ಹರಿತಲೇಖನಿ ದಿನಕ್ಕೊಂದು ಕಥೆ: ಹೆಗ್ಗಣ ಕಲಿಸಿದ ಪಾಠ

ಒಂದು ದಟ್ಟ ಕಾಡಿತ್ತು. ಅ ಕಾಡಿನಲ್ಲಿ ಒಂದು ದೊಡ್ಡ ಮರವಿತ್ತು. ಅ ಮರ ಬಹಳ ವರ್ಷಗಳಿಂದ ಜೀವಿಸಿದ್ದರಿಂದ ಹಿರಿಯನಂತೆ ವರ್ತಿಸುತ್ತಿತ್ತು. ಅದೇ ವಿಷಯವಾಗಿ ಅದಕ್ಕೆ ತುಂಬಾ ಜಂಬವಿತ್ತು. ಕಾಡಿಗೆ ತಾನೇ ಹಿರಿದಾದ ಮರ, ತನ್ನಷ್ಟು ಹಿರಿಯ ಮರ ಎಲ್ಲೂ ಇಲ್ಲ, ಆದ್ದರಿಂದ ಎಲ್ಲರೂ ತನ್ನ ಮಾತು ಕೇಳಬೇಕು ಎಂದು ಮೆರೆಯುತ್ತಿತ್ತು.

ತನ್ನ ನೆರಳಿನ ಆಶ್ರಯಕ್ಕೆ ಬಂದ ಪ್ರಾಣಿಗಳ ಬಳಿ “ಇಷ್ಟು ವಯಸ್ಸಾಗಿದ್ದರೂ ನನ್ನ ರೆಂಬೆ ಕೊಂಬೆಗಳು ಹಸಿರಿನಿಂದ ನಳನಳಿಸುತ್ತಿದೆ ನೋಡಿ’ ಎಂದು ನಲಿಯುತ್ತಿತ್ತು.

ಒಂದು ದಿನ ಪುಟ್ಟ ಗುಬ್ಬಿ ಮರದ ಮೇಲೆ ಕುಳಿತಿತು. ಹಿರಿಯ ಮರ ಮಾತ್ರ ಮಾತಾಡಲೇ ಇಲ್ಲ. ಯಾವತ್ತೂ ತಾನಾಗಿಯೇ ಮಾತು ಶುರುಮಾಡುತ್ತಿದ್ದ ಮರ ಇವತ್ತೇಕೆ ಸುಮ್ಮನಿದೆ ಎಂದು ಗುಬ್ಬಿ ಆಶ್ಚರ್ಯ ವ್ಯಕ್ತಪಡಿಸಿತು.

ತುಂಬಾ ಹೊತ್ತು ಸುಮ್ಮನಿದ್ದ ಗುಬ್ಬಿ “ನೀನು ಯಾವಾಗಲೂ ಸಂತೋಷದಿಂದ ಇರುತ್ತಿದ್ದೆಯಲ್ಲಾ. ಇಂದು ಯಾಕೆ ಬೇಸರದಿಂದ ಇದ್ದೀಯಾ?’ ಎಂದು ಕೇಳಿತು. ಮರ “ನನ್ನ ಬೇರು ನೋಡಿದ್ದೀಯ? ಎಷ್ಟು ಕೊಳಕಾಗಿದೆ. ನನ್ನ ಎತ್ತರ, ನನ್ನ ಸೌಂದರ್ಯ ಇಷ್ಟು ಬೃಹತ್ತಾಗಿದ್ದರೂ ಬೇರುಗಳು ಮಾತ್ರ ಕೊಳಕಾಗಿದ್ದರೆ ಏನು ಚೆನ್ನ?!’.

ಅದನ್ನು ಕೇಳಿ ಪುಟ್ಟ ಗುಬ್ಬಿ ನಕ್ಕು “ಅಯ್ಯೋ ಮರವೇ… ನಿನ್ನ ಎತ್ತರ, ಸೌಂದರ್ಯ ಇವೆಲ್ಲವಕ್ಕೂ ಮುಖ್ಯ ಕಾರಣ ಇವೇ ಇದೇ ಕೆಸರು ಮೆತ್ತಿದ ಬೇರು. ಅದಿಲ್ಲದೇ ಇರುತ್ತಿದ್ದರೆ ನೀನು ಬೆಳೆಯುವುದಕ್ಕೆ ಪೋಷಕಾಂಶ ಎಲ್ಲಿಂದ ಬರಬೇಕು? ಈಗ ಅದನ್ನೇ ದೂಷಿಸುತ್ತಿರುವೆಯಲ್ಲ. ಇದು ಸರಿಯೇ?’ ಎಂದು ಕೇಳಿತು.

ಆದರೆ ಮರಕ್ಕೆ ಅದು ನಾಟಲಿಲ್ಲ. ಅದು ತನ್ನ ಮೊಂಡುವಾದವನ್ನೇ ಹಿಡಿಯಿತು. “ಆದರೂ ಈ ಬೇರುಗಳು ಮಣ್ಣು ಮೆತ್ತಿಕೊಂಡಿರದೇ ಇದ್ದರೇ ಚೆಂದವಿತ್ತು’ ಎಂದು ಮತ್ತೆ ಬೇಸರಪಟ್ಟುಕೊಂಡಿತು. ಇದಕ್ಕೆ ಎಷ್ಟು ಹೇಳಿದರೂ ಅಷ್ಟೆ ಎಂದು ಅರಿತ ಗುಬ್ಬಿ ಮತ್ತೆ ಏನನ್ನೂ ಹೇಳದೆ ಅಲ್ಲಿಂದ ಹಾರಿಹೋಯಿತು.

ಕೆಲವು ದಿನಗಳ ನಂತರ ಕಾಡಿನಲ್ಲಿ ಹೊಸದೊಂದು ಸಮಸ್ಯೆ ಪ್ರಾರಂಭವಾಗಿತ್ತು. ಅದೆಲ್ಲಿಂದಲೋ ಹೆಗ್ಗಣದ ಸೈನ್ಯ ಕಾಡಿಗೆ ನುಗ್ಗಿಬಿಟ್ಟಿತು. ಸಿಕ್ಕ ಸಿಕ್ಕ ಮರಗಳನ್ನೆಲ್ಲಾ ಕಡಿದು ಹಾಕುತ್ತಿದ್ದವು. ಅವು ಕಾಡಿನ ನೆಲದಲ್ಲಿ ಬಿಲ ತೋಡಲು ಸೂಕ್ತವಾದ ಮರವನ್ನು ಹುಡುಕುತ್ತಿದ್ದವು. ಅದೇ ಸಮಯಕ್ಕೆ ಹಿರಿಯ ಮರ ಹೆಗ್ಗಣಗಳನ್ನು ತನ್ನ ಬಳಿಗೆ ಕರೆಯಿತು. ಅವುಗಳಿಂದ ತನ್ನ ಬೇರನ್ನು ಸ್ವತ್ಛ ಮಾಡಿಸಿಕೊಳ್ಳುವುದು ಅದರ ಉದ್ದೇಶವಾಗಿತ್ತು.

ಆ ಹಿರಿಯ ಮರದ ಎತ್ತರ ಮತ್ತು ಬೃಹತ್‌ ಗಾತ್ರ ನೋಡಿದ ಹೆಗ್ಗಣಗಳ ಸೈನ್ಯದ ಮುಖಂಡ “ಈ ಮರದ ಕೆಳಗೆ ಬಿಲ ತೋಡಿದರೆ ತಮ್ಮ ಸೈನ್ಯದ ಸದಸ್ಯರೆಲ್ಲರೂ ವಾಸಿಸಬಹುದು’ ಎಂದಿತು. ತಮ್ಮ ಮುಖಂಡ ಹಾಗೆ ಹೇಳಿದ್ದೇ ತಡ ಹೆಗ್ಗಣಗಳು ಮರದ ಬುಡದ ಮೇಲೆ ಮುಗಿಬಿದ್ದವು.

ಸ್ವಲ್ಪ ಹೊತ್ತಿನಲ್ಲಿ ಮರಕ್ಕೆ ನೋವಾಗತೊಡಗಿತು. ಬಹಳ ಬೇಗ ಹೆಗ್ಗಣಗಳು ಹಿರಿಯ ಮರದ ಬೇರನ್ನು ಕಡಿದು ಕಡಿದು ಸಡಿಲ ಮಾಡಿದವು. ಮರ ದೊಪ್ಪನೆ ಉರುಳಿಬಿತ್ತು. ತನ್ನ ಬೆಳವಣಿಗೆಗೆ ಕಾರಣವಾದ ಬೇರನ್ನೇ ದ್ವೇಷಿಸಿದ ಮರಕ್ಕೆ ತಕ್ಕ ಶಾಸ್ತಿಯಾಗಿತ್ತು.

ಕೃಪೆ: ಯುಎಚ್‌ಎಮ್ ಗಾಯತ್ರಿ (ಸಾಮಾಜಿಕ ಜಾಲತಾಣ)

ರಾಜಕೀಯ

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

BJP ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ.. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ..; Ramalinga Reddy

[ccc_my_favorite_select_button post_id="102354"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!