ಜನತಾ ದರ್ಶನ: ನೆಲದ ಮೇಲೆ ಕುಳಿತು ವಿಶೇಷಚೇತನರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 7 ನೇ ಜಿಲ್ಲಾ ಮಟ್ಟದ ಜನ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕರಿಂದ ಸುಮಾರು 213 ಅಹವಾಲುಗಳನ್ನು ಸ್ವೀಕರಿಸಲಾಯಿತು.

ಸಾರ್ವಜನಿಕರಿಂದ ಅಹವಾಲು, ಮನವಿಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವ ಸಂತೋಷ ಲಾಡ ಅವರು, ಸಲ್ಲಿಕೆ ಆಗಿರುವ ಎಲ್ಲ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತದೆ. ಆದರೆ ಕೆಲವು ಮನವಿಗಳು ಸರಕಾರದ ನೀತಿ, ನಿರೂಪಣೆಗೆ ಒಳಪಡಬೇಕಾಗುತ್ತದೆ. ಮತ್ತು ಕೆಲವು ಕೋರ್ಟ ವ್ಯಾಜ್ಯಗಳಾಗಿರುತ್ತವೆ.

ಇವುಗಳಿಗೆ ಹಿಂಬರಹ ನೀಡಿ, ಕಳಿಸಲಾಗುತ್ತದೆ. ಕೆಲವು ಸಾರ್ವಜನಿಕರು ತಮ್ಮ ವಯಕ್ತಿಕ ಸಮಸ್ಯೆ, ಆಸ್ತಿ ಜಗಳ, ಸಂಬಂದಿಕರ ಕೇಸ್, ಆಂತರಿಕ ಜಗಳ ಹೀಗೆ ವಿವಿಧ ರೀತಿಯ ಸಮಸ್ಯೆಗಳನ್ನು ಸಲ್ಲಿಸುತ್ತಾರೆ. ಇವುಗಳನ್ನು ಸಹ ಸಹಾನುಬೂತಿಯಿಂದ ಪರಿಶೀಲಿಸಿ, ಸಾಧ್ಯವಾದಷ್ಟು ಅವರ ಸಮಸ್ಯೆಗಳ ಪರಿಹಾರ ದೊರಕಿಸಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಜಿಲ್ಲಾ ಮಟ್ಟದಲ್ಲಿ ಜರುಗಿದ ಕಳೆದ ಆರು ಜನತಾ ದರ್ಶನ ಕಾರ್ಯಕ್ರಮಗಳಲ್ಲಿಯೇ ಸುಮಾರು 1242 ಅಹವಾಲುಗಳನ್ನು ಮತ್ತು ಇಂದಿನ 7ನೇ ಸಭೆಯಲ್ಲಿ 213 ಅಹವಾಲುಗಳು ಸೇರಿ ಇಲ್ಲಿವರೆಗೆ ಒಟ್ಟು 1455 ಅರ್ಜಿಗಳನ್ನು ಸೀಕರಿಸಲಾಗಿದೆ. ಇದರಲ್ಲಿ ಇಂದು ಸಲ್ಲಿಕೆ ಆಗಿರುವ ಅರ್ಜಿಗಳನ್ನು ಹೊರತುಪಡಿಸಿ, ಹಿಂದಿನ ಎಲ್ಲ ಅಹವಾಲು, ಅರ್ಜಿಗಳನ್ನು ನಮ್ಮ ಜಿಲ್ಲಾ ಹಂತದಲ್ಲಿ ಇತ್ಯರ್ಥಗೊಳಿಸಿ, ಅರ್ಜಿದಾರರಿಗೆ ಹಿಂಬರಹ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇಂದಿನ ಜನತಾ ದರ್ಶನ:

ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ ಸಾರ್ವಜನಿಕರು, ಸಂಘ ಸಂಸ್ಥೆ ಪ್ರತಿನಿಧಿಗಳು ತಮ್ಮ ಸಮಸ್ಯೆಗಳ ಬಗ್ಗೆ ಸಹಾಯ ಸೌಲಭ್ಯಗಳ ಬಗ್ಗೆ ವಿವಿಧ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸಿದರು.

ಪ್ರಮುಖವಾಗಿ ಕಂದಾಯ ಇಲಾಖೆ-62, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ-28, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆ-37, ಕಾರ್ಮಿಕ-12, ಹೆಸ್ಕಾಂ -9, ಹಿಂದುಳಿದ ವರ್ಗಗಳ ಇಲಾಖೆ-9, ಶಾಲಾ ಶಿಕ್ಷಣ ಇಲಾಖೆ-6, ಸಾರಿಗೆ ಇಲಾಖೆ-6, ಗೃಹ ಇಲಾಖೆ-5, ಸಮಾಜ ಕಲ್ಯಾಣ ಇಲಾಖೆ-5, ಆರೋಗ್ಯ ಇಲಾಖೆ-5, ಸಹಕಾರ ಇಲಾಖೆ-4, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-4, ಲೋಕೋಪಯೋಗಿ ಇಲಾಖೆ-4, ವಸತಿ ಇಲಾಖೆ-4, ಕೃಷಿ ಇಲಾಖೆ-3, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ-3, ಅರಣ್ಯ ಮತ್ತು ಪರಿಸರ ಇಲಾಖೆ-2, ಆಡಳಿತ ಸುಧಾರಣೆ ಇಲಾಖೆ-1, ಕನ್ನಡ ಮತ್ತು ಸಂಸ್ಕøತಿ ಇಲಾಖೆ-1, ಸಣ್ಣ ನೀರಾವರಿ-1, ಅಲ್ಪಸಂಖ್ಯಾತರ ಇಲಾಖೆ-1, ತೋಟಗಾರಿಕೆ-1 ಅಹವಾಲುಗಳು ಸೇರಿದಂತೆ ಒಟ್ಟು 213 ಅಹವಾಲುಗಳನ್ನು ಸಲ್ಲಿಸಿದ್ದಾರೆ.

ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಗಳು: ಸೆಪ್ಟೆಂಬರ್ 25, 2023 ರಂದು ಸೃಜನಾ ರಂಗ ಮಂದಿರದಲ್ಲಿ ಜರುಗಿದ ಮೊದಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 450 ಅರ್ಜಿಗಳನ್ನು ಸ್ವೀಕರಿಸಿ, ಎಲ್ಲವನ್ನು ವಿಲೇವಾರಿ ಮಾಡಲಾಗಿದೆ.

ನವೆಂಬರ್ 6, 2023 ರಂದು ಸೃಜನಾ ರಂಗ ಮಂದಿರದಲ್ಲಿ ಜರುಗಿದ ಎರಡನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 197 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. ಡಿಸೆಂಬರ್ 23, 2023 ರಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ಮೂರನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 177 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ.

ಜನೇವರಿ 29, 2024 ರಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ನಾಲ್ಕನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 112 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. ಜೂನ್ 26, 2024 ರಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ಐದನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 175 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. ಸೆಪ್ಟೆಂಬರ್ 10, 2024 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಜರುಗಿದ ಆರನೇಯ ಜನತಾದರ್ಶನ ಕಾರ್ಯಕ್ರಮದಲ್ಲಿ ಒಟ್ಟು 131 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ.

ಅ.21ರಂದು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗಿದ ಏಳನೇಯ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 213 ಅರ್ಜಿಗಳನ್ನು ಸ್ವೀಕರಿಸಿದ್ದಾರೆ.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ್ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಡಿಸಿಪಿ ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ವೇದಿಕೆಯಲ್ಲಿದ್ದರು.

ಉಪವಿಭಾಗಾಧಿಕಾರಿ ಶಲಂ ಹುಸೇನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷ ಬಿರಾದರ, ಸ್ಮಾರ್ಟ ಸಿಟಿ ಎಂಡಿ ರುದ್ರೇಶ ಗಾಳಿ, ಎಲ್ಲ ತಾಲೂಕುಗಳ ತಹಶಿಲ್ದಾರರು, ತಾ.ಪಂ. ಇಓ ಅವರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!