ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ.

ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ ಸೇವಿಸಿದ ಪರಿಣಾಮ ಅನಿಲ್‌ ಮೃತಪಟ್ಟಿದ್ದು, ಪತ್ನಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಅನಿಲ್ ಕಗ್ಗೆರೆ ಗ್ರಾಮದವರಾಗಿದ್ದು, ಹೌಸಿಂಗ್ ಬೋರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು. ಹಲವು ವರ್ಷಗಳಿಂದ ಕುಣಿಗಲ್‌ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.

ಇತ್ತೀಚಿಗೆ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ಅನಿಲ್ ಸುಮಾರು 8-10 ಲಕ್ಷ ರು. ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಮಾತ್ರೆ ಸೇವಿಸಿ ಪತಿ, ಪತ್ನಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗಂಡ ಅನಿಲ್ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿ ಉಮಾಗೆ ಕುಣಿಗಲ್ ಸರಕಾರಿ ತಾಲೂಕು ಆಸತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್‌ ಕೆವಿ ಹಾಗೂ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾರಿಬಿದ್ದು ಇಬ್ಬರ ಸಾವು

ಯಾದಗಿರಿ: ಹುಣಸಗಿ ತಾಲೂಕಿನ ಬೆಂಚಿಗಡ್ಡಿ ಸಮೀಪದ ಸ್ನಾನಕ್ಕೆ ಹೋಗಿ ಕೃಷ್ಣಾನದಿ ಯಲ್ಲಿ ಕಾಲುಜಾರಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಪಿಪಿಸಿಎಲ್ ವಿದ್ಯುತ್‌ ಪೂರೈಕೆ ಘಟಕದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನಾಗಲ್ಯಾಂಡ್ ಮೂಲದ ಆಲಮ್ (23 ವರ್ಷ), ವಿಜಯಪುರ ಮೂಲದ ಮಾರುತಿ (24 ವರ್ಷ) ದುರ್ದೈವಿ ಮೃತ ದುದೈವಿಗಳು.

ಕೃಷ್ಣಾನದಿಯಲ್ಲಿ ಸೋಮವಾರ ಸ್ನಾನಕ್ಕಾಗಿ ತೆರಳಿದಾಗ ಆಲಮ್ ಜಾರಿ ನೀರಿಗೆ ಬಿದ್ದಿದ್ದಾನೆ. ಪಕ್ಕದಲ್ಲಿಯೇ ಇದ್ದ ಮಾರುತಿ ಎಂಬಾತ ರಕ್ಷಣೆಗೆ ನದಿಗೆ ಇಳಿದಾಗ ಇಬ್ಬರೂ ನೀರು ಪಾಲಾಗಿದ್ದಾರೆ.

ಮಂಗಳವಾರ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಕೋಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಸಾವು

ಹುಕ್ಕೇರಿ: ವಸತಿ ಶಾಲೆಯ ಮೊದಲ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಹುಕ್ಕೇರಿ ತಾಲೂಕಿನ ಹಿರೇಕೋಡಿ ಗ್ರಾಮ ದಲ್ಲಿ ನಡೆದಿದೆ.

ಗೋಕಾಕ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ಆಫ್ರೀನ್ ಜಮಾ ದಾರ (17 ವರ್ಷ) ಮೃತ ವಿದ್ಯಾ ರ್ಥಿನಿ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇ ಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ.

ಪರೀಕ್ಷೆ ಹಿನ್ನೆಲೆ ಮಧ್ಯ ರಾತ್ರಿ ಮೊದಲ ಮಹಡಿಯಲ್ಲಿ ಓದುತ್ತ ಕುಳಿತಿದ್ದಳು. ಈ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ.

ಚಿಕ್ಕೋಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

ಮೃತ ವಿದ್ಯಾರ್ಥಿನಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ರಾಜಕೀಯ

ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸುವ ಷಡ್ಯಂತ್ರ; ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆರಳಿದ ಬಿ.ಮುನೇಗೌಡ

ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸುವ ಷಡ್ಯಂತ್ರ; ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆರಳಿದ ಬಿ.ಮುನೇಗೌಡ

ಬೆಂಗಳೂರು ಗ್ರಾಮಾಂತರ; ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಚುನಾವಣೆ (channapatna by election) ರಾಜ್ಯಾದ್ಯಂತ ವಿಶೇಷ ಗಮನ ಸೆಳೆಯುತ್ತಿದೆ. ಹಾಲಿ ಕೇಂದ್ರ ಮಂತ್ರಿ, ಮಾಜಿ ಸಿಎಂ, ಜೆಡಿಎಸ್

[ccc_my_favorite_select_button post_id="94727"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!