ಶೃಂಗೇರಿ, (ಸೆ.20); ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಶೃಂಗೇರಿ ಶಾರದಾಂಬ ದೇವಸ್ಥಾನದಲ್ಲಿ ಕೆಲವು ದಿನಗಳ ಇಂದೆ ಅಷ್ಟೇ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವಸ್ಥಾನಕ್ಕೆ ಬರುವ ಆದೇಶವನ್ನು ಜಾರಿಗೆಗೊಳಿಸಿತ್ತು.
ಯಾವುದೇ ಬೇರೆ ರೀತಿಯ ಹುಡುಗೆಗಳನ್ನು ತೊಟ್ಟು ದೇವಸ್ಥಾನಕ್ಕೆ ಬರುವುದನ್ನು ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದು, ಇದರ ಬಳಿಕ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಕೂಡ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಲಾಗಿದೆ.
ಹೊರನಾಡಿನಲ್ಲಿ ಇರುವ ಅನ್ನಪೂರ್ಣೇಶ್ವರಿ ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ ಜಾರಿ ಗೊಳಿಸಲಾಗಿದೆ. ದೇವಾಲಯದ ಎಂದು ಆಡಳಿತ ಮಂಡಳಿಯಿಂದ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ; Doddaballapura: ಗ್ರಾಮಲೆಕ್ಕಾಧಿಕಾರಿ ಮೇಲೆ ಹಲ್ಲೆ.
ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ಸೂಚನೆ ಹೊರಡಿಸಲಾಗಿದೆ.
ಸಾಂಪ್ರದಾಯಿಕ ಉಡುಗೆ ಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ಆದೇಶ ಹೊರಡಿಸಿದ್ದು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆ ಕಡ್ಡಾಯವಾಗಿ ತೊಟ್ಟು ಬರಬೇಕೆಂದು ದೇವಾಲಯ ಆಡಳಿತ ಮಂಡಳಿ ಮನವಿ ಮಾಡಿದೆ.