ಹೊಟ್ಟೆಪಾಡಿಗೆ ಜೊತೆಗಿರುವವರ ವಿಷಕಾರಿ ಮಾತು ನಂಬಬೇಡಿ: ಶಾಸಕ ಧೀರಜ್ ಮುನಿರಾಜುಗೆ ಕಾಂಗ್ರೆಸ್ ಮುಖಂಡರ ಸಲಹೆ

ದೊಡ್ಡಬಳ್ಳಾಪುರ; ಬಿಜೆಪಿಯಿಂದ ನಗರಸಭೆಯಲ್ಲಿ ಎರಡು ಬಾರಿ ಸದಸ್ಯನಾಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷನಾಗಿ ಶ್ರಮವಹಿಸಿ ಪಕ್ಷವನ್ನು ಸಂಘಟಿಸಿದ್ದೇನೆ. ನಾವುಗಳು ಕಟ್ಟಿರುವ ಹುತ್ತದಲ್ಲಿ (ಮನೆಯಲ್ಲಿ) ಹಣ ಬಲದೊಂದಿಗೆ ಬಂದು ಸೇರಿಕೊಂಡು ಪಕ್ಷದಲ್ಲಿ ಹಾಗೂ ನಗರಸಭೆ ಸದಸ್ಯರಲ್ಲಿ ವಿಷ ಬೀಜ ಬಿತ್ತುವ ಮೂಲಕ ಶಾಸಕ ಧೀರಜ್ ಮುನಿರಾಜು ತಾರತಮ್ಯ ದೋರಣೆ ಮಾಡುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್ ದೂರಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಚುನಾವಣೆ ವೇಳೆ ಈಗಿನ ಬಿಜೆಪಿಯ ಶಾಸಕರು ಸೇರಿದಂತೆ ಘಟಾನುಘಟಿ ಮುಖಂಡರು ನನ್ನನ್ನು ಸೋಲಿಸಲು ಶ್ರಮವಹಿಸಿದರು. ಆದರೆ ಜನರ ವಿಶ್ವಾಸದಿಂದ ಎರಡು ಬಾರಿ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ನಾವು ಎಂದಿಗೂ ವಿಷ ಇಟ್ಟಿಲ್ಲ. ಆದರೆ ಹೊಟ್ಟೆ ಪಾಡಿಗಾಗಿ ಮಾನ್ಯ ಶಾಸಕರ ಜೊತೆ ಸೇರಿರುವವರು ಇಲ್ಲ ಸಲ್ಲದ ವಿಷವನ್ನು ಹೇಳಿ ಶಾಸಕರ ದಾರಿ ತಪ್ಪಿಸುತ್ತಿದ್ದಾರೆ.

ಶಾಸಕರು ಆಯ್ಕೆಯಾಗಿ ಒಂದುವರೆ ವರ್ಷ ಕಳೆದರು ಸಹ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದಲ್ಲ.. ಕನಿಷ್ಠ ರಸ್ತೆಗಳಲ್ಲಿ ಬಿದ್ದಿರುವ ಒಂದು ಗುಂಡಿಯನ್ನು ಮುಚ್ಚಿಸಲು ಸಾಧ್ಯವಾಗಿಲ್ಲ.

ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ದಪಡಿಸುವಾಗ ಸ್ಥಳೀಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಶಾಸಕ ಧೀರಜ್ ಮುನಿರಾಜು ಅವರು ಕೆಲವರ ಮಾತು ಕೇಳಿ ಸರ್ವಾಧಿಕಾರಿಯಂತೆ ಏಕಪಕ್ಷೀಯವಾಗಿ ಕ್ರಿಯಾಯೋಜನೆಗಳನ್ನು ರೂಪಿಸುವ ಮೂಲಕ ಸದಸ್ಯರನ್ನು ಕಡೆಗಣಿಸಿ, ಬಿಜೆಪಿ, ಜೆಡಿಎಸ್ ಸದಸ್ಯರು ಇರುವ ವಾರ್ಡ್ಗಳಿಗೆ ಮಾತ್ರ ಅನುದಾನ ನೀಡಿದ್ದಾರೆ. ಶಾಸಕರು ಯುವಕರಿದ್ದೀರಿ, ಇನ್ನೂ ಅನೇಕ ವರ್ಷ ರಾಜಕಾರಣ ಮಾಡಬೇಕಿದೆ.. ವಾಸ್ತವ ತಿಳಿದುಕೊಳ್ಳಿ.

ಅಲ್ಪಸಂಖ್ಯಾತರು ವಾಸ ಮಾಡುವ ಪ್ರದೇಶದಲ್ಲಿ ಮಾತ್ರ ಕಾಮಗಾರಿ ಕೈಗೊಳ್ಳಲು ನೀಡಲಾಗಿದ್ದ ಅನುದಾನವನ್ನು ಶಾಸಕರು ಕೆಲವರ ಮಾತು ಕೇಳಿ ತಾರತಮ್ಯ ನೀತಿ ಅನುಸರಿಸುವ ಮೂಲಕ ತಮಗೆ ಇಷ್ಟ ಬಂದ ವಾರ್ಡ್ಗಳಲ್ಲಿ ಅಲ್ಪಸಂಖ್ಯಾತರು ಇಲ್ಲದೇ ಇರುವಲ್ಲೂ ಕಾಮಗಾರಿಗಳನ್ನು ಮಾಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಅಲ್ಪಸಂಖ್ಯಾತರ ವಾರ್ಡ್ಗಳಿಗು ಸಹ ಹಣ ನೀಡಿಲ್ಲ ಎಂದು ದೂರಿದರು.

ನಗರಸಭೆಯಿಂದ ನಿರ್ಮಾಣ ಹಂತದಲ್ಲಿರುವ ವಿದ್ಯುತ್ ಚಿತಾಗಾರವನ್ನು ರಿಯಲ್ ಎಸ್ಟೇಟ್ ಮಾಫಿಯಾಗೆ ಮಣಿದು ನಗರದಿಂದ ದೂರದ ಓಬದೇನಹಳ್ಳಿ ಬಳಿ ನಿರ್ಮಿಸಲು ಷಡ್ಯಂತ್ರ ನಡೆದಿದೆ ಇದಕ್ಕೆ ಕಾರಣ ಯಾರು..?

ಕಾಂಗ್ರೆಸ್ ಸರ್ಕಾರ ಬಿಜಿಪಿ ಶಾಸಕರು ಇರುವ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿದೆ‌. ಇದು ಶಾಸಕರದ್ದೇ ಮಾತು. ಆದರೆ ಕಾಂಗ್ರೆಸ್ ಸದಸ್ಯರು ಇರುವ ವಾರ್ಡ್ಗೆ ಅನುದಾನ ನೀಡದೆ ರಾಜಕೀಯ ಮಾಡ್ತಾ ಇರೋದು ಯಾರು‌‌..?

ನಗರಸಭೆಯಿಂದ ಅಳವಡಿಸಲು ಸಿದ್ದವಾಗಿದ್ದ ಹೋರ್ಡಿಂಗ್ ಬಿಚ್ಚಿಸಿದವರು ಯಾರು..? ಪ್ರತಿಭಟನೆ ವೇಳೆ ನಾವ್ ಮಾತಾಡಿದ್ ಏನು..? ನಮ್ಮ ಒತ್ತಾಯ ಏನು..? ಯಾರದೋ ಮಾತು ಕೇಳಿ ಸುದ್ದಿಗೋಷ್ಠಿ ಮಾಡಿ ಶಾಸಕರು ಆರೋಪಿಸಿದ್ ಏನು..? ಕಾಮಾಗಾರಿ ಆರಂಭಕ್ಕು ಮುನ್ನಾ ಶಿಷ್ಟಾಚಾರ ಪಾಲನೇ ಮಾಡಿ, ಕಾನೂನನಾತ್ಮಕವಾಗಿ ಕಾಮಗಾರಿ ಮಾಡಿ ಯುವಕರಿದ್ದೀರಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡಿ ಎಂಬುದು ಅಭಿವೃದ್ಧಿಗೆ ಅಡ್ಡಿಯೇ..?

ಸರ್ವಾಧಿಕಾರಿ ಧೋರಣೆ ಬಿಟ್ಟು, ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಳ್ಳಿ. ಹೊಟ್ಟೆ ಪಾಡಿಗಾಗಿ ನಿಮ್ ಸುತ್ತ ಸೇರಿರುವವರ ವಿಷದ ಮಾತು ನಂಬಬೇಡಿ. ನೀವು ಆಳವಾಗಿ ಇಳಿದರೆ. ನಾವು ಆಳವಾಗಿ ಹೋಗಲು ಸಿದ್ದರಿದ್ದೇವೆ ಎಂದು ಶಿವಶಂಕರ್ ಸವಾಲು ಎಸೆದರು.

ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಟಿ.ವೆಂಕಟರಣಯ್ಯ ಅವರ ಅವಧಿಯಲ್ಲಿ ನಡೆದಿರುವ ಕೆಲಸಗಳನ್ನು ಹೇಳಿಕೊಂಡು ಕ್ಷೇತ್ರದಲ್ಲಿ ಅಭಿವೃದ್ದಿಯಾಗಿದೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಒಂದುವರೆ ವರ್ಷದ ಇವರ ಸಾಧನೆ ಶೂನ್ಯವಾಗಿದೆ. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿರುವ 3 ಕೋಟಿ ಅನುದಾನದ ಕಾಮಗಾರಿಗಳಲ್ಲಿ ಸರ್ಕಾರದ ಎಲ್ಲಾ ನಿಯಮಗಳನ್ನು ಮೀರಲಾಗಿದೆ.

ಕಪ್ಪುಪಟ್ಟಿಯಲ್ಲಿರುವ ಕೆಆರ್ಡಿಎಲ್ ಸಂಸ್ಥೆ ವತಿಯಿಂದ ಕಾಮಗಾರಿ ಮಾಡಿಸಲಾಗುತ್ತಿದೆ. ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಮಾಡಿಸುತ್ತಿರುವ ಕಳಪೆ ಕೆಲಸಗಳನ್ನು ಪ್ರಶ್ನಿಸುವ ದಲಿತ ಸಮುದಾಯದ ಸದಸ್ಯರನ್ನೇ ನಿಂಧಿಸುವ ಕೆಲಸ ಮಾಡಿದ್ದಾರೆ. ಗುತ್ತಿಗೆದಾರ ಸದಸ್ಯರ ಪರವಾಗಿ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಎಸ್ಸಿ,ಎಸ್ಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲಾಗುವುದು ಎಂದರು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪ್ರಾರಂಭಿಸಲಾದ 100 ಹಾಸಿಗೆ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಒಂದುವರೆ ವರ್ಷಗಳು ಕಳೆದಿದ್ದರು ಉದ್ಘಾಟನೆ ಮಾಡಿಸಿಲ್ಲ. ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಬರುವ ಈ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಮಿಕರ ಸೇವೆ ಲಭ್ಯವಾಗುವಂತೆ ಮಾಡುವಲ್ಲಿ ಕ್ಷೇತ್ರದ ಬಿಜೆಪಿ ಶಾಸಕರು ವಿಫಲರಾಗಿದ್ದಾರೆ ಎಂದು ದೂರಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಮಾತನಾಡಿ, ಶಾಸಕರಾಗಿ ಅಭಿವೃದ್ಧಿ ಮಾಡಲಾಗದೆ ಮತ್ತೊಬ್ಬರ ಬಗ್ಗೆ ಆರೋಪ ಮಾಡ್ತಾ ಇದ್ದಾರೆ. ಚುನಾವಣೆಯಲ್ಲಿ ತಾಲೂಕಿನ ಜನರ ತೀರ್ಪನ್ನು ನಾವು ಒಪ್ಪಿದ್ದೇವೆ. ಅದರಂತೆ ನೂತನ ಶಾಸಕರು ಕಾರ್ಯನಿರ್ವಹಿಸಲಿ. ಅದು ಬಿಟ್ಟು ಅಭಿವೃದ್ಧಿ ಮಾಡಲಾಗದೆ ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸಲ್ಲದು.

ತಾಲೂಕಿನ ಅಭಿವೃದ್ಧಿ ಮಾಡುವುದು ಶಾಸಕರ ಜವಾಬ್ದಾರಿ, ತಾಲೂಕಿಗೆ ಶಾಸಕರ ಕೊಡುಗೆ ಏನು..? ನಗರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ, ಎಸ್‌ಟಿಪಿ, ಟಿಎಸ್ಪಿ ಸೇರಿದಂತೆ ಯಾವ ಯೋಜನೆಯನ್ನು ತಾಲೂಕಿಗೆ ತಂದಿದ್ದೀರಿ ಹೇಳಿ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆಪಿ ಜಗನಾಥ್, ಕೆಪಿಸಿಸಿ ಸದಸ್ಯ ಹೇಮಂತ್ ರಾಜ್, ನಗರಸಭೆ ಸದಸ್ಯರಾದ ಆನಂದ್ ಕುಮಾರ್, ಅಲ್ತಾಪ್, ಶಿವಣ್ಣ, ರೂಪಿಣಿ ಮಂಜುನಾಥ್, ಅಖಿಲೇಶ್, ನಾಗವೇಣಿ, ರಜಿನಿ ಸುಬ್ರಮಣಿ, ನಾಗರಾಜ್ ಮುಖಂಡರಾದ ಶ್ರೀನಿವಾಸ್, ಜನಪರ ಮಂಜು, ರಘುನಂದನ್ ಮತ್ತಿತರರಿದ್ದರು.

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!