RAshoka| ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ, ಸರ್ಕಾರಿ ಕಚೇರಿಗಳಿಗೆ ಬೀಗ: ಆರ್‌.ಅಶೋಕ ವಾರ್ನಿಂಗ್

ಬೆಂಗಳೂರು: ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್‌ ಕಾರ್ಡ್‌ ನೀಡಬೇಕು. ಕಾರ್ಡ್‌ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಎಚ್ಚರಿಕೆ ನೀಡಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ.ಅಶ್ವತ್ಥನಾರಾಯಣ ಮತ್ತು ಕೆ.ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು.

ನಂತರ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್‌ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ದೂರಿದರು.

14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್‌ ಸರ್ಕಾರ, ಮನೆಗೆ ಭೇಟಿ ನೀಡದೆ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಿದೆ.

ಈಗ 11 ಲಕ್ಷ ಕಾರ್ಡ್‌ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತದೆ. ಇದಕ್ಕೂ ಮುನ್ನ ಒಂದು ನೋಟಿಸ್‌ ನೀಡಿ, ಮಾಹಿತಿ ಪಡೆಯಬಹುದಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರ್ಕಾರ ಹೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ದುಡ್ಡಿಲ್ಲ

ಕಾಂಗ್ರೆಸ್‌ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರ್ಕಾರದ ಕತ್ತುಪಟ್ಟಿ ಹಿಡಿದಿದ್ದಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್‌ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್‌ ರದ್ದುಪಡಿಸಿದರೆ 20,000 ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್‌ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದರು.

ಸರ್ಕಾರದ ಈ ಕ್ರಮದಿಂದಾಗಿ ಬಡವರಿಗೆ ಯಾವುದೇ ಯೋಜನೆಗಳು ಸಿಗುವುದಿಲ್ಲ. ಸಹಾಯಧನ ಸಿಗುವುದಿಲ್ಲ. ಯಾವುದೇ ಕಾರಣಕ್ಕೂ ಇನ್ನು ಮುಂದೆ ರೇಷನ್‌ ಕಾರ್ಡ್‌ ರದ್ದು ಮಾಡಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ. ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು.

ರೇಷನ್‌ ಕಾರ್ಡ್‌ ನೀಡದಿದ್ದರೆ ಅಧಿಕಾರಿಗಳನ್ನು ಕೊಠಡಿಯಲ್ಲಿ ಹಾಕಿ ಕಚೇರಿಗೆ ಬೀಗ ಹಾಕುತ್ತೇವೆ. ಸರ್ಕಾರಕ್ಕೆ ನಿಜವಾಗಲೂ ತಾಕತ್ತಿದ್ದರೆ ಬೋಗಸ್‌ ಕಾರ್ಡ್‌ ಮಂಜೂರು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಉಚಿತ ಬಸ್‌ ಯೋಜನೆ ರದ್ದು ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮುಂದೆ ಉಚಿತ ವಿದ್ಯುತ್‌ ಯೋಜನೆ ಕೂಡ ರದ್ದಾಗಲಿದೆ. ಶಾಸಕರು ಅನುದಾನವಿಲ್ಲದೆ ದಂಗೆ ಏಳುವ ಸ್ಥಿತಿಗೆ ಹೋಗಿದ್ದಾರೆ. ಇದಕ್ಕಾಗಿ ಬಡವರ ಅನ್ನ ಕಿತ್ತಿರುವ ಕಾಂಗ್ರೆಸ್‌ ನರಕಕ್ಕೆ ಹೋಗುವುದು ಗ್ಯಾರಂಟಿ ಎಂದರು.

ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದೆ ಕಚೇರಿಯಲ್ಲಿ ಕುಳಿತು ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಿದ್ದಾರೆ. 22 ಲಕ್ಷ ಕಾರ್ಡುಗಳನ್ನು ರದ್ದುಗೊಳಿಸಲು ಇಲಾಖೆಗೆ ಗುರಿ ನೀಡಲಾಗಿದೆ ಎಂಬ ಮಾಹಿತಿಯಿದೆ. ಒಮ್ಮೆ ಕೊಟ್ಟು ಮತ್ತೆ ಕಿತ್ತುಕೊಳ್ಳುತ್ತಿರುವ ಕಟುಕ ಸರಕಾರಕ್ಕೆ ಬಡವರ ಕಣ್ಣೀರು ಕಾಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!