RAshoka| ಬಡವರ ಪರವೆನ್ನುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ?; ಆರ್‌.ಅಶೋಕ

ಶ್ರೀರಂಗಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್‌ ಚಿಟ್‌ ಎನ್ನುತ್ತಿದ್ದಾರೆ. ಇದು ಕ್ಲೀನ್‌ ಚಿಟ್‌ ಅಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎಲ್ಲಿಯವರೆಗೆ ಬಡವರಿಗೆ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಪಾಪಿಗಳ ಸರ್ಕಾರ ಎಂದು ಹೇಳುತ್ತೇನೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್‌ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್‌ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದರು.

ಚುನಾವಣಾ ಫಲಿತಾಂಶವನ್ನು ಕ್ಲೀನ್‌ ಚಿಟ್‌ ಎನ್ನಲಾಗುವುದಿಲ್ಲ. ಕ್ಲೀನ್‌ ಚಿಟ್ ‌ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅದನ್ನು ಬಡವರಿಗೆ ನೀಡಬೇಕಿತ್ತು. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಆರೋಪಕ್ಕೆ ಸಾಕ್ಷಿ ಇಲ್ಲದೆ ಪ್ರಕರಣ ಬಿದ್ದುಹೋಗಿದೆ. ಇದನ್ನೇ ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ಜನರ ಮೇಲೆ ತೆರಿಗೆ ಹೊರೆ ಹೇರಿದೆ. ಜೊತೆಗೆ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ದೂರಿದರು.

ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ? ಮೇಕದಾಟು ಎಂದು ಪ್ರತಿಭಟನೆ ಮಾಡಿ, ಅಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮಾಡಿಲ್ಲ. ಒಂದೇ ಒಂದು ಆಸ್ಪತ್ರೆ ಕೂಡ ನಿರ್ಮಿಸಿಲ್ಲ. ಆದರೆ ಆಸ್ಪತ್ರೆಯಲ್ಲಿ ಶುಲ್ಕಗಳನ್ನು ಮಾತ್ರ ಏರಿಸಲಾಗಿದೆ. ಎಲ್ಲವೂ ಉಚಿತ ಎಂದು ಸುಳ್ಳು ಹೇಳಿ ಈಗ ಎಲ್ಲ ದರಗಳನ್ನು ಏರಿಸಲಾಗಿದೆ. ಮಹಿಳೆಯರಿಗೆ 2,000 ರೂ. ನೀಡುತ್ತಿದ್ದೇವೆ ಎಂದು ಹೇಳಿ ಇಡೀ ಕುಟುಂಬದ ಆರ್ಥಿಕತೆಯನ್ನು ಗುಡಿಸಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ವಕ್ಫ್‌ ಮಂಡಳಿಯಿಂದ ಹಿಂದೂ ದೇವಸ್ಥಾನಗಳ ಜಾಗ ಕಬಳಿಕೆಯಾಗಿದೆ. ಲಿಂಗಾಯತರ ಮಠದ ಜಾಗ, ಸ್ಮಶಾನ, ರೈತರ ಜಮೀನನ್ನು ತನ್ನದೇ ಎಂದು ವಕ್ಫ್‌ ಘೋಷಿಸಿಕೊಂಡಿದೆ. ಶ್ರೀರಂಗಪಟ್ಟಣದ ದೇವಸ್ಥಾನದ ಜಾಗವನ್ನು ಕೂಡ ವಕ್ಫ್‌ ಕಬಳಿಸಿದೆ. ಇಲ್ಲಿನ ಎಲ್ಲ ಭೂಮಿ ಮುಸ್ಲಿಮರದ್ದು ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದರು. ಈಗ ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಏನೂ ಉಳಿಯುವುದಿಲ್ಲ ಎಂದರು.

ಇದು ಹಣದ ಗೆಲುವು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಹಣದ ಗೆಲುವೇ ಹೊರತು ಕಾಂಗ್ರೆಸ್‌ ಗೆಲುವಲ್ಲ. ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್‌ ಅನವಶ್ಯಕವಾಗಿ ಬೀಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಸೋತಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಒಪ್ಪುವುದಿಲ್ಲ. ಕಾಂಗ್ರೆಸ್‌ಗೆ ಅಭ್ಯರ್ಥಿಯ ಗತಿ ಇಲ್ಲ ಎಂಬ ಕಾರಣಕ್ಕೆ ಬಿಜೆಪಿಯಲ್ಲಿದ್ದವರನ್ನು ಕರೆಸಿಕೊಳ್ಳಲಾಗಿದೆ. ಈ ಸೋಲಿನಿಂದ ಬಿಜೆಪಿಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ. ಇದು ಬಿಜೆಪಿಗೆ ಮಾನದಂಡವೂ ಅಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಈ ಸೋಲನ್ನೇ ಗೆಲುವಾಗಿ ಪರಿವರ್ತಿಸಲಾಗುವುದು ಎಂದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!