HDK: ಒಕ್ಕಲಿಗರ ಸಂಘದಲ್ಲಿ ಗುಂಪುಗಾರಿಕೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು: ಸಮಾಜದ ಶ್ರೇಯೋಭಿವೃದ್ಧಿಗಾಗಿ ಉದಾತ್ತ ಚಿಂತನೆಗಳಿಂದ ಜನ್ಮತಾಳಿರುವ ರಾಜ್ಯ ಒಕ್ಕಲಿಗರ ಸಂಘ ಇವತ್ತು ಗುಂಪುಗಾರಿಕೆಯಿಂದ ಸೊರಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ
ಕುಮಾರಸ್ವಾಮಿ (HDK) ಅವರು ಬೇಸರ ವ್ಯಕ್ತಪಡಿಸಿದರು.

ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಕೇಂದ್ರ ವೈದ್ಯಕೀಯ ಮಂಡಳಿಯಿಂದ ಹೆಚ್ಚುವರಿಯಾಗಿ 100 ಯುಜಿ ಹಾಗೂ 68 ಪಿಜಿ ಸೀಟುಗಳ ಮಂಜೂರು ಮಾಡಿಸಿಕೊಡುವಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೇಂದ್ರದ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಒಕ್ಕಲಿಗರ ಸಂಘ ಪ್ರತಿದಿನ ಗುಂಪುಗಾರಿಕೆ ಮೂಲಕ ಹೊರಗಡೆ ಸಂಘದ ಬಗ್ಗೆ ಜನ ಲಘುವಾಗಿ ಮಾತನಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ.

ಮೂರು ತಿಂಗಳು, ಆರು ತಿಂಗಳಿಗೆ ಒಮ್ಮೆ ಪದಾಧಿಕಾರಿಗಳನ್ನು ಬದಲಾವಣೆ ಮಾಡಿಕೊಂಡು ಗುಂಪುಗಾರಿಕೆ ನಡೆಸಿದರೆ ಸಂಘದ ಗತಿ ಏನು? ಒಕ್ಕಲಿಗ ಸಮಾಜದ ಮಕ್ಕಳ ಭವಿಷ್ಯದ ಪ್ರಶ್ನೆ ಏನು? ಎಂದು ಖಾರವಾಗಿ ಪ್ರಶ್ನಿಸಿದರು.

ಹಿಂದೆ ನಮ್ಮ ಒಕ್ಕಲು ಸಮಾಜದ ಪೂರ್ವಿಕರು ಸಂಘ ಕಟ್ಟಲು ಪಟ್ಟ ಶ್ರಮ ಏನು ಎಂಬುದನ್ನು ಈಗಿನ ಆಡಳಿತ ಮಂಡಳಿಯಲ್ಲಿರುವ 35 ಜನ ನಿರ್ದೇಶಕರು ಅರ್ಥ ಮಾಡಿಕೊಳ್ಳಬೇಕು. ಬೆಂದ ಮನೆಯಲ್ಲಿ ಗಳ ಇರಿಯುವಂತಹ ಜನರು ಕೂಡ ಸಂಘದಲ್ಲಿ ಸೇರಿಕೊಂಡಿದ್ದಾರೆ.

ಸಂಘಕ್ಕೆ, ಒಕ್ಕಲಿಗ ಸಮಾಜಕ್ಕೆ ಕಿಂಚಿತ್ತು ಒಳ್ಳೆಯದು ಮಾಡಬೇಕು ಎಂಬ ಹಂಬಲ ಹೊಂದಿರುವ ಕೆಲವರು ಕೂಡ ಈ ಸಂಘದಲ್ಲಿ ಇದ್ದಾರೆ. ಆದರೆ, ಸಂಘಕ್ಕೆ ಬಂದರೆ ಸಮಾಜಕ್ಕೆ ಒಳ್ಳೆಯದು ಮಾಡುವ ಬದಲು ಒಂದಷ್ಟು ಸಂಪಾದನೆ ಮಾಡಿಕೊಂಡು ಹೋಗೋಣ ಎಂದು ಸ್ವಾರ್ಥಿಗಳಾಗಿ ಆಲೋಚನೆ ಮಾಡುವ ವ್ಯಕ್ತಿಗಳಿಂದ ಸಮಾಜಕ್ಕೆ ಏನು ಉಪಯೋಗ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ಹೃದಯ ವೈಶಾಲ್ಯತೆ ಇರುವ ಸಮಾಜ ನಮ್ಮದು, ಎಲ್ಲರೂ ನಮ್ಮಂತೆಯೇ ಬದುಕಬೇಕು ಎಂದು ಬಯಸುವ ಸಮಾಜ ನಮ್ಮದು. ಆದರೆ, ನಾವೇ ಮಾಡಿಕೊಳ್ಳುತ್ತಿರುವ ತಪ್ಪುಗಳಿಂದ ನಾವು ಎಲ್ಲೋ ಅಲ್ಪಸಂಖ್ಯಾತರಾಗುತ್ತಿದ್ದೇವೇ ಎನ್ನುವ ಆತಂಕ ನನಗೆ ಉಂಟಾಗಿದೆ ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಅಪ್ರಾಮಾಣಿಕತೆ, ಅದಕ್ಷತೆ, ಸ್ವಾರ್ಥದಿಂದ ನಮ್ಮ ಸಮಾಜದ ಪ್ರತಿಷ್ಠೆಗೆ ಧಕ್ಕೆ ಆಗುತ್ತಿದೆ. ನಮ್ಮ ಸಮಾಜದಿಂದಲೇ ಬೆಳೆದು ದೊಡ್ಡವರಾದವರು ನಮ್ಮ ಸಮಾಜಕ್ಕೆ ಕಂಟಕರಾಗಿದ್ದಾರೆ. ಅಂತಹ ಪರಿಸ್ಥಿತಿಗೆ ನಾವೇ ಕಾರಣರಾಗುತ್ತಿದೇವೆ ಎಂದ ಕೇಂದ್ರ ಸಚಿವರು, ಬೆಂಗಳೂರು ನಗರದ ಹೃದಯ ಭಾಗದಲ್ಲಿ ಇಂತಹ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆ ಇದೆ, ರಾಜ್ಯದಲ್ಲಿಯೇ ಅತ್ಯಂತ ಉತ್ತಮ ಆಸ್ಪತ್ರೆ ಆಗಬೇಕಿತ್ತು. ಅಭಿವೃದ್ಧಿ ಆಗಿದೆ, ಆದರೆ ಅದು ಏನೇನಕ್ಕೂ ಸಾಲದು, ಗುಣಮಟ್ಟವೂ ಸಾಲದು. ಇಡೀ ರಾಜ್ಯದಲ್ಲಿಯೇ ನಂಬರ್ ವನ್ ಆಸ್ಪತ್ರೆ ಆಗಬೇಕಿತ್ತು. ಆಗಲಿಲ್ಲ ಯಾಕೆ ಎಂಬುದನ್ನು ನಿರ್ದೇಶಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಕೆ.ಹೆಚ್.ರಾಮಯ್ಯ ಅವರಂಥ ಮಹಾನುಭಾವರು ಸಂಘಕ್ಕೆ ಬುನಾದಿ ಹಾಕಿದರು. ಅನೇಕ ಮಹಾಪುರುಷರು ಸಂಘ ಬೆಳೆಸುತ್ತಾ ಹೋದರು. ಮರೀಗೌಡರು, ಗುತ್ತಲಗೌಡರು ಸಂಘಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಸಿಕೊಳ್ಳಲು ಕಂಕುಳಲ್ಲಿ ಫೈಲ್ ಗಳನ್ನು ಹಿಡಿದುಕೊಂಡು ಅಲೆಯುತ್ತಿದ್ದ ದಿನಗಳನ್ನು ನಾನು ನೋಡಿದ್ದೇನೆ.

ಅವರಿಬ್ಬರೂ ನಮ್ಮ ತಂದೆಯವರ ಬಳಿಗೆ ಬಂದು ಸಂಘದ ಬಗ್ಗೆ ಚರ್ಚೆ ಮಾಡುತ್ತಿದ್ದನ್ನು ನಾನು ಕಂಡಿದ್ದೇನೆ. ಅಂತಹ ಮಹನೀಯರ ತ್ಯಾಗ, ಬದ್ಧತೆಯ ಬಗ್ಗೆ ಈಗಿನ ಎಲ್ಲಾ ನಿರ್ದೇಶಕರು ಆತ್ಮಾವಲೋಕನ ಮಾಡಿಕೊಳ್ಳಬೇಕು, ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳಿ. ಸಂಘದ ಬಗ್ಗೆ ಜನ ಏನು ಮಾತನಾಡಿಕೊಳ್ಳುತ್ತಿದ್ದಾರೆ ಎಂಬುದು ನಿಮಗೆ ಅರ್ಥ ಆಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೂರು ತಿಂಗಳು, ಆರು ತಿಂಗಳಿಗೊಮ್ಮೆ ಸಂಘದ ಪದಾಧಿಕಾರಿಗಳ ಬದಲಾವಣೆ ಸರಿ ಅಲ್ಲ, ದೇಶ ವಿದೇಶಕ್ಕೆ ಕರೆದುಕೊಂಡು ಹೋಗಿ ಗುಂಪುಗಾರಿಕೆ ಮಾಡಬೇಡಿ. ಇದೆಲ್ಲಾ ಯಾವ ಪುರುಷಾರ್ಥಕ್ಕೆ? ನೀವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೀರಿ? ನಿಮ್ಮನ್ನು ನಂಬಿ ಮತ ಹಾಕಿ ಕಳಿಸಿದ ಜನರ ಬಗ್ಗೆ ಆಲೋಚನೆ ಮಾಡಿದ್ದೀರಾ? ಎಂದು ಗುಡುಗಿದರು.

ಕಿಮ್ಸ್ ನಂತಹ ಸಂಸ್ಥೆ ಕಟ್ಟುವುದು ಕಷ್ಟ, ಕೆಡವೋದು ಸುಲಭ. ಇದಕ್ಕೆ ಪೂರಕವಾಗಿ ಮತ್ತೆ ಒಕ್ಕಲಿಗರ ಸಂಘದಲ್ಲಿ ಪದಾಧಿಕಾರಿಗಳ ಬದಲಾವಣೆ ನಾಟಕ ನಡೆಯುತ್ತಿದೆ, ಅದಕ್ಕೆ ತರಾತುರಿಯಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೀರಿ ಎಂದು ನಿರ್ದೇಶಕರ ನಡವಳಿಕೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಹೆಚ್ಚುವರಿ ಸೀಟು ಕೊಡಿಸಿದ್ದೇವೆ ಎಂದು ನನಗೆ ಅಭಿನಂದನೆ ಬೇಕಿಲ್ಲ, ನನ್ನ ಕರ್ತವ್ಯ ನಾನು ಮಾಡಿದ್ದೇನೆ, ಜೆಪಿ ನಡ್ದಾ ಅವರ ಸಹಕಾರದಿಂದ ಇದು ಸಾಧ್ಯವಾಗಿದೆ. ಅನೇಕರ ಒತ್ತಾಸೆ ಇದರಲ್ಲಿ ಅಡಗಿದೆ. ಹೀಗಿದ್ದರೂ ಈ ಸಂಘದ ಕಾರ್ಯಕ್ರಮಕ್ಕೆ ಬರಲು ನನಗೆ ಮನಸ್ಸಿರಲಿಲ್ಲ, ಸಮಾಜಕ್ಕಾಗಿ ಬಂದಿದ್ದೇನೆ, ಸಮಾಜದ ಮಕ್ಕಳಿಗಾಗಿ ಬಂದಿದ್ದೇನೆ ಎಂದು ಹೇಳಿದರು.

ಬೇರೆ ಸಮಾಜಗಳ ಸಂಘಗಳು ಹೇಗೆ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿ, 35 ನಿರ್ದೇಶಕರು ಇದ್ದೀರಿ, ನಿಸ್ವಾರ್ಥವಾಗಿ ಕೆಲಸ ಮಾಡಿ. ನೀವು ಸರಿಯಾಗಿ ಕೆಲಸ ಮಾಡಿದ್ದಿದ್ದರೆ ಸಂಘ ನಂಬರ್ ವನ್ ಆಗುತ್ತಿತ್ತು. ಆದರೆ, ಇಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಮೊದಲು ಗುಂಪುಗಾರಿಕೆ ಬಿಡಿ, ಒಂದು ಕುಟುಂಬದ ರೀತಿಯಲ್ಲಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.

ಸಂಶೋಧನೆಗೆ ಹೆಚ್ಚು ಒತ್ತು ಕೊಡಿ

ಕಿಮ್ಸ್ ಆಸ್ಪತ್ರೆಯಲ್ಲಿ ಒಳ್ಳೆಯ ತಜ್ಞ ವೈದ್ಯರು ಇದ್ದೀರಿ. ವೈದ್ಯ ಸೇವೆಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ದಿ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಕಳೆದ ಬಾರಿ ನಾನು ಸಿಎಂ ಆಗಿದ್ದಾಗ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಗೆ ಹೆಚ್ಚು ಒತ್ತು ನೀಡಿದ್ದೆ.

ಕಿದ್ವಾಯಿ ಆಸ್ಪತ್ರೆಗೆ ಅನುದಾನ ಕೊಟ್ಟು ಬಡವರಿಗೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದೆ. ಆದರೆ ಅಲ್ಲಿ ನಿತ್ಯವೂ ಸಣ್ಣಪುಟ್ಟ ಔಷಧಿಗಳನ್ನು ಹೊರಗೆ ಬರೆದುಕೊಡುತ್ತಿದ್ದಾರೆ ಎನ್ನುವ ಮಾಹಿತಿ ನನಗೆ ಬಂದಿದೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಈ ಬಗ್ಗೆ ವೈದ್ಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಗಮನಕ್ಕೂ ತಂದಿದ್ದೇನೆ ಎಂದು ಹೇಳಿದರು.

ಬೆಂಗಳೂರು ವೈದ್ಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ 20% ಹೆಚ್ಚು ಶುಲ್ಕ ವಿಧಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳ ಚಿಕಿತ್ಸೆ ದುಬಾರಿ ಆಗುತ್ತಿದೆ. ಇದು ನಿಜಕ್ಕೂ ನೋವಿನ ಸಂಗತಿ, ಬಡ ಜನರಿಗೆ ಚಿಕಿತ್ಸೆ ಪಡೆಯಲು ಎಲ್ಲಿ ಸಾಧ್ಯ ಆಗುತ್ತದೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರು, ಆದಿಚುಂಚನಗಿರಿ ಮಹಾಸಂಸ್ಥಾನದ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದರು. ಒಕ್ಕಲಿಗರ ಸಂಘದ ಅಧ್ಯಕ್ಷ ಸಿ ಎನ್ ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಕಾಕಿನಾಡ: ತನ್ನ ಇಬ್ಬರು ಮಕ್ಕಳು ಓದಿನಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಬೇಸತ್ತ ತಂದೆಯೋರ್ವ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿರು ಘಟನೆ ಆಂದ್ರಪ್ರದೇಶದಲ್ಲಿ ವರದಿಯಾಗಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೇನಿಯ ವಾನಪಲ್ಲಿ ಚಂದ್ರಕಿಶೋರ್ ಅವರು ಕಾಕಿನಾಡ ಜಿಲ್ಲೆಯ ವಾಕಲಪುಡಿಯಲ್ಲಿರುವ ಒಎನ್‌ಜಿಸಿ ಕಚೇರಿಯಲ್ಲಿ

[ccc_my_favorite_select_button post_id="104149"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!