ದೇವನಹಳ್ಳಿ: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ರಸ್ತೆಗಳಲ್ಲಿ ಹಳ್ಳಕೊಳ್ಳದಂತಾಗಿದೆ. ಇದೀಗ ಸೋಮವಾರ ತಡ ರಾತ್ರಿ ಸುರಿದ ಧಾರಾಕಾರ ಮಳೆಗೆ ಎರಡು ಕಾರುಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಗಡಿ ಭಾಗದಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿದ್ದು ಆಸ್ಪತ್ರೆಗೆಂದು ಹೋಗುತ್ತಿದ್ದ. ಕಾರೊಂದು ಮಳೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ.
ನಾಗಾರ್ಜುನ ಕಾಲೇಜು ಬಳಿ ಈ ಘಟನೆ ನಡೆದಿದ್ದು ಕಾರಿನಲ್ಲಿದ್ದ ಆರು ಜನ ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಗಿದೆ.
ಒಂದು ಮಾರುತಿ ಅಸ್ಟರ್ ಕಾರು ಸಂಪೂರ್ಣ ಮುಳುಗಡೆಯಾಗಿದ್ದರೆ, ಕಾಲುವೆ ದಡದಲ್ಲಿ ಮತ್ತೊಂದು ಕಾರು, ತಗಲಾಕ್ಕೊಂಡಿದೆ.
ನೀರಿನ ಹರಿವು ಹೆಚ್ಚಾಗಿದ್ದ ಕಾರಣ ಕಾರುಗಳು ಕಾಲುವೆಗೆ ಬಿದ್ದಿವೆ ಎನ್ನಲಾಗಿದೆ.