Site icon ಹರಿತಲೇಖನಿ

ಅಭಿಮಾನಿಗಳಿಗೆ ಮತ್ತೆ ನಿರಾಸೆ; ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು; ವ್ಯಕ್ತಿಯೋರ್ವನ ಕೊಲೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಮುಂದೂಡಿದೆ.

ಇದೀಗ ದರ್ಶನ್​ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್​ 4ಕ್ಕೆ ಮುಂದೂಡಿದೆ.

ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತನಾಡಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಕೋರಿದ್ದಾರೆಂದು ವರದಿಯಾಗಿದೆ.

Exit mobile version