ಹರಿತಲೇಖನಿ ದಿನಕ್ಕೊಂದು ಕಥೆ: ಚಂಡಮಾರುತ ಎಂದರೇನು?

Channel Gowda
Hukukudi trust

ಚಂಡಮಾರುತ ಹವಾಮಾನಕ್ಕೆ ಸಂಬಂಧಿಸಿದ ಘಟನೆಯಾಗಿದ್ದು ಗಾಳಿಯ ಒತ್ತಡ ಕಡಿಮೆ ಇರುವ ಪ್ರದೇಶದತ್ತ ಗಾಳಿಯು ತಿರುಗುತ್ತಾ ಬರುವುದನ್ನು ಚಂಡಮಾರುತ ಎಂದು ಹೇಳುತ್ತಾರೆ. ಇಲ್ಲಿ ಗಾಳಿಯು ಪ್ರದಕ್ಷಿಣೆ ಅಥವಾ ಅಪ್ರದಕ್ಷಿಣೆಯಾಗಿ ತಿರುಗುತ್ತಿರುತ್ತದೆ.

hulukudi maharathotsava
Aravind, BLN Swamy, Lingapura

ಕಡಿಮೆ ಒತ್ತಡವೆಂದರೆ ಆ ಪ್ರದೇಶದಲ್ಲಿ ಗಾಳಿ ಕಡಿಮೆ ಪ್ರಮಾಣದಲ್ಲಿರುತ್ತದೆ ಅಲ್ಲಿ ಸಾಂದ್ರತೆ ಕಡಿಮೆಯಾಗಿ ತೂಕ (ಮಾಸ್) ಕಡಿಮೆಯಾಗುವುದು. ಆಗ ಉಳಿದಕಡೆಯಿಂದ ಗಾಳಿ ಅಲ್ಲಿಗೆ ರಭಸದಲ್ಲಿ ನುಗ್ಗುವುದು. ಗಾಳಿಯ ಚಲನೆ ಸುರುಳಿಯಾಕಾರ ಹೊಂದುವುದು.

ಚಂಡಮಾರುತದಲ್ಲಿ ಗಾಳಿಯು ರಭಸದಿಂದ ಸುತ್ತುವಾಗ ಸುರಳಿಯ ಮಧ್ಯದಲ್ಲಿ ನಿರ್ವಾತ ಪ್ರದೇಶ ಅಥವಾ ಶೂನ್ಯ ಪ್ರದೇಶ ಉಂಟಾಗುವುದು. ಅದು ಸುಂಟರಗಾಳಿಯ ಕೇಂದ್ರ ಅಥವಾ ಕಣ್ಣು. ಸುರುಳಿಯಲ್ಲಿ ಗಾಳಿಯು 30 ಕಿ.ಮೀ. ನಿಂದ 350ಕಿ.ಮೀ.ವೇಗದವರೆಗೂ ಚಲಿಸುವುದು.

Hulukudi mahajathre
Aravind, BLN Swamy, Lingapura

ಈ ರಭಸದಲ್ಲಿ ಸಿಕ್ಕಿದ ವಸ್ತುಗಳು ಪುಡಿಯಾಗಿ ನಾಶವಾಗುವವು. ಕೇಂದ್ರದ ಕಣ್ಣಿನಲ್ಲಿ ಸಿಕ್ಕಿದ ವಸ್ತುವು ನಿರ್ವಾಣದಲ್ಲಿ ಮೇಲ್ಮುಖವಾಗಿ ಚಲಿಸುವುದರಿಂದ ಆ ವಸ್ತುಗಳು ಆಕಾಶಕ್ಕೆ ಚಿಮ್ಮಿ ಎಲ್ಲಿಯೋ ಬೀಳಬಹುದು.

ಕೇಂದ್ರ ಮತ್ತು ಕೇಂದ್ರದ ಹತ್ತಿರವಿರುವ ಬಿರುಗಾಳಿಗೆ ಸಿಕ್ಕಿದ ಮನೆಮಠ ಮರ ವಸ್ತುಗಳು ನಾಶವಾಗುವವು, ಅಲ್ಲದೆ ಜೀವಹಾನಿಯಾಗುವುದು. ಉಷ್ಣವಲಯದ ವಾತಾವರಣದಲ್ಲಿ ಸಮುದ್ರದಿಂದ ಆವಿಯಾದ ತೇವಾಂಶವಿರುವುದರಿಂದ ಬಿರುಗಾಳಿಯ ಜೊತೆ ಮಳೆಯೂ ಸುರಿಯುವುದು.

ಚಂಡಮಾರುತವನ್ನು ಸೈಕ್ಲೋನ್‌, ಹರಿಕೇನ್‌, ಟೈಫೂನ್‌ (ತೂಫಾನು) ಎಂದೆಲ್ಲ ಕರೆಯಲಾಗುತ್ತದೆ. ವಾಸ್ತವದಲ್ಲಿ ಮೂರು ಪದಗಳ ಅರ್ಥ ಒಂದೇ. ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ಇದನ್ನು ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಾರೆ.

ಚಂಡಮಾರುತದ ವಿಧಗಳು

ಹಿಂದೂ ಮಹಾ ಸಾಗರ ಪ್ರಾಂತ್ಯದಲ್ಲಿ ಗಾಳಿಯ ವೇಗದ ತೀವ್ರತೆಯನ್ನು ಆಧಾರವಾಗಿಟ್ಟುಕೊಂಡು ಚಂಡಮಾರುತವನ್ನು ಹಲವು ರೀತಿಯಲ್ಲಿ ವರ್ಗೀಕರಣ ಮಾಡಲಾಗಿದೆ.

ಅಟ್ಲಾಂಟಿಕ್‌ ಪ್ರದೇಶದಲ್ಲಿ ಹರಿಕೇನ್‌ ಎಂದೂ, ಪೆಸಿಫಿಕ್‌ ತೀರದಲ್ಲಿ ಟೈಫೂನ್‌ ಮತ್ತು ಹಿಂದೂ ಮಹಾ ಸಾಗರದ ಭಾಗದಲ್ಲಿ ಸೈಕ್ಲೋನ್‌ ಎಂದೂ ಕರೆಯುವ ಪದ್ಧತಿ ಇದೆ.

  1. ವಾಯುಭಾರ ಕುಸಿತ: ಕಡಿಮೆ ವೇಗದ ಬಿರುಗಾಳಿಗೆ[೩] ಈ ರೀತಿ ಕರೆಯುತ್ತಾರೆ. ಇಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 31ರಿಂದ 49 ಕಿ.ಮೀ. ವರೆಗೆ ಇರುತ್ತದೆ.
  2. ತೀವ್ರ ವಾಯುಭಾರ ಕುಸಿತ: ವಾಯುಭಾರ ಕುಸಿತ ತೀವ್ರಗೊಂಡಾಗಿನ ಸ್ಥಿತಿ. ಈ ಸ್ಥಿತಿಯಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 50ರಿಂದ 61 ಕಿ.ಮೀ ನಷ್ಟಿರುತ್ತದೆ.
  3. ಚಂಡಮಾರುತ: ತೀವ್ರ ವಾಯುಭಾರ ಕುಸಿತವು ಬಿರುಗಾಳಿಯಾಗಿ ಬದಲಾದರೆ (ಗಾಳಿಯ ವೇಗ ಪ್ರತಿಗಂಟೆಗೆ 62ರಿಂದ 88 ಕಿ.ಮೀ ನಷ್ಟು) ಅದನ್ನು ಚಂಡಮಾರುತ ಎನ್ನುತ್ತಾರೆ.
  4. ತೀವ್ರ ಚಂಡಮಾರುತ(ಸಿವಿಯರ್‌ ಸೈಕ್ಲೋನಿಕ್ ಸ್ಟಾರ್ಮ್‌): ಗಾಳಿಯ ವೇಗ ಪ್ರತಿ ಗಂಟೆಗೆ 89 ರಿಂದ117 ಕಿ.ಮೀ. ನಷ್ಟಿರುತ್ತದೆ.
  5. ಉಗ್ರ ಚಂಡಮಾರುತ (ವೆರಿ ಸಿವಿಯರ್‌ ಸೈಕ್ಲೋನಿಕ್ ಸ್ಟಾರ್ಮ್‌): ಪ್ರತಿ ಗಂಟೆಗೆ ಗಾಳಿಯ ವೇಗ 118ರಿಂದ 166 ಕಿ.ಮೀ. ವರೆಗೆ ಇರುತ್ತದೆ.
  6. ಅತ್ಯುಗ್ರ ಚಂಡಮಾರುತ: (ಎಕ್ಸ್‌ಟ್ರೀಮ್‌ಲಿ ಸಿವಿಯರ್‌ ಸೈಕ್ಲೋನಿಕ್ ಸ್ಟಾರ್ಮ್‌): ಇಲ್ಲಿ ಗಾಳಿಯು ಪ್ರತಿ ಗಂಟೆಗೆ 166 ರಿಂದ 221 ಕಿ.ಮೀ ವೇಗದಲ್ಲಿ ಬೀಸುತ್ತದೆ.
  7. ಸೂಪರ್‌ ಚಂಡಮಾರುತ: ಚಂಡಮಾರುತಗಳ ವರ್ಗೀಕರಣದಲ್ಲಿ ಇದು ಕೊನೆಯ ವಿಧ. ಪ್ರತಿ ಗಂಟೆಗೆ 222 ಕಿ.ಮೀ. ಗಿಂತ ಹೆಚ್ಚು ವೇಗದ ಚಂಡಮಾರುತ ಈ ವರ್ಗಕ್ಕೆ ಸೇರುತ್ತದೆ. ಹೆಸರು ಇಡುವ ಪ್ರಕ್ರಿಯೆ

ಪ್ರತಿ ಚಂಡಮಾರುತಕ್ಕೂ ಹೆಸರು ಇಡಲಾಗುತ್ತದೆ. ಪ್ರಸ್ತುತ, ಜಾಗತಿಕ ಮಟ್ಟದಲ್ಲಿ ಉಷ್ಣವಲಯದ ಚಂಡಮಾರುತಗಳಿಗೆ ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ- World Meteorological Organization) ಆಶ್ರಯದಲ್ಲಿರುವ ಜಗತ್ತಿನ 11 ಎಚ್ಚರಿಕೆ ಕೇಂದ್ರಗಳ ಪೈಕಿ ಯಾವುದಾದರೂ ಒಂದು ಕೇಂದ್ರ ಅಧಿಕೃತ ಹೆಸರು ಇಡುತ್ತದೆ.

ಮೊದಲು ಚಂಡಮಾರುತಕ್ಕೆ ಇಡಬಹುದಾದ ಎಲ್ಲ ಸಂಭಾವ್ಯ ಹೆಸರುಗಳನ್ನು ಪೆಸಿಫಿಕ್‌ ಪ್ರದೇಶದಲ್ಲಿರುವ ವಿಶ್ವ ಹವಾಮಾನ ಸಂಸ್ಥೆಯ ಪ್ರಾದೇಶಿಕ ಉಷ್ಣವಲಯ ಚಂಡಮಾರುತ ಸಮಿತಿಗೆ ಸಲ್ಲಿಸಬೇಕು.

ಈ ಸಮಿತಿಯು ಹೆಸರುಗಳನ್ನು ತಿರಸ್ಕರಿಸಬಹುದು ಅಥವಾ ಅದರಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಬಹುದು ಅಥವಾ ತಾನೇ ಹೆಸರು ಇಡಬಹುದು. ಆ ಪ್ರದೇಶದಲ್ಲಿರುವ ವಿವಿಧ ರಾಷ್ಟ್ರಗಳು ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತವೆ.

ಅಂತಿಮವಾಗಿ ಹೆಚ್ಚು ಮತ ಗಳಿಸಿದ ಹೆಸರನ್ನು ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಇಂಗ್ಲಿಷ್‌ ವರ್ಣಮಾಲೆಯ ಅನುಕ್ರಮದಲ್ಲಿ ಹೆಸರು ಇಡಲಾಗುತ್ತದೆ. ಉದಾಹರಣೆಗೆ ವರ್ಷದಲ್ಲಿ ಮೊದಲು ಅಪ್ಪಳಿಸುವ ಚಂಡಮಾರುತಕ್ಕೆ ‘ಎ’ ಅಕ್ಷರದಿಂದ ಆರಂಭವಾಗುವ ಹೆಸರು ಇಡುತ್ತಾರೆ.

ಚಂಡಮಾರುತವು ಅಪಾರ ಹಾನಿ ಮಾಡಿದರೆ, ಡಬ್ಲ್ಯುಎಂಒದ ಹರಿಕೇನ್‌, ಟೈಫೋನ್‌ ಮತ್ತು ಸೈಕ್ಲೋನ್‌ ಸಮಿತಿಯ ಸದಸ್ಯರು, ಈಗಾಗಲೇ ಇಟ್ಟಿರುವ ಹೆಸರನ್ನು ವಾಪಸ್‌ ಪಡೆಯಲು ಮನವಿ ಮಾಡಬಹುದು. ಸಂಬಂಧಿಸಿದ ಸಮಿತಿಗೆ ಪರ್ಯಾಯ ಹೆಸರನ್ನು ಸೂಚಿಸಬೇಕು. ನಂತರ ಮತದಾನದ ಮೂಲಕ ಹೆಸರು ಆಯ್ಕೆ ಮಾಡಲಾಗುತ್ತದೆ.

ಹಿಂದೂ ಮಹಾಸಾಗರ ಪ್ರಾಂತ್ಯದಲ್ಲಿ ಸದಸ್ಯ ರಾಷ್ಟ್ರಗಳಾದ ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಥಾಯ್ಲೆಂಡ್‌, ಮ್ಯಾನ್ಮಾರ್‌, ಮಾಲ್ಡೀವ್ಸ್‌, ಒಮನ್‌ ಒಟ್ಟಾಗಿ ಚಂಡಮಾರುತಗಳಿಗೆ ಹೆಸರು ಇಡುವ ನಿರ್ಧಾರವನ್ನು ಕೈಗೊಳ್ಳುತ್ತವೆ.

ಚಂಡಮಾರುತಕ್ಕೆ ಹೆಸರಿಡುವ ಬಗೆ

ಹಿಂದೂ ಮಹಾ ಸಾಗರದಿಂದ ಸುತ್ತುವರಿದಿರುವ ರಾಷ್ಟ್ರಗಳು ಅಪ್ಪಳಿಸುವ ಚಂಡಮಾರುತಕ್ಕೆ 2004ರಿಂದ ಹೆಸರಿಡುತ್ತಿವೆ. ವಿಶ್ವ ಪವನಶಾಸ್ತ್ರ ಸಂಸ್ಥೆ(WMO) ಚಂಡಮಾರುತಗಳಿಗೆ ಹೆಸರಿಡುವ ಕ್ರಮವನ್ನು ಜಾರಿಗೆ ತಂದಿದೆ.

ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಥೈಲ್ಯಾಂಡ್, ಮ್ಯಾನ್ಮಾರ್, ಮಾಲ್ಡೀವ್ಸ್ ಹಾಗೂ ಒಮಾನ್ ಸರತಿಯಂತೆ ಹೆಸರು ಸೂಚಿಸುತ್ತವೆ.

ಈ ಮೇಲಿನ ಎಂಟು ರಾಷ್ಟ್ರಗಳು ಚಂಡಮಾರುತಗಳಿಗೆ ಹೆಸರಿಡಲು ಈಗಾಗಲೇ 64 ಹೆಸರಿನ ಪಟ್ಟಿ ಸಿದ್ಧಪಡಿಸಿವೆ. ಪ್ರತಿ ರಾಷ್ಟ್ರ ಎಂಟು ಹೆಸರು ಸೂಚಿಸುವ ಅವಕಾಶ ಪಡೆದುಕೊಂಡಿವೆ.

ಆಧಾರ: Wikipedia

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!