ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

Channel Gowda
Hukukudi trust

ಬೆಂಗಳೂರು: ಮಾರುಕಟ್ಟೆಯಲ್ಲಿ ಖರೀದಿಸುವ ವಿವಿಧ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಅಳವಡಿಸಿಕೊಳ್ಳಲು ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕಿಯಾಸ್ಕ್ ಗಳು ಸಹಕಾರಿಯಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟರು.

hulukudi maharathotsava
Aravind, BLN Swamy, Lingapura

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿನುತನ ಪ್ರಯತ್ನವಾಗಿ ಬೆಂಗಳೂರು ನಗರದ ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ ಆಹಾರ ಪದಾರ್ಥಗಳ ತ್ವರಿತ ಪರೀಕ್ಷೆಗಾಗಿ ಪ್ರಾಯೋಗಿಕವಾಗಿ ನಿರ್ಮಿಸಿರುವ ‘ಮ್ಯಾಜಿಕ್ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮನೆಯಲ್ಲಿ ಅಡುಗೆ ಮಾಡುವಾಗ ನಾವು ಎಚ್ಚರಿಕೆವಹಿಸಿ ನೈಸರ್ಗಿಕ ಹಾಗೂ ಒಳ್ಳೆಯ ಗುಣಮಟ್ಟದ ಕಲಬೆರಕೆ ಇಲ್ಲದ ಉತ್ತಮ ಆಹಾರ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಹೊರಗೆ ತಿನ್ನುವ ಆಹಾರಗಳಲ್ಲಿ ನೋಡಲು ಆಕರ್ಷಕವಾಗಿರುವಂತೆ ರಾಸಾಯನಿಕ ಬಣ್ಣಗಳನ್ನು ಮತ್ತು ರುಚಿಯನ್ನು ಹೆಚ್ಚಿಸುವ ಟೇಸ್ಟ್ ಮೇಕರ್ ಗಳನ್ನು ಬಳಸಲಾಗುತ್ತದೆ. ಆರ್ಥಿಕವಾಗಿ ಲಾಭದಾಯಕ ಮಾಡಿಕೊಳ್ಳಲು ಕಲಬೆರಕೆ ವಸ್ತುಗಳನ್ನು ಇಲ್ಲಿ ಬಳಸಲಾಗುತ್ತದೆ.

Hulukudi mahajathre
Aravind, BLN Swamy, Lingapura

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬದಲಾದ ಜೀವನಶೈಲಿ, ಆಹಾರ ಪದ್ಧತಿಗಳು ಮತ್ತು ಮಲಿನಗೊಂಡ ಪರಿಸರದಲ್ಲಿ ಬದುಕುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದಯಘಾತ ಮತ್ತು ಮಾರಕ ಕ್ಯಾನ್ಸರ್ ಗಳಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ ನಾವು ಸೇವಿಸುವ ಆಹಾರ ಒಳ್ಳೆಯ ಗುಣಮಟ್ಟ ಹಾಗೂ ನೈಸರ್ಗಿಕ ವಸ್ತುಗಳಿಂದ ಕೂಡಿರುವುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕು.

ಈ ನಿಟ್ಟಿನಲ್ಲಿ ಸಾರ್ವಜನಿಕರೇ ಖುದ್ದು ಪರೀಕ್ಷಿಸಿಕೊಳ್ಳಬಹುದಾದಂತಹ ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕೇಂದ್ರಗಳು ಅತ್ಯಂತ ಸಹಕಾರಿಯಾಗಲಿವೆ ಎಂದ ಅವರು ಈ ವ್ಯವಸ್ಥೆಯು ಆಹಾರ ಉತ್ಪನ್ನ ಹಾಗೂ ಮಾರುಕಟ್ಟೆದಾರರಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಜನಸಾಮಾನ್ಯರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ತೀವ್ರ ವಿವಾದಕ್ಕೆ ತುಪ್ಪದ ಸ್ಯಾಂಪಲ್ ಗಳನ್ನು ಕೂಡ ಇಲಾಖೆ ಪರೀಕ್ಷಿಸಿದೆ. ಒಟ್ಟು 230 ಸ್ಯಾಂಪಲ್ ಗಳನ್ನು ಪರೀಕ್ಷಿಸಿದಾಗ ಅವುಗಳಲ್ಲಿ 224 ಸ್ಯಾಂಪಲ್ ಗಳು ಸೇವನೆಗೆ ಸುರಕ್ಷಿತವಾಗಿದೆ ಎಂದು ಕಂಡು ಬಂದಿದೆ. ಐದು ಸ್ಯಾಂಪಲ್ ಗಳು ಅಸುರಕ್ಷಿತ ಎಂದು ಕಂಡುಬಂದಿದ್ದು ಒಂದು ಸ್ಯಾಂಪಲ್ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 113 ಕೋಟಿ ರೂ. ಒಡೆಯ ನಿಖಿಲ್ ಕುಮಾರಸ್ವಾಮಿ: ಸಾಲ ಎಷ್ಟು ಗೊತ್ತಾ..?

ರಾಜ್ಯಾದ್ಯಂತ ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಖಚಿತಪಡಿಸಿಕೊಳ್ಳಲು ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ 142 ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದ್ದು, ಕಂಡು ಬಂದಿರುವ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರಮುಖ ಪ್ರವಾಸಿ, ತಾಣಗಳಲ್ಲಿ ಸ್ಥಾಪಿಸಿರುವ 35 ಹೋಟೆಲ್ ಘಟಕಗಳಲ್ಲಿ ಗ್ರಾಹಕರುಗಳಿಗೆ ಸರಬರಾಜು ‘ಮಾಡಲಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕುರಿ/ಮೇಕೆ ಮಾಂಸದ 184 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 179 ಮಾದರಿಗಳು ಸುರಕ್ಷಿತ ಎಂದು, 05 ಮಾದರಿಗಳು ಕಳಪೆ ಎಂದು, ಮೊಟ್ಟೆಯ 81 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 80 ಮಾದರಿಗಳು ಸುರಕ್ಷಿತ ಎಂದು, 01 ಮಾದರಿಯು ಕಳಪೆ ಎಂದು ಹಾಗೂ ಕೋಳಿ ಮಾಂಸದ 246 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 236 ಮಾದರಿಗಳು ಸುರಕ್ಷಿತ ಎಂದು, 10 ಮಾದರಿಗಳು ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿರುತ್ತದೆ ಎಂದವರು ತಿಳಿಸಿದರು.

10 ಮಾಲ್ ಗಳಲ್ಲಿ ಕೇಂದ್ರಗಳ ಸ್ಥಾಪನೆ

ಇಲಾಖೆಯ ಆಯುಕ್ತರಾದ ಕೆ ಶ್ರೀನಿವಾಸ್ ಅವರು ಮಾತನಾಡಿ, ಬೆಂಗಳೂರು ನಗರಾದ್ಯಂತ ಒಟ್ಟು 10 ಮಾಲ್ ಗಳಲ್ಲಿ ಈ ಆಹಾರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ತುಮಕೂರು ರಸ್ತೆಯ ವೈಷ್ಣವಿ ಸಫಾಯರ್ ಮಾಲ್, ಥಣಿಸಂದ್ರದ ಎಲಿಮೆಂಟ್ಸ್ ಮಾಲ್, ಬನ್ನೇರುಘಟ್ಟ ರಸ್ತೆಯ ಮೀನಾಕ್ಷಿ ಮಾಲ್, ಚರ್ಚ್ ಸ್ಟ್ರೀಟ್ ಒನ್ ಶೋಭಾ ಮಾಲ್, ಬೆಳ್ಳಂದೂರಿನಲ್ಲಿರುವ ಸೆಂಟ್ರಲ್ ಮಾಲ್, ಬೆನ್ನಿಗಾನಹಳ್ಳಿಯಲ್ಲಿರುವ ಗೋಪಾಲನ್ ಸಿಗ್ನೇಚರ್ ಮಾಲ್, ಕೋರಮಂಗಲದಲ್ಲಿರುವ ನೆಕ್ಸಸ್ ಫೋರಮ್ ಮಾಲ್.

ಥಣಿಸಂದ್ರ ದಲ್ಲಿರುವ ಭಾರತೀಯ ಮಾಲ್ ಆಫ್ ಬೆಂಗಳೂರು ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿ ಟಿ ವರ್ಲ್ಡ್ ಮಾಲ್ ಗಳಲ್ಲಿ ಈ ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಆಹಾರ ಗುಣಮಟ್ಟ ಆಹಾರ ಕಲಬೆರಿಕೆ ಬಗ್ಗೆ ಅರಿವು ಮೂಡಿಸುವುದೇ ಈ ಪ್ರಯತ್ನದ ಉದ್ದೇಶ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾಲ್ ಆಫ್ ಏಷ್ಯಾದ ಜನರಲ್ ಮ್ಯಾನೇಜರ್ ರಾದ ಸತೀಶ್ ಸೇರಿದಂತೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟಿಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!