಕುಣಿಯಿತು. ಆದರೂ ಅವನು ಸಾಧುವಿನಂತೆ ಸುಮ್ಮನಿದ್ದ. ಚಿಂತಾಕ್ರಾಂತನಾಗಿದ್ದ ಅವನ ಕಣ್ಣುಗಳಲ್ಲಿ ನೀರು ತುಂಬಿಕೊಂಡಿತ್ತು. ಮುಖ ದುಃಖದಿಂದ ಮುದುಡಿಕೊಂಡಿತ್ತು. ಅವನ ಸ್ಥಿತಿ ಕಂಡು ಮೊಲ ಮರುಗಿತು. ಬಹಳ ಒತ್ತಾಯ ಮಾಡಿ ಅವನ ಈ ಸ್ಥಿತಿಗೆ ಕಾರಣವೇನೆಂದು ಮೊಲ ಕೇಳಿತು. ಬಹಳ ಹೊತ್ತು ಸುಮ್ಮನಿದ್ದ ಅವನು, ಮೊಲದ ಒತ್ತಾಯಕ್ಕೆ ಮಣಿದು ತನ್ನ ಕಷ್ಟದ ಕಥೆ ಹೇಳಿದ.

‘ಕೇಳು ಮೊಲವೇ, ನೀವೆಲ್ಲಾ ತಿಳಿದುಕೊಂಡಿರುವಂತೆ ನಾನು ಕ್ರೂರಿಯಲ್ಲ. ನಿಜವಾದ ಕ್ರೂರಿ ನನ್ನ ಹೆಂಡತಿ. ಅವಳನ್ನು ತೃಪ್ತಿ ಪಡಿಸಲು ಈ ಬೇಟೆಗಾರ ವೃತ್ತಿಯಲ್ಲಿ ತೊಡಗಿದ್ದೇನೆ. ನಾನು ಬೇಟೆಯಾಡಿ ಎಷ್ಟು ತಂದು ಸುರಿದರೂ ಅವಳಿಗೆ ಸಾಲದು. ಮರ ಕಡಿಯುವ ನಮ್ಮ ಹಾಳು ಮನುಷ್ಯರ ದುರಾಸೆಯಿಂದಾಗಿ ಕಾಡು ಕಡಿಮೆಯಾಗಿದೆ. ಪ್ರಾಣಿ- ಪಕ್ಷಿಗಳೂ ಕಡಿಮೆಯಾಗಿವೆ. ಹಾಗಾಗಿ ನನ್ನ ಬೇಟೆಗೂ ಕುತ್ತು ಬಂದಿದೆ.

ಒಂದು ವಾರದಿಂದ ನನಗೆ ಸರಿಯಾಗಿ ಬೇಟೆಯೇ ಸಿಕ್ಕಿಲ್ಲ. ಇದು ನನ್ನ ಹೆಂಡತಿಗೆ ಅರ್ಥವಾಗುವುದಿಲ್ಲ. ಸರಿಯಾದ ಬೇಟೆ ಹೊಡೆದು ಕೊಂಡು ಬರುವ ತನಕ ನೀನು ಮನೆಗೆ ಬರಬೇಡವೆಂದು ನನ್ನ ಹೆಂಡತಿ ನನ್ನನ್ನು ಮನೆಯಿಂದ ಹೊರದಬ್ಬಿದ್ದಾಳೆ.

ಜೀವ ತೆಗೆಯುವ ಈ ಬೇಟೆಗಾರ ವೃತ್ತಿಯೇ ನನಗೆ ಬೇಸರ ತಂದಿದೆ. ಹಾಗಾಗಿ ನಿಮ್ಮನ್ನೆಲ್ಲಾ ಕೊಲ್ಲುವುದಕ್ಕಿಂತ ನನ್ನನ್ನು ನಾನು ಕೊಂದುಕೊಳ್ಳಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ಬೇಟೆಗಾರ ಭದ್ರಯ್ಯ ಮೊಲದ ಮುಂದೆ ತನ್ನ ಕಷ್ಟ ಹೇಳಿಕೊಂಡು ಗೋಳಾಡಿದ.

ಬೇಟೆಗಾರ ಭದ್ರಯ್ಯನ ಗೋಳಿನ ಕಥೆ ಕೇಳಿ ಮೊಲದ ಮನಸ್ಸು ಕರಗಿತು. ‘ನೀನೇನೂ ಸಾಯಬೇಕಾಗಿಲ್ಲ. ಬದುಕಲು ಸಾವಿರಾರು ದಾರಿಗಳಿವೆ. ಬೇಟೆಯಾಡುವ ವೃತ್ತಿ ನಿನಗೆ ಬೇಡವೆಂದರೆ ಅದನ್ನು ಬಿಟ್ಟುಬಿಡು. ನನಗೆ ಮೂರು ಮರಿಗಳಿವೆ. ಅವುಗಳಲ್ಲೊಂದು ಮರಿ ಪ್ರತಿದಿನ ಒಂದೊಂದು ಚಿನ್ನದ ನಾಣ್ಯವನ್ನು ಉಗುಳುತ್ತದೆ. ಅದು ಬಹಳ ಮಹಿಮೆಯುಳ್ಳದ್ದು.

ಆ ಮರಿಯನ್ನು ನಿನಗೆ ಕೊಡುತ್ತೇನೆ. ಅದು ಪ್ರತಿದಿನ ನೀಡುವ ಚಿನ್ನದ ನಾಣ್ಯಗಳಿಂದ ನಿನ್ನ ಹೆಂಡತಿಯೂ ಸಂತೋಷಪಡುತ್ತಾಳೆ. ಆ ಚಿನ್ನದ ನಾಣ್ಯಗಳನ್ನು ಶೇಖರಿಸಿ ಮಾರಿ ಅದರಿಂದ ಬಂದ ಹಣವನ್ನು ಬಂಡವಾಳ ಮಾಡಿಕೊಂಡು ಏನಾದರೂ ವ್ಯಾಪಾರ ಮಾಡಿಕೊಂಡು ನೀನು ಚೆನ್ನಾಗಿ ಬದುಕು’ ಎಂದು ಹೇಳಿ ಮೊಲವು ತನ್ನ ಮರಿ ಚಿನ್ನದ ಮೊಲವನ್ನು ಅವನಿಗೆ ನೀಡಿತು.

ಮೊಲ ಹೇಳಿದಂತೆ ಪ್ರತಿದಿನ ಚಿನ್ನದ ನಾಣ್ಯಕೊಡುವ ಅದರ ಮರಿ ಮೊಲವನ್ನು ತೆಗೆದುಕೊಂಡು ಮನೆಗೆ ಹೋದ ಬೇಟೆಗಾರ ಭದ್ರಯ್ಯ ಮೊಲ ತೋರಿದ ಮಾರ್ಗದಲ್ಲಿ ತನ್ನ ಜೀವನವನ್ನು ರೂಪಿಸಿಕೊಂಡನು. ಚಿನ್ನದ ನಾಣ್ಯ ನೀಡುವ ಮೊಲದ ಮರಿಯನ್ನು ಕಂಡು ಅವನ ಹೆಂಡತಿಗೂ ಸಂತಸವಾಗಿತ್ತು. ಅವಳು ಪರಿವರ್ತನೆಯಾಗಿ ಅವನನ್ನು ಪ್ರೀತಿಯಿಂದ ಕಾಣತೊಡಗಿದಳು. ಕಾಲಾನಂತರ ಮೊಲದ ಮಹಿಮೆಯಿಂದಾಗಿ ಶ್ರೀಮಂತರಾದ ಅವರು ಪ್ರಾಣಿ- ಪಕ್ಷಿಗಳನ್ನೂ ತಮ್ಮ ಮಕ್ಕಳಂತೆ ಸಾಕಿ ಸಲಹುತ್ತಾ ಸುಖವಾಗಿ ಬಾಳಿದರು.

ಕೃಪೆ : ಶಶಿಧರ್ ಹಳೆಮಣಿ ( ಸಾಮಾಜಿಕ ಜಾಲತಾಣ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!