ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಹೊರ ಬರಲೇಬೇಕು; ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ

ದೊಡ್ಡಬಳ್ಳಾಪುರ: ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಗಳ ಬಗ್ಗೆ ದೃಢವಾದ ತಿಳುವಳಿಕೆ ಇದ್ದಾಗ ಮಾತ್ರ ನಮ್ಮನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಹಿಸಿ ಅವರು ಆಶೀರ್ವಚನ ನೀಡಿದರು.

ಇಂದು ಸಮಾಜದಲ್ಲಿ ನಡೆಯುತ್ತಿರುವ ಹಲವು ಅಕ್ರಮಗಳು,ವೈರುಧ್ಯಗಳ ನಡುವೆಯೂ ಧರ್ಮ ತನ್ನದೇ ಆದ ಅಸ್ತಿತ್ವ ಹೊಂದಿದೆ ಎನ್ನುವುದಕ್ಕೆ ಆಸ್ತಿಕ ಸಮಾಜದ ಈ ಸಮಾಗಮ ನಿದರ್ಶನವಾಗಿದೆ. ಆದಿಗುರು ಶಂಕರಾಚಾರ್ಯರು ಪ್ರತಿಪಾದಿಸಿದ ಧರ್ಮ ಸಿದ್ದಾಂತಗಳು ಆಳವಾಗಿ ಬೇರೂರಿವೆ. ಭಗವಂತ ಒಬ್ಬನೇ ಆಗಿದ್ದು, ಆತ ಬೇರೆ ಬೇರೆ ರೂಪಗಳನ್ನು ಅವತರಿಸಿ, ಭಕ್ತನನ್ನು ಕಾಪಾಡುತ್ತಿದ್ದಾನೆ ಎನ್ನುವುದನ್ನು ಶಂಕರಾಚಾರ್ಯರು ನಿರೂಪಿಸಿದ್ದಾರೆ.

ಪ್ರಾಣಿಗಳಿಗಿಂತ ಭಿನ್ನವಾಗಿ ಬದುಕುವ ಮನುಷ್ಯ ಅವುಗಳಿಂದ ಹೊರತಾಗಿ ಬದುಕದಿದ್ದರೆ, ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇರುವುದಿಲ್ಲ. ಈ ದಿಸೆಯಲ್ಲಿ ಧರ್ಮಾಚರಣೆ ಪ್ರಮುಖ ಪಾತ್ರ ವಹಿಸುತ್ತದೆ.

ಮಾನವನ ಆಯುಷ್ಯ 100 ವರ್ಷಗಳು ಎಂದಿಟ್ಟುಕೊಂಡರೆ ಆತ ಮೋಕ್ಷ ಪಡೆಯಲು ಹಲವಾರು ಜನ್ಮಗಳನ್ನು ತಾಳಿ ಬರಬೇಕಿದೆ. ಪ್ರತಿ ಜನ್ಮದಲ್ಲಿಯೂ ಧರ್ಮಾಚರಣೆ ಹಾಗೂ ಪರೋಪಕಾರಗಳನ್ನು ಮಾಡಿದಾಗ ಮಾತ್ರ, ಜನ್ಮ ಸಾರ್ಥಕತೆ ಪಡೆಯುತ್ತದೆ. ಇಲ್ಲವಾದಲ್ಲಿ ಮಾನವ ಜನ್ಮಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಬದುಕಿನಲ್ಲಿ ಸಂಪಾದನೆಯೊಂದೇ ಮುಖ್ಯವಲ್ಲ. ಅದರೊಂದಿಗೆ ನಮ್ಮ ಬದುಕಿನ ಸ್ವರೂಪ ಮುಖ್ಯವಾಗುತ್ತದೆ. ದುಃಖ, ಕಷ್ಟಗಳು ಬರಬಾರದು ಎಂದರೆ ನಾವು ಕಷ್ಟಪಡಬೇಕು. ಅದಕ್ಕಾಗಿ ಪ್ರಯತ್ನ ಪಡಬೇಕು. ಸಾಧನೆ ಮಾಡಬೇಕು. ಹಲವು ಜನ್ಮಗಳ ಆಚರಣೆಯೇ ಕೊನೆಗೆ ಮೋಕ್ಷ ರೂಪ ಪಡೆಯುತ್ತದೆ.

ಭಗವಂತ ನಾನಾ ಅವತಾರಗಳನ್ನು ಎತ್ತಿರುವುದು ಸಹ ಅಧರ್ಮವನ್ನು ಅಳಿಸಿ, ಧರ್ಮವನ್ನು ಉಳಿಸಬೇಕು ಎನ್ನುವ ಉದ್ದೇಶಕ್ಕಾಗಿಯೇ. ಶಂಕರಾಚಾರ್ಯರು ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು. ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ನಮ್ಮ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಧರ್ಮಾಚರಣೆ ಮಾಡುವ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ನಮ್ಮ ಧರ್ಮ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ಸಿಎಂಗೆ ಬಿಗ್ ರಿಲೀಫ್, ಮಾಜಿ ಸಿಎಂಗೆ ತಾತ್ಕಾಲಿಕ ರಿಲೀಫ್..!

ಸಿಎಂಗೆ ಬಿಗ್ ರಿಲೀಫ್, ಮಾಜಿ ಸಿಎಂಗೆ ತಾತ್ಕಾಲಿಕ ರಿಲೀಫ್..!

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yadyurappa) ವಿರುದ್ಧ ಅವರಿಗಿಂದು

[ccc_my_favorite_select_button post_id="102388"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!