Devegowda has contributed a lot by uniting every community; Nikhil Kumaraswamy

ದೇವೇಗೌಡರು ಪ್ರತಿ ಸಮುದಾಯವನ್ನು ಒಗ್ಗೂಡಿಸಿ ಅನೇಕ ಕೊಡುಗೆ ನೀಡಿದ್ದಾರೆ; ನಿಖಿಲ್ ಕುಮಾರಸ್ವಾಮಿ

ಮೈಸೂರು, (ಸೆ.19); ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು, ಮೈಸೂರಿನ ಕೆಂಪೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ
ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿದರು.

ಹರಿತಲೇಖಿ ವಾಟ್ಸಪ್ ಗುಂಪಿಗೆ ಸೇರಲು ಈ ಲಿಂಕ್ ಬಳಸಿ: https://chat.whatsapp.com/B9AsQ3oyN5ELPfrzOPhl9j

ನಂತರ ಸಭೆಯಲ್ಲಿ ಮಾತನಾಡಿದ ಅವರು, ಇವತ್ತು ಮೈಸೂರಿನಲ್ಲಿ ಮೂರನೇ ವಾರಕ್ಕೆ ಕಾಲಿಟ್ಟಿದ್ದೇವೆ, ಮೊದಲನೇ ವಾರ ತುಮಕೂರು, ಕಳೆದ ವಾರ ಕೊಪ್ಪಳ ಇವತ್ತು ಮೈಸೂರು ಜಿಲ್ಲೆಗೆ ಹೀಗೆ ಪ್ರತಿ ವಾರವು ಜಿಲ್ಲೆಯದ್ಯಾಂತ
ಪ್ರವಾಸ ಕೈಗೊಳ್ಳುತ್ತಿದ್ದೇವೆ ಎಂದು ತಿಳಿದರು.

ಪಕ್ಷವನ್ನು ತಳಮಟ್ಟದಿಂದ ಕಟ್ಟುವ ನಿಟ್ಟಿನಲ್ಲಿ ಇದೊಂದು ಮಹತ್ವದ ನಿರ್ಧಾರವಾಗಿದೆ.ಇವತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನ ಕಟ್ಟಬೇಕು, ಪಕ್ಷದ ಕಟ್ಟ ಕಡೆಯ ಕಾರ್ಯಕರ್ತರನ್ನ ಗುರುತಿಸುವ ಪ್ರಾಮಾಣಿಕ ಕೆಲಸ ಮಾಡ್ತೀನಿ ಎಂದರು.

ಜೆಡಿಎಸ್ ಪಕ್ಷದ ಸದಸ್ಯತ್ವ ನೊಂದಣಿ ಮತ್ತು ಬೂತ್ ಮಟ್ಟದ ಸಮಿತಿ ರಚನೆ ಆಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಕರೆ ಕೊಟ್ಟಿದ್ದರು. ಇವತ್ತು ರಾಜ್ಯದಲ್ಲಿ ಪ್ರತಿ ಸಮಾಜವನ್ನು ಒಗ್ಗೂಡಿಸಿ ಎಲ್ಲಾ ಸಮುದಾಯಕ್ಕೂ ದೇವೇಗೌಡರು ಕೊಡುಗೆ ನೀಡಿದ್ದಾರೆ ಎಂದರು.

62 ವರ್ಷದಲ್ಲಿ ಬಿಜೆಪಿ ಜೊತೆಗೆ ಹೋಗಿರಲಿಲ್ಲ, ಆದರೆ ಮೈತ್ರಿಗೆ ದೇವೇಗೌಡರೆ ಒಪ್ಪಿಗೆ ಸೂಚಿಸಿದರು
ಪ್ರಾದೇಶಿಕ ಪಕ್ಷ ಉಳಿಸಿ ಬೆಳೆಸಬೇಕು.ಹಾಗೆಯೇ ಕುಮಾರಣ್ಣ ಅವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಇವತ್ತಿಗೂ ಕೂಡ ಮರೆಯೋದಕ್ಕೆ ಆಗುವುದಿಲ್ಲ ಎಂದರು.

ನೀವೆಲ್ಲರೂ ಪ್ರೀತಿಯಿಂದ ಅಣ್ಣ ಅನ್ನುವ ಪದ ಚಿತ್ರರಂಗದಲ್ಲಿ ಡಾ. ರಾಜಕುಮಾರ್ ಅವರಿಗೆ ಅಣ್ಣಾವ್ರು ಎಂದು ಕರೆಯುತ್ತಿದ್ವಿ. ರಾಜಕಾರಣದಲ್ಲಿ ಪ್ರೀತಿಯಿಂದ ಅಣ್ಣ ಅಂತ ಕುಮಾರಣ್ಣ ಅಂತ ನಿವೆಲ್ಲರೂ ಮನೆಯ ಮಗನ ರೀತಿ ಬೆಳೆಸಿದ್ದೀರಿ ಆಶೀರ್ವಾದಿಸಿದ್ದಿರಿ ಎಂದರು.

ಕುಮಾರಣ್ಣ ಕೇಂದ್ರ ಮಂತ್ರಿಯಾದ ನಂತರ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು, ಉತ್ಸಾಹ, ಹುಮ್ಮಸ್ಸು ಪ್ರಾರಂಭವಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಕುಮಾರಣ್ಣನ ಮುಂಬರುವ ದಿನಗಳಲ್ಲಿ 5 ವರ್ಷದಕಾಲ ಮುಖ್ಯಮಂತ್ರಿ ಮಾಡುವುದಕ್ಕೆ ಶಕ್ತಿ ಬರುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ: Doddaballapura: ಕಾರ್‌ನಲ್ಲಿ ಬಂದು ಸರಗಳ್ಳತನ..!

ಪ್ರಾದೇಶಿಕ ಪಕ್ಷ ಮುಂಬರುವ ದಿನಗಳಲ್ಲಿ ರಾಜ್ಯದ 31 ಜಿಲ್ಲೆಯಲ್ಲೂ ಪ್ರವಾಸ ಮಾಡಿ ಸದೃಢವಾಗಿ ಕಟ್ಟುವಂತ ಪ್ರಾಮಾಣಿಕ ಕೆಲಸ ಮಾಡ್ತೀನಿ ನೀವೆಲ್ಲರೂ ನಮಗೆ ಕೈ ಜೋಡಿಸಬೇಕು ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಸದಸ್ಯತ್ವ ನೋಂದಣಿ ಮತ್ತು ಬೂತ್ ಕಮಿಟಿಗಳ ನೇಮಕದಲ್ಲಿ ತೊಡಗಿ, ಪಕ್ಷವನ್ನು ಬಲಪಡಿಸುವಂತೆ ಮನವಿ ಮಾಡಿದರು.ಇಂದಿನಿಂದಲೇ ಪಕ್ಷದ ಕಾರ್ಯಕರ್ತರು ಕೆಲಸ ಆರಂಭಿಸುವಂತೆ ಅವರು ಕರೆ ನೀಡಿದರು.

ರಾಜಕೀಯ

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪ ಕಾರಾರ್ಥಮ್ ಇದಂ ಶರೀರಮ್ DK Shivakumar

[ccc_my_favorite_select_button post_id="105376"]
ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ Cmsiddaramaiah

[ccc_my_favorite_select_button post_id="105401"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!