RAshoka; ವಕ್ಫ್‌ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ ಆಗ್ರಹ

ಬೆಂಗಳೂರು: ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದು ದೂರಿದರು.

ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ ಬಳಿಕ ರೇಷನ್‌ ಕಾರ್ಡ್‌ ಜಿಹಾದ್‌ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್‌ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು ಲಂಚ ಕೊಟ್ಟು ರೇಷನ್‌ ಕಾರ್ಡ್‌ ಮಾಡಿಸಿಕೊಳ್ಳಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಅದಕ್ಕಾಗಿ ಪ್ರತಿಯೊಂದಕ್ಕೂ ಶುಲ್ಕ ಏರಿಕೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿಧಿಸದ ವಸ್ತುಗಳೇ ಇಲ್ಲ. ಹರಿಯುವ ನದಿಗೂ ತೆರಿಗೆ ವಿಧಿಸಿದ್ದಾರೆ. ಇನ್ನು ಗಾಳಿಗೂ ತೆರಿಗೆ ವಿಧಿಸಬಹುದು. ಸರ್ಕಾರ ಪಾಪರ್‌ ಆಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಡ ಎಂದರು.

ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್‌ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ತಿದ್ದುಪಡಿ ಮಸೂದೆ ಬರಲಿದೆ

ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್‌ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!