DKS: ಶಕ್ತಿ ಯೋಜನೆ ಮರುಚಿಂತನೆಗೆ ಮಹಿಳೆಯರಿಂದಲೇ ಒತ್ತಡ: ಡಿಸಿಎಂ

ಬೆಂಗಳೂರು; “ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸಿದ್ದು,. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DKS) ಅವರು ಹೇಳಿದರು

ವಿಧಾನಸೌಧದ ಮುಂಭಾಗ ಬುಧವಾರ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ (shakti scheme). ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದರು.

KSRTCಗೆ ಉತ್ತಮ ಹೆಸರು

ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕೆ ಎಸ್ ಆರ್ ಟಿ ಸಿ ಸಂಸ್ಥೆ ಹೆಸರು ಮಾಡಿದೆ. ಕಳೆದ ಒಂದು ವರ್ಷದಲ್ಲಿ 112 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಸಾಧನೆಗೆ ಸಂಸ್ಥೆಯ ನೌಕರರ ಶ್ರಮ ಕಾರಣ ಎಂದರು.

ಇದನ್ನೂ ಓದಿ: Cmsiddaramaiah: ನಾಡದೊರೆ ಹಾಸನಾಂಬೆಗೆ ಮೊರೆ

“ಐರಾವತ ಎಂದರೆ ಇಂದ್ರನ ವಾಹನ, ಆನೆ ಎಂದು ಅರ್ಥ. ಆನೆಯಂತೆ ಬಲಶಾಲಿ ಎಂದು ಅರ್ಥ. ವೋಲ್ವೋ ಸಂಸ್ಥೆಯ ಈ ಬಸ್ಸಿಗೆ 1.60 ಕೋಟಿ ಎಂದು ಸಂಸ್ಥೆಯವರು ಹೇಳಿದ್ದಾರೆ. ಇತ್ತೀಚಿಗೆ ನಾವು ಒಂದು ಕಾರು ತೆಗೆದುಕೊಳ್ಳಬೇಕು ಎಂದರೆ ಒಂದು ಕೋಟಿ ಮೀರುತ್ತದೆ” ಎಂದು ಡಿಕೆ ಶಿವಕುಮಾರ್ (DKS) ತಿಳಿಸಿದರು.

“ಕೆಎಸ್ಆರ್ ಟಿಸಿ ಪ್ರಾರಂಭವಾದಾಗ ಕೇವಲ 120 ಬಸ್ ಗಳು ಇದ್ದವು, ಇಂದು 24,282 ಬಸ್ ಗಳು ಇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್ ಗಳ ಖರೀದಿಗೆ ಮುಂದಾಗಿದೆ. ಇದರಲ್ಲಿ 3,400 ಬಸ್ ಗಳನ್ನು ಖರೀದಿ ಮಾಡಲಾಗಿದೆ. ಸುಮಾರು 9 ಸಾವಿರ ಡ್ರೈವರ್ ಹಾಗೂ ಕಂಡಕ್ಟರ್ ಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ” ಎಂದರು.

ಒಂದು ಸಾವಿರಕ್ಕೂ ಹೆಚ್ಚು ನೌಕರರ ಕುಟುಂಬಸ್ಥರಿಗೆ ಉದ್ಯೋಗ

“ಅನುಕಂಪದ ಆಧಾರದ ಮೇಲೆ ಒಂದು ಸಾವಿರಕ್ಕೂ ಹೆಚ್ಚು ನೌಕರರ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ನೌಕರರ ಕುಟುಂಬದವರಿಗೆ ಒಂದು ಕೋಟಿ ರೂ. ಪರಿಹಾರ ನೀಡಲಾಗಿದೆ. ಇಡೀ ಭಾರತದಲ್ಲಿಯೇ ಇಲ್ಲದ ಅತ್ಯುತ್ತಮವಾದ ವ್ಯವಸ್ಥೆ ನಮ್ಮಲ್ಲಿದೆ” ಎಂದರು.

ಕರ್ನಾಟಕ ಸಾರಿಗೆ ಸಂಸ್ಥೆಯನ್ನು ವ್ಯವಹಾರಕ್ಕಾಗಿ ಹುಟ್ಟಿಹಾಕಿಲ್ಲ. ನಾಗರಿಕರ ಸೇವೆಗಾಗಿ ಇದನ್ನು ಮೀಸಲಿಡಲಾಗಿದೆ. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ, ಇಂಧನ ಬೆಲೆ ಹೆಚ್ಚಾದ ತಕ್ಷಣ ಟಿಕೆಟ್ ದರವೂ ಹೆಚ್ಚಾಗಬೇಕು ಎನ್ನುವ ನಿಯಮ ಮಾಡಲಾಗಿತ್ತು.

ಸಂಸ್ಥೆಯಲ್ಲಿ ಈಗ ಶಿಸ್ತು ಬಂದಿದೆ. ಚಾಲಕರು ನಿಯಮಕ್ಕೆ ಅನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಸುಮಾರು 1.80 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ ಎಂದರು.

ಸರ್ಕಾರಕ್ಕೆ ಒಳ್ಳೆಯ ಹೆಸರು

“ಕೆಎಸ್ ಆರ್ ಟಿಸಿ ಸಂಸ್ಥೆ ಇದ್ದರೆ ಸರ್ಕಾರಕ್ಕೆ ಒಳ್ಳೆಯ ಹೆಸರು. ಖಾಸಗಿಯವರು ಸಂಸ್ಥೆಗೆ ಡಿಸೇಲ್ ಅನ್ನು ಕಡಿಮೆ ದರದಲ್ಲಿ ನೀಡುತ್ತೇವೆ ಎಂದು ಮುಂದೆ ಬಂದಿದ್ದಾರೆ. ಇದರ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಮುಂದುವರೆಯಲಾಗುವುದು” ಎಂದರು.

“ನಾನು ಈ ಹಿಂದೆ ಶಾಸಕನಾಗಿದ್ದಾಗ ಎರಡು ಮೂರು ಸಲ ಐರಾವತ ಬಸ್ ನಲ್ಲಿ ಪ್ರಯಾಣ ಮಾಡಿದ್ದೆ. ಇಂದು ಲೋಕಾರ್ಪಣೆಯಾಗಿರುವ ಐರಾವತ ಬಸ್ ನೋಡುತ್ತಿದ್ದರೆ ಬಹಳ ಸಂತೋಷವಾಗುತ್ತಿದೆ.

ಚುನಾವಣೆ ಸಮಯದಲ್ಲಿ ಪ್ರಚಾರಕ್ಕಾಗಿ ಇದೇ ಬಸ್ ಗಳನ್ನು ಬಳಸಲಾಗುತ್ತಿತ್ತು. ಅವಕಾಶ ಸಿಕ್ಕಾಗ ನಾನು ಐರಾವತ ಬಸ್ ನಲ್ಲಿ ದೂರ ಪ್ರಯಾಣ ಮಾಡುವೆ. ರಾಮಲಿಂಗಾರೆಡ್ಡಿಯವರೇ ನಮಗೂ ಪ್ರಯಾಣ ಮಾಡಲು ಒಂದು ಅವಕಾಶ ಒದಗಿಸಿ ಕೊಡಿ” ಎಂದರು.

“ರಾಮಲಿಂಗಾರೆಡ್ಡಿ ಅವರು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು, ಕಾಂಗ್ರೆಸ್ ಸರ್ಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡುತ್ತಿದ್ದಾರೆ. ಸಾರಿಗೆ ವ್ಯವಸ್ಥೆಯಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ” ಎಂದು ಡಿಕೆ ಶಿವಕುಮಾರ್ (DKS) ತಿಳಿಸಿದರು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!