ಕಾಂಗ್ರೆಸ್ ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲು; ಬಿಜೆಪಿ ವಿರುದ್ಧ ಯತ್ನಾಳ್ ಗಂಭೀರ ಆರೋಪ

ವಿಜಯಪುರ: ಕಾಂಗ್ರೆಸ್ ಸರ್ಕಾರ ಉರುಳಿಸಲು ಕೆಲವರು ಯತ್ನ ಮಾಡುತ್ತಿದ್ದು ಇದಕ್ಕಾಗಿ 1 ಸಾವಿರ ಕೋಟಿ ಮೀಸಲು ಇಟ್ಟಿದ್ದಾರೆ ಎಂದು ಸ್ವಪಕ್ಷದ ವಿರುದ್ಧವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿಯಲ್ಲಿ ರಣ ತಂತ್ರ ನಡೆಯುತ್ತಿದೆ. ಎಷ್ಟೋ ಮಂದಿಗೆ ಮುಖ್ಯಮಂತ್ರಿ ಆಗಬೇಕು ಎನ್ನುವುದಿರುತ್ತದೆ. ಅದಕ್ಕಾಗಿ ಎಷ್ಟೋ ಮಂದಿ ಈಗಾಗಲೇ ಸಿಎಂ ಆಗಲು 1 ಸಾವಿರ ಕೋಟಿ ರೂ. ರಿಸರ್ವ್ ಮಾಡಿಟ್ಟಿದ್ದಾರೆ. ಸರ್ಕಾರ ಒಡೆದು ಮುಖ್ಯಮಂತ್ರಿ ಆಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೊಸಬಾಂಬ್ ಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಅಂತ ಕಾಯುತ್ತಿದ್ದಾರೆ. ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ.ಡಿಸೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್‌ ಸರ್ಕಾರ ಬಿದ್ದು ಹೋಗಲಿದೆ ಎಂದು ಭಾವಿಸಿಕೊಂಡಿದ್ದಾರೆ

ಎಂದು ಪರೋಕ್ಷವಾಗಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಹೇಳದೆ ಆರೋಪಿಸಿದರು. ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಹೈಕಮಾಂಡ್ ಗೆ ಯಾರು ಎರಡೂವರೆ ಸಾವಿರ ಕೋಟಿ ರೂ. ಕೊಡುತ್ತಾರೋ ಅವರಿಗೆ ಮುಖ್ಯಮಂತ್ರಿ ಪಟ್ಟಿ ಒಲಿಯುತ್ತದೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದರು. ಈಗ, ಬಿಜೆಪಿ ನಾಯಕರೊಬ್ಬರು ಸಿಎಂ ಆಗಲು 1000 ಕೋಟಿ ರೂ. ಕೂಡಿಟ್ಟುಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆದರೆ, ಸಾವಿರ ಕೋಟಿ ರೂ. ಕೂಡಿಟ್ಟುಕೊಂಡಿರುವ ಬಿಜೆಪಿ ನಾಯಕ ಯಾರು ಎಂಬುದನ್ನು ಬಹಿರಂಗಪಡಿಲಿಲ್ಲ.

ಕಾಂಗ್ರೆಸ್ ಸರ್ಕಾರವನ್ನು ಕೆಡವಲು ನಮ್ಮ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಅಸ್ಥಿರಗೊಳಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅವರು ಮುಖ್ಯಮಂತ್ರಿಯಾಗಲು ನಾವು ಬೆಂಬಲ ಕೊಡಬೇಕಲ್ಲವೇ?. ಕಳೆದ ಬಾರಿಯಂತೆ ಎಲ್ಲಾ ಶಾಸಕರು ಆ ನಾಯಕತ್ವಕ್ಕೆ ಮನ್ನಣೆ ಕೊಡುವುದಿಲ್ಲ. ಸರ್ಕಾರ ರಚನೆ ಅವರು ಅಂದುಕೊಂಡಷ್ಟು ಸರಳವಾಗಿಲ್ಲ ಎಂದು ಹೇಳಿದರು.

ಸಿಎಂ ಆಗಬೇಕೆಂದು ಎಲ್ಲರಿಗೂ ಇಷ್ಟವಿರುತ್ತದೆ. ಆದರೆ, ಅದೃಷ್ಟ ಇದ್ದವರಿಗಷ್ಟೇ ಆಗುತ್ತೆ ಎಂದು ಮಾತು ಆರಂಭಿಸಿದ ಅವರು, ರಾಜ್ಯದಲ್ಲಿ ಇದೇ ವರ್ಷ ಡಿಸೆಂಬರ್ ನಲ್ಲಿ ದೊಡ್ಡದಾದ ರಾಜಕೀಯ ಕ್ರಾಂತಿಯೊಂದನ್ನು ಮಾಡಲು ಹಲವಾರು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ತಾವು ಮುಖ್ಯಮಂತ್ರಿಯಾಗಲು ಬಿಜೆಪಿಯ ಒಬ್ಬ ನಾಯಕರು 1000 ಕೋಟಿ ರೂ.ಗಳನ್ನು ಕೂಡಿಟ್ಟುಕೊಂಡಿಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕೆಲವರಿಗೆ ಶಾಸಕರನ್ನು ಖರೀದಿ ಮಾಡುವುದು ತುಂಬಾ ಸರಳವಾಗಿದೆ. ಏಕೆಂದರೆ ಹಿಂದೆಯೂ ಇದೇ ರೀತಿ ಖರೀದಿ ಮಾಡಿಯೇ ಕೆಲವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆದರ ಚಾಳಿ ಈಗ ಕೆಲವರು ಮುಂದುವರೆಸಿಕೊಂಡು ಹೋಗಲು ಸಜ್ಜಾಗಿದ್ದಾರೆ. ಪಕ್ಷದ ಹೈ ಕಮಾಂಡ್ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಯತ್ನಾಳ್ ಹೇಳಿದರು.

ಕೆಲವರಿಗೆ ಯಾರು ಬೇಕಾಗಿಲ್ಲ. ಮುಖ್ಯಮಂತ್ರಿ ಗಾದಿ ಬೇಕಾಗಿದೆ ಅಷ್ಟೇ. ನಮಗೆ ಪಕ್ಷದ ಹಿತ ಮುಖ್ಯ. ಸ್ಥಾನಮಾನಕ್ಕಾಗಿ ಪಕ್ಷವನ್ನು ಒಬ್ಬರ ಕೈಯಲ್ಲಿ ಕೊಡಲು ಸಾಧ್ಯವಿಲ್ಲ. ಹಿಂದೆ ಒಬ್ಬರಿಗೆ ಎಲ್ಲವನ್ನೂ ಕೊಟ್ಟಿದ್ದಕ್ಕೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಆಪರೇಷನ್ ಕಮಲಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಹೇಳಿದ ಅವರು, ಕಳೆದ ಬಾರಿ ಆಪರೇಷನ್ ಕಮಲ ಮಾಡಿದಾಗ ಬಂದಿದ್ದ 17 ಮಂದಿಯಿಂದಲೇ ಬಿಜೆಪಿಯ ಅವಸಾನವಾಗಿದು. ಈಗ ಮತ್ತೆ ಅಂಥ ಪರಿಸ್ಥಿತಿ ಬರುವುದು ಬೇಡ ಎಂದರು.

ಕಾಂಗ್ರೆಸ್ ಸರ್ಕಾರ ಬಿದ್ದ ಸಂದರ್ಭದಲ್ಲಿ ನಾವು ಚುನಾವಣೆಗೆ ಹೋಗಬೇಕು. ಜನರ ಆಶೀರ್ವಾದ ಪಡೆದು ಗೆದ್ದು ಅಧಿಕಾರಕ್ಕೆ ಬರಬೇಕು. ಆ ಮೂಲಕ, ಆಪರೇಷನ್ ಕಮಲ ಮುಂತಾದ ಭ್ರಷ್ಟಾಚಾರ ವ್ಯವಸ್ಥೆಯನ್ನು ಕೊನೆಗಾಣಿಸಬೇಕು ಎಂದು ಅವರು ಗುಡುಗಿದರು.

ಬೆಳಗಾವಿಯಲ್ಲಿ ಸಭೆ ಆದಮೇಲೆ ರಾಷ್ಟ್ರೀಯ ಸ್ವಯಂ ಸಂಘದ ಸಭೆ ಆಗಿದೆ ಅಲ್ಲಿ ಎಲ್ಲಾ ಹೇಳಿದ್ದೆವೆ. ನಮ್ಮ ಪಕ್ಷದ ಮುಖಂಡರಿಗೆ ತಿಳಿಸುವ ಕೆಲಸ ಮಾಡಿದ್ದೇವೆ. ಯಾರು ಬಿಜೆಪಿ ಮಹಾನ್ ನಾಯಕರು ಯಾರು ಬರುವುದಿಲ್ಲ. ದಾವಣಗೆರೆ ಯಲ್ಲಿ ಗಣೇಶ್ ವೇಳೆ ಗಲಾಟೆ ಆಗಿದೆ ಅದರ ಸಂಬಂದ ಬಂದಿದ್ದೇವೆ ಎಂದು ಯತ್ನಾಳ್ ಹೇಳಿದರು.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!