ತಲೆಹಿಡುಕ ರಾಜಕಾರಣ ಮಾಡಲ್ಲ: ಬಿವೈ ವಿಜಯೇಂದ್ರ| ವಿಡಿಯೋ

ಬೆಂಗಳೂರು: ಬೇರೆಯವರಂತೆ ತಲೆಹಿಡುಕ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ಅದರ ಅಗತ್ಯವೂ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಪಕ್ಷವನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆಯಿದೆ ಎಂದು ಬಿ.ವೈ.ವಿಜಯೇಂದ್ರ (BY Vijayendra) ಹೇಳಿದರು.

ಶಿಕಾರಿಪುರ ಕ್ಷೇತ್ರದ ಮುಖಂಡರ ಜತೆಗೂಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸೋಮವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೆಲವರು ಸ್ವಂತ ಕೆಲಸಗಳಿಗಾಗಿ ಲೆಟರ್ ಹೆಡ್ ಹಿಡಿದುಕೊಂಡು ಮುಖ್ಯಮಂತ್ರಿ, ಮಂತ್ರಿ ಬಳಿ ಓಡಾಡುತ್ತಾರೆ. ನಾನಂತೂ ಆ ಕೆಲಸ ಮಾಡುವುದಿಲ್ಲ ಎಂಬ ಬಸನಗೌಡ ಪಾಟೀಲ ಯತ್ನಾಳ್ ಟೀಕೆಗೆ BY Vijayendra ಉತ್ತರಿಸಿದರು.

ಶಾಸಕನಾಗಿ ಪ್ರತಿನಿಧಿಸುವ ಕ್ಷೇತ್ರದ ಜನರ ಕುಂದುಕೊರತೆಗೆ ಸ್ಪಂದಿಸುವುದು ನನ್ನ ಜವಾಬ್ದಾರಿ. ಶಿಕಾರಿಪುರ ಕ್ಷೇತ್ರದ ಕುಟ್ರಳ್ಳಿ ಟೋಲ್ ನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ಟೋಲ್ ಗೇಟ್ ಸ್ಥಳಾಂತರಿಸಲು ಮನವಿ ಮಾಡಲು ಮುಖಂಡರ ಜತೆ ಭೇಟಿ ಮಾಡಿದ್ದೇನೆ ಅಷ್ಟೇ ಎಂದರು.

ಪಕ್ಷದ ರಾಜ್ಯಾಧ್ಯಕ್ಷನಾಗಿ ಹೇಗೆ ನಡೆದುಕೊಳ್ಳಬೇಕು, ಏನು ಮಾಡಬೇಕು ಎಂದು ಗೊತ್ತಿದೆ. ಬೇರೆಯವರಿಂದ ಕಲಿಯುವ ಅಗತ್ಯವಿಲ್ಲ, ಅವರೂ ಹೇಳಿಕೊಡಬೇಕಾಗಿಲ್ಲ.

ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಹೇಗೆ ನಡೆದುಕೊಂಡರು ಎಂದು ರಾಜ್ಯದ ಜನರಿಗೆ ಗೊತ್ತಿದೆ. ಅವರ ಮಗನಾಗಿ ನಾನು ಬಲ್ಲವನಾಗಿದ್ದು, ಬೇರೆಯವರು ಪಾಠ ಹೇಳಬೇಕಾಗಿಲ್ಲ ಎಂದು BY Vijayendra ಚಾಟಿ ಬೀಸಿದರು.

ಕಾಂಗ್ರೆಸ್ ನ ಆಂತರಿಕ ಬೆಳವಣಿಗೆಗೂ ಸತೀಶ ಜಾರಕಿಹೊಳಿ ಭೇಟಿಗೂ ಯಾವುದೇ ಸಂಬಂಧವಿಲ್ಲ. ಕ್ಷೇತ್ರದ ಸಮಸ್ಯೆ ಹೊರತಾಗಿ ರಾಜಕೀಯ ವಿಷಯದ ಬಗ್ಗೆ ಚರ್ಚಿಸಿಲ್ಲ ಎಂದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಎಂದು ಹೆಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲೇ ಚನ್ನಪಟ್ಟಣ ಜೆಡಿಎಸ್ ಅಧ್ಯಕ್ಷ ಜಯಮುತ್ತು ಘೋಷಣೆ ಬಗ್ಗೆ ಬಿ.ವೈ.ವಿಜಯೇಂದ್ರ ಉತ್ತರಿಸಿ, ಯಾರು ಏನು ಹೇಳಿದ್ದಾರೆ ಅನ್ನೋದಕ್ಕಿಂತ ಕುಮಾರಸ್ವಾಮಿ ಏನು ಹೇಳಿದ್ದಾರೆ ಅನ್ನೋದು ಮುಖ್ಯವೆಂದರು.

ಅಭ್ಯರ್ಥಿ ಯಾರಾಗಬೇಕು ಎಂದು ಕುಮಾರಸ್ವಾಮಿ, ನಾವು, ರಾಷ್ಟ್ರೀಯ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ರಾಷ್ಟ್ರೀಯ ನಾಯಕರು ತೀರ್ಮಾನವೇ ಅಂತಿಮ. ಕ್ಷೇತ್ರದಲ್ಲಿ ಎರಡೂ ಪಕ್ಷಗಳಿಗೂ ಗೆಲ್ಲುವ ಸಾಧ್ಯತೆ ಇದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ನೀಡಬೇಕು ಎಂಬ ನಮ್ಮ ಒತ್ತಾಯದ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅದೇನು ಪ್ಲಾನ್ ಜತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿದ್ದಾರೆ. ಫೋಟೊದಲ್ಲಿ ಬಿಲ್ಡಿಂಗ್ ನಕ್ಷೆ ಮಾತ್ರ ಕಾಣುತ್ತಿದ್ದು, ಅದೇನು ಪ್ಯಾನ್ ಮಾಡಿದ್ದಾರೋ ತಿಳಿಯದು ಎಂದು ವಿಜಯೇಂದ್ರ ಹೇಳಿದರು.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಆಲಹಳ್ಳಿ ಮೇಲ್ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿದ್ಯಾನಗರ ನಿವಾಸಿ 55 ವರ್ಷದ

[ccc_my_favorite_select_button post_id="103988"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!