ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

Channel Gowda
Hukukudi trust

ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

hulukudi maharathotsava
Aravind, BLN Swamy, Lingapura

ಬೆಂಗಳೂರಿನಲ್ಲಿ ಗುರುವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ತಪ್ಪಾಗಿದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ

ಕೆಐಒಸಿಎಲ್ ಬಗ್ಗೆ ರಾಜ್ಯ ಸರಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಅದರ ಹೊರತಾಗಿ ರಾಜ್ಯದ ಹಿತಾಸಕ್ತಿಯ ಬಗ್ಗೆ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

Hulukudi mahajathre
Aravind, BLN Swamy, Lingapura

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ

ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ. ಅದರ ಹೊರತಾಗಿ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಿದರೆ ಅವರನ್ನು ಸಚಿವರು ಎಂದು ಕರೆಯಲಾಗುತ್ತದೆಯೇ ಎಂದು ಅವರು ಕಿಡಿಕಾರಿದರು.

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ

ರಾಜ್ಯ ಸರ್ಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ. ಸಮಸ್ಯೆ ಬಗ್ಗೆ ಸಿಎಂ ಸಭೆ ಕರೆಯಲಿ. ಏನು ಸಮಸ್ಯೆ ಇದೆ ಅಂತಾ ಚರ್ಚೆ ಮಾಡೋಣ. ಸಮಸ್ಯೆ ಇದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

RNIL ಉದಾಹರಣೆ

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಾಸೆಯ ಮೇರೆಗೆ ಕೇವಲ ನಲವತ್ತೆಂಟು ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಲಾಯಿತು.

ನೆರೆ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಯಾರೂ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ

ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ.

ಎಂ.ಬಿ.ಪಾಟೀಲ್ ಒಬ್ಬರು ದೆಹಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ನನ್ನೊಂದಿಗೆ ರಾಜ್ಯದ ಬಗ್ಗೆ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.

ದಯಮಾಡಿ ಇವರು ಚಿಲ್ಲರೆ ರಾಜಕಾರಣ ಬಿಡಬೇಕು. ಟೊಯೊಟಾ ಸೇರಿದಂತೆ ಅನೇಕ ಕೈಗಾರಿಕೆಗಳು ರಾಜ್ಯ ಬಿಟ್ಟು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ. ಶಾಸಕ ರಾಜುಕಾಗೆ ಅಭಿವೃದ್ಧಿ ಅನುದಾನ ಬಗ್ಗೆ ಏನು ಹೇಳಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಅವರೂ ಬರಲಿ, ಸಭೆಯಲ್ಲಿ ಎಲ್ಲಾ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲಾ ದಾಖಲೆ ಸಮೇತ ಚರ್ಚೆ ಮಾಡೋಣ. ಈಶ್ವರ್ ಖಂಡ್ರೆ ಬೋಗಸ್ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!