ಹರಿತಲೇಖನಿ ದಿನಕ್ಕೊಂದು ಕಥೆ: ಆನೆಗೆ ರಕ್ತ ದಾನ

ಕಾಡಿನಲ್ಲಿ ಗಜರಾಜ, ಹೊಟ್ಟೆಯ ಕೆಳಗೆ ಚೂಪಾದ ಕಲ್ಲು ತರಚಿ ಗಾಯವಾಗಿ ಒಂದು ದೊಡ್ಡ ಆಲದಮರದ ಕೆಳಗೆ ಮಲಗಿತ್ತು. ಗಾಯ ಆದ ಜಾಗದಲ್ಲಿ ರಕ್ತ ಸ್ರಾವ ಆಗುತ್ತಿತ್ತು.

ಅದಕ್ಕೆ ಉಪಚಾರ ಮಾಡಲು ಪಶುವೈದ್ಯರನ್ನು ಕರೆಸಲಾಯಿತು. ಪಶುವೈದ್ಯರು ‘ಆನೆಗೆ ಬಹಳ ರಕ್ತ ಹೋಗಿದೆ. ತಕ್ಷಣ ಪ್ರಾಣಿಗಳು ರಕ್ತ ನೀಡಲು ಮುಂದೆ ಬರಬೇಕು’ ಎಂದರು. ಗಜರಾಜ ಗಾಯಗೊಂಡ ಸುದ್ದಿ ಕೇಳಿ ಎಲ್ಲಾ ಪ್ರಾಣಿ, ಪಕ್ಷಿ, ಕೀಟಗಳು ಸೇರಿದ್ದವು. ಎಲ್ಲರೂ ತಮ್ಮ ವರ್ಗದಲ್ಲಿ ರಕ್ತ ದಾನ ಮಾಡಲು ಅಭಿಪ್ರಾಯ ಮಂಡಿಸಿದವು.

ಕೀಟಸಂಕುಲದ ಪರವಾಗಿ ಚಿಟ್ಟೆ ತಮಗೆ ಮೊದಲು ರಕ್ತದಾನ ಮಾಡಲು ಅವಕಾಶ ನೀಡಲು ಕೋರಿತು. ಎಲ್ಲಾ ಪ್ರಾಣಿಗಳು ನಗಲು ಪ್ರಾರಂಭಿಸಿದವು. ಬೃಹತ್ ಆಕಾರದ ದೇಹವನ್ನು ಹೊಂದಿರುವ ಗಜರಾಜನಿಗೆ ನಿನ್ನ ರಕ್ತ ಎಲ್ಲಿ ಸಾಲುತ್ತದೆ ಎಂದು ಅಪಹಾಸ್ಯ ಮಾಡಿದವು.

ಪಕ್ಷಿ ಸಂಕುಲದ ಪರವಾಗಿ ಗಿಳಿಯು ರೆಕ್ಕೆಯನ್ನು ರಪ ರಪ ಬಡಿಯುತ್ತಾ ‘ನಾವು ಕೂಡ ಈ ಕಾಡಿನಲ್ಲಿ ಗಜರಾಜನ ಒಡನಾಡಿಗಳು. ಹಾಗಾಗಿ ನಾವೂ ರಕ್ತದಾನ ಮಾಡುತ್ತೇವೆ ಎಂದಿತು. ಮತ್ತೆ ಎಲ್ಲ ಕೆಲವು ಪ್ರಾಣಿಗಳು ನಗಲು ಪ್ರಾರಂಭಿಸಿದವು.

ಗರಿಗಳುಳ್ಳ, ತಕ-ತಕ ಕುಣಿಯುವ, ನಾಟ್ಯ ಪ್ರವೀಣೆ ನವಿಲು ಮತ್ತು ಪ್ರಾಣಿವರ್ಗದಿಂದ ಚಾತುರ್ಯವುಳ್ಳ ನರಿಯು ತನ್ನ ಸೊಂಟವನ್ನು ಸರಿ ಮಾಡಿಕೊಳ್ಳುತ್ತಾ ಎದ್ದು ನಿಂತು, ‘ನಾನು ಎಲ್ಲ ಪ್ರಾಣಿ ವರ್ಗಕ್ಕಿಂತ ಗಾತ್ರದಲ್ಲಿ ಚಿಕ್ಕವರಾದರೂ ಬುದ್ದಿವಂತಿಕೆಯಿಂದ ಶುತ್ರುಗಳ ಎದೆಯಲ್ಲಿ ನಡುಕ ಹುಟ್ಟಿಸಬಲ್ಲೆ. ಹಾಗಾಗಿ ನಾನು ರಕ್ತ ಕೊಡುತ್ತೇನೆ’ ಎಂದು ಜಂಬದ ಮಾತು ಹೇಳಿ ತಕ್ಷಣವೇ ‘ನನ್ನನ್ನು ಯಾರೋ ಕರೆಯುತ್ತಿದ್ದಾರೆ’ ಎಂದು ಹೇಳುತ್ತಾ ಆ ಸ್ಥಳದಿಂದ ಜಾಗ ಖಾಲಿ ಮಾಡಿ ಹೊರಟು ಹೋಯಿತು.

ಹಾಗೆಯೇ ಜೇಡ, ಹದ್ದು, ಕಾಗೆ, ಬಲಿಷ್ಠ ಸಿಂಹ, ಹುಲಿ, ಕಾಡು ಕೋಣ, ಕರಡಿ… ಹೀಗೆ ಇನ್ನೂ ಅನೇಕ ಪ್ರಾಣಿಗಳು ಮುಂದೆ ಬರಲಿಲ್ಲ. ಅದೇ ಸಮಯದಲ್ಲಿ ಅತಿಚಿಕ್ಕ ಇರುವೆಗಳು ದಾರಿಯಲ್ಲಿ ಬರಬರನೇ ಓಡುತ್ತಿದ್ದವು. ಅದನ್ನು ಎಲ್ಲಾ ಪ್ರಾಣಿಗಳು ನೋಡಿದವು.

‘ಎಲ್ಲಿಗೆ ಹೊರಟಿರುವೆ ಇರುವೆ?’ ಎಂದು ಮಾತನಾಡಿಸಿದವು. ಆಗ ಒಂದು ಇರುವೆ ಹೇಳಿತು, ‘ನಮ್ಮ ಗಜರಾಜನಿಗೆ ಚೂಪಾದ ಕಲ್ಲು ತರಚಿ, ಗಾಯವಾಗಿ ರಕ್ತ ಹೋಗುತ್ತಿದೆ. ವೈದ್ಯರು ತಕ್ಷಣ ರಕ್ತ ಕೊಡಿ ಎಂದು ಹೇಳಿದ್ದಾರೆ. ಅದಕ್ಕೆ ನಾವು ರಕ್ತ ಕೊಡಲು ಹೊರಟಿದ್ದೇವೆ’ ಎಂದು ಹೇಳಿ ಅಲ್ಲಿಂದು ಹೊರಟು ವೈದ್ಯರ ಬಳಿ ಹೋಗಿ ‘ನಾನು ಗಜರಾಜನಿಗೆ ರಕ್ತ ಕೊಡುತ್ತನೆ. ನನ್ನ ರಕ್ತ ತಗೆದುಕೊಳ್ಳಿ’ ಎಂದು ಹೇಳಿತು. ಆದರೆ ವೈದ್ಯರು ಇರುವೆಯ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು.

ಅಪಹಾಸ್ಯ ಮಾಡದೆ ‘ಗಜರಾಜನ ಗಾಯಕ್ಕೆ ಹೊಲಿಗೆ ಹಾಕಿ ರಕ್ತ ಹೋಗುವುದು ನಿಂತಿದೆ. ಅದಕ್ಕೆ ನಿನ್ನ ರಕ್ತದ ಅಗತ್ಯ ಇಲ್ಲ’ ಎಂದು ಹೇಳಿದರು. ಆಗ ಕೆಲವು ಪ್ರಾಣಿಗಳು ನಾವು ಮಾತನಾಡುವುದು ಬಿಟ್ಟು ಧೈರ್ಯದಿಂದ ರಕ್ತ ಕೊಡಲು ವೈದ್ಯರ ಹತ್ತಿರ ಹೋಗಲೇ ಇಲ್ಲ ಎನ್ನುವ ತಪ್ಪಿನ ಅರಿವು ಮಾಡಿಕೊಂಡವು.

ಇರುವೆಯ ಸಾಹಸ ಮತ್ತು ಧೈರ್ಯ ಮೆಚ್ಚಿ ಎಲ್ಲಾ ಪ್ರಾಣಿಗಳು ಕೊಂಡಾಡಿದವು.

ಕೃಪೆ: ಬಸವರಾಜ.ರಾ.ಅಗಸರ ( ಸಾಮಾಜಿಕ ಜಾಲತಾಣ)

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!