ದೊಡ್ಡಬಳ್ಳಾಪುರ ಬಳಿ ಕ್ವಿನ್ ಸಿಟಿ.. ಅಂದ್ರೇನು? ಅಲ್ಲಿ ಏನಿರುತ್ತೆ..?| Doddaballapura

ಬೆಂಗಳೂರು: ಜ್ಞಾನ, ಆರೋಗ್ಯ ಮತ್ತು ಸಂಶೋಧನೆಯನ್ನು ಸಮಗ್ರವಾಗಿ ಸಂಯೋಜಿಸಲಿರುವ, ರಾಜ್ಯದ ಅರ್ಥ ವ್ಯವಸ್ಥೆ ಮರುವ್ಯಾಖ್ಯಾನಿಸಲಿರುವ ಹಾಗೂ ಕರ್ನಾಟಕದ ವಿಶಿಷ್ಟ ಹೆಗ್ಗುರುತೂ ಆಗಲಿರುವ ಹೊಸ ʼಕ್ವಿನ್‌ ಸಿಟಿʼ ಅಂದ್ರೆ ಏನು? ಅಲ್ಲಿ ಏನಿರುತ್ತೆ?

ಬನ್ನಿ ಈ ಬಗ್ಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಪೂರ್ಣ ವಿವರಣೆ ನೀಡಿದ್ದಾರೆ.

ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು (Knowledge, Wellbeing, and Innovation City- KWIN City ) ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್‌ ಲಿವಿಂಗ್‌ʼ ಪರಿಕಲ್ಪನೆ ಕಾರ್ಯರೂಪಕ್ಕೆ ತರಲು ದೊಡ್ಡಬಳ್ಳಾಪುರ ಮತ್ತು ದಾಬಸ್‌ಪೇಟೆ ಮಧ್ಯೆ ಅಸ್ತಿತ್ವಕ್ಕೆ ಬರಲಿದೆ.

ಕ್ವಿನ್‌ ಸಿಟಿ ಅಂದರೆ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ. ಇವುಗಳ ನಡುವಣ ಸಮನ್ವಯತೆಯು ಆರ್ಥಿಕ ಬೆಳವಣಿಗೆ ಉತ್ತೇಜಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಮುನ್ನಡೆಸಲಿದೆ. ಯೋಜಿತ ನಗರವಾಗಿ ಕ್ವಿನ್‌ ಸಿಟಿಯು ಅತ್ಯಾಧುನಿಕ ತಂತ್ರಜ್ಞಾನ ಸಂಯೋಜಿಸುವ ಮೂಲಕ ಪರಿಸರ ಸ್ನೇಹಿ ಮೂಲಸೌಲಭ್ಯಗಳ ನೆರವಿನಿಂದ ಹೊಸ-ಯುಗದ, ಸುಸ್ಥಿರ ಜೀವನಶೈಲಿ ಒದಗಿಸಲಿದೆ. ಸ್ವಾವಲಂಬನೆಯ ನೀರು ಮತ್ತು ವಿದ್ಯುತ್ ಸೌಲಭ್ಯಗಳೊಂದಿಗೆ ಭವಿಷ್ಯದ ಸ್ಮಾರ್ಟ್ ನಗರಗಳಿಗೆ ಆದರ್ಶ ಉದಾಹರಣೆಯಾಗಿರಲಿದೆ ಎಂದು ಪಾಟೀಲ ವಿವರಿಸಿದರು.

ʼಕ್ವಿನ್‌ ಸಿಟಿʼಯ ದೂರದೃಷ್ಟಿ ಸಾಕಾರಗೊಳಿಸಲಿರುವ ಪ್ರಮುಖ ಜಿಲ್ಲೆಗಳು:

ಜ್ಞಾನ ಜಿಲ್ಲೆ:  ಪ್ರತ್ಯೇಕ ಜ್ಞಾನ ಕೇಂದ್ರದೊಂದಿಗೆ, ಕ್ವಿನ್‌ ಸಿಟಿ-ಯು ಆಧುನಿಕ ಪಠ್ಯಕ್ರಮ ಮತ್ತು ಉನ್ನತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಒಳಗೊಂಡ ಪ್ರಧಾನ ಶಿಕ್ಷಣ ಕೇಂದ್ರ  ಸ್ಥಾಪಿಸಲು ಬಯಸುತ್ತದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಾವಳಿಗಳನ್ನು  ಆಧರಿಸಿ   ಕ್ಯಾಂಪಸ್‌ಗಳನ್ನು ನಿರ್ವಹಿಸಲು 500 ಉನ್ನತ ವಿದೇಶಿ ಶಿಕ್ಷಣ ಸಂಸ್ಥೆಗಳನ್ನು ಆಕರ್ಷಿಸುವ ಗುರಿಯನ್ನು ನಗರವು  ಹೊಂದಿದೆ. ಇದು ಕರ್ನಾಟಕವನ್ನು ಜಾಗತಿಕ ಶಿಕ್ಷಣದ ಕ್ಷೇತ್ರದ ಮುಂಚೂಣಿಗೆ ಕೊಂಡೊಯ್ಯುವ ಶೈಕ್ಷಣಿಕ ವಲಯ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಉತ್ತೇಜಿಸಲಿದೆ.

ಆರೋಗ್ಯ ಜಿಲ್ಲೆ: ಜೀವ ವಿಜ್ಞಾನ (ಲೈಫ್ ಸೈನ್ಸಸ್) ಪಾರ್ಕ್  ಒಳಗೊಂಡಿರುವ  ಕ್ವಿನ್‌ ಸಿಟಿಯು ಏಷ್ಯಾದ ಪ್ರಮುಖ ಶೈಕ್ಷಣಿಕ ವೈದ್ಯಕೀಯ ಕೇಂದ್ರವಾಗಿ ಬೆಳೆಯಲಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಆಸ್ಪತ್ರೆಗಳನ್ನು ಆಕರ್ಷಿಸುವ ಮೂಲಕ ಆರೋಗ್ಯ ರಕ್ಷಣೆಯ ಭವಿಷ್ಯವನ್ನು ರೂಪಿಸಲಿದೆ. ಈ ಉಪಕ್ರಮವು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕದ ಸ್ಥಾನಮಾನವನ್ನು ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಮಟ್ಟಕ್ಕೆ ಏರಿಸಲಿದೆ. ಇದು ಆರೋಗ್ಯದ ಶ್ರೇಷ್ಠತೆಗೆ ದಾರಿದೀಪವಾಗಿರಲಿದೆ.

ನಾವೀನ್ಯತಾ ಜಿಲ್ಲೆ: ಕ್ವಿನ್‌ ಸಿಟಿಯು ಜೀವ ವಿಜ್ಞಾನ, ಭವಿಷ್ಯದ ಸಂಚಾರ, ಸೆಮಿಕಂಡಕ್ಟರ್‌, ಸುಧಾರಿತ ಪರಿಕರ, ಆಧುನಿಕ ತಯಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣೆ ಹಾಗೂ ಬಾಹ್ಯಾಕಾಶ ತಂತ್ರಜ್ಞಾನದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ಉದ್ಯಮ ವಲಯಗಳ ಅಗತ್ಯಗಳನ್ನು ಪೂರೈಸಲಿದೆ. ಜಾಗತಿಕ ಬದಲಾವಣೆಗಳು ಮತ್ತು ಮಾರುಕಟ್ಟೆ ಬೇಡಿಕೆಗಳಿಗೆ ಹೊಂದಿಕೊಳ್ಳುವ ಮೂಲಕ, ಕ್ವಿನ್‌ ಸಿಟಿಯು ವಿಶಾಲವಾದ ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕದ ಪಾತ್ರವನ್ನು ಹೆಚ್ಚಿಸುವ ಗುರಿ  ಹೊಂದಿದೆ, ನಿರಂತರವಾದ ನಾವೀನ್ಯತೆಯ ವಾತಾವರಣ  ಉತ್ತೇಜಿಸಲಿದೆ.

ಸಂಶೋಧನಾ ಜಿಲ್ಲೆ: ಜೈವಿಕ ಔಷಧ ಮತ್ತು ವೈಜ್ಞಾನಿಕ ಸಂಶೋಧನೆ ಹೆಚ್ಚಿಸಲು ಮೀಸಲಾಗಿರುವ  ಕ್ವಿನ್‌ ಸಿಟಿಯು ಕ್ಲಿನಿಕಲ್ ಪ್ರಯೋಗ ಕೇಂದ್ರಗಳು ಮತ್ತು ಸಂಶೋಧನಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಿದೆ. ಇದು ಜಾಗತಿಕ ಜ್ಞಾನ ಆಧಾರಿತ ಆರ್ಥಿಕತೆಗೆ ಗಣನೀಯವಾಗಿ ಕೊಡುಗೆ ನೀಡುವ, ಪ್ರಕಾಶನ, ಸೆಮಿನಾರ್‌ ಮತ್ತು ಸಾರ್ವಜನಿಕ ಉಪನ್ಯಾಸಗಳ ಮೂಲಕ   ಸಂಶೋಧನೆಗಳ ಪ್ರಸಾರವನ್ನು ಉತ್ತೇಜಿಸಲಿದೆ.

ಕ್ವಿನ್‌ ಸಿಟಿ-ಯು ಅಭಿವೃದ್ಧಿಗಿಂತ ಹೆಚ್ಚಿನದಾಗಿದೆ. ಇದು ಭವಿಷ್ಯದ ಕಡೆಗಿನ ಒಂದು ದಿಟ್ಟ ಹೆಜ್ಜೆಯಾಗಿದೆ. ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಾಗಿ ವಿಶ್ವ ದರ್ಜೆಯ ಕೇಂದ್ರವನ್ನು ನಿರ್ಮಿಸಲಿದೆ.

ಮಾಹಿತಿಗೆ  kwincity.com ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!