ಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ.ಕಲಬುರ್ಗಿ: ನಾಡೋಜ ಗೊ.ರು.ಚನ್ನಬಸಪ್ಪ (goru channabasappa)

ಧಾರವಾಡ: ಕಲಬುರ್ಗಿ ಅವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರು ಆಗಿದ್ದರು ಎಂಬುವುದಕ್ಕಲ್ಲ; ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ; ಅದಕ್ಕಿಂತ ಅವರಲ್ಲಿದ್ದ ಮಾನವೀಯ ಅಂಥಃಕರಣ ಎಂಬುದು ಅವರ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ನಾವು ಮಾಡುವಂತಹ ಕೆಲಸದಲ್ಲಿ ನಿಷ್ಠೆ ಇಲ್ಲದಿದ್ದರೆ ನಮ್ಮ ಬದುಕು ಶೃತಿ ಕೆಟ್ಟ ಸಂಗೀತವಾಗುತ್ತದೆ ಎಂದು ಹೇಳುತ್ತಿದ್ದರು. ಸಂಗೀತ ಮತ್ತು ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆಗಳು ಬರದಂತೆ ಎಚ್ಚರ ವಹಿಸಿದ ವ್ಯಕ್ತಿ ನಮ್ಮ ಕಲಬುರ್ಗಿಯವರು ಎಂದು ನಾಡೋಜ ಗೊ.ರು.ಚನ್ನಬಸಪ್ಪ (goru channabasappa) ಅವರು ಹೇಳಿದರು.

ಅವರು ಇಂದು ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಡಾ.ಎಂ.ಎಂ.ಕಲಬುರ್ಗಿ ಅವರ 86 ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ ಡಾ.ಎಂ.ಎಂ.ಕಲಬುರ್ಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಕಲಬುರ್ಗಿ ಅವರು ಯಾವುದೇ ಕೊರತೆ, ಹಸಿವು, ನಿದ್ದೆಗಳ ಹಂಗಿಲ್ಲದೆ ಕೆಲಸ ಮಾಡುವ ವ್ಯಕ್ತಿ ಆಗಿದ್ದರು. ಸಾಮಾನ್ಯವಾಗಿ ನಾವು ಸಮಗ್ರ ಎಂಬ ಪದವನ್ನು ಬಳಸುತ್ತೇವೆ. ಸಮಗ್ರ ಅಂದರೆ ಪೂರ್ಣವಾಗಿದ್ದು, ಒಟ್ಟಾಗಿರುವುದು ಎಂಬ ಅರ್ಥ ಇದೆ. ಲೋಕವ್ಯವಹಾರದಲ್ಲಿ ಸಮಗ್ರ ನೋಟ, ಸಮಗ್ರ ವರದಿ, ಸಮಗ್ರ ವ್ಯಕ್ತಿತ್ವ ಎಂಬ ಇಂತಹ ಪದಗಳನ್ನು ಬಳಸುತ್ತೇವೆ. ವ್ಯಕ್ತಿಗತವಾಗಿ ಅನ್ವಯಿಸುವುದಾದರೆ ಅದು ನಮ್ಮ ನೆಚ್ಚಿನ ಸಾಹಿತಿಗಳಾದ ಡಾ.ಎಂ.ಎಂ ಕಲಬುರ್ಗಿ ಅವರಿಗೆ ಅನ್ವಯಿಸುತ್ತದೆ ಎಂದರು.

ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು ಕಲಬುರ್ಗಿ ಅವರ ಸಮಗ್ರ ಲೇಖನಗಳು ಪ್ರಕಟವಾಗಬೇಕು. ಸರಕಾರ ಕಲಬುರ್ಗಿ ಟ್ರಸ್ಟ್ ಸ್ಥಾಪಿಸಿದೆ, ಅವರ ಮನಸ್ಸಿನಲ್ಲಿ ಏನು ಇತ್ತೋ ಅದೆಲ್ಲಾ ಇಂದು ನೆರವೇರುತ್ತಿದೆ. ಕಲಬುರ್ಗಿ ಅವರು ತಮ್ಮ ಸಾಧನೆ, ಅವರು ನಡೆದು ಬಂದ ಬದುಕು, ಇದಾವುದರ ಬಗ್ಗೆಯೂ ಸಹ ಬರೆಯಲಿಲ್ಲ.

ಅವರು ಸಂಶೋಧನೆ ಸ್ತರಗಳ ಬಗ್ಗೆ ಬರೆದರು. ಮುಂದೆ ಬರುವಂತಹ ವಿದ್ಯಾರ್ಥಿಲೋಕಕ್ಕೆ ತಿಳುವಳಿಕೆ ಉಂಟಾಗಬೇಕು. ಸಂಶೋಧನೆ ಅಂದರೆ ಏನು?, ಸಂಶೋಧನೆಯ ಬಗ್ಗೆ ಯಾಕೆ ಆಸಕ್ತಿಯನ್ನು ಹೊಂದಬೇಕು, ಸಂಶೋಧನೆಯ ಸ್ವರೂಪ ಯಾವುದು ಎಂಬುದನ್ನು ತಿಳಿಸಿಕೊಡುವುದು ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದರು.

ಡಾ.ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿ ಪುರಸ್ಕೃತ ಡಾ.ಶರಣಬಸಪ್ಪ ಮೇಡೆದಾರ ಅವರು ಮಾತನಾಡಿ, ಡಾ.ಎಂ.ಎಂ.ಕಲಬುರ್ಗಿ ಹೆಸರಿನ ಪ್ರಶಸ್ತಿ ಪಡೆದಿರುವುದಾಗಿ ತುಂಬಾ ಸಂತಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಹೆಚ್ಚು ಶರಣರ ವಚನಗಳು ಮತ್ತು ಸಾಹಿತ್ಯವನ್ನು ಉತ್ತಮವಾಗಿ ನಿಮ್ಮ ಮುಂದೆ ಹಾಡುತ್ತೇನೆ. ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಸ್ವತಃ ನಾನೇ ಬರೆದು ಕಲಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ. ಎಚ್. ಚನ್ನೂರ, ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಅಧ್ಯಕ್ಷ ವೀರಣ್ಣ ರಾಜೂರ, ಉಮಾದೇವಿ ಎಂ. ಕಲಬುರ್ಗಿ ಉಪಸ್ಥಿತರಿದ್ದರು.

ಡಾ. ಎಂ ಎಂ ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಸದಸ್ಯ ಶಶಿಧರ ತೊಡಕರ ಅವರು ಅತಿಥಿ ಪರಿಚಯ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು.

ಡಾ.ಈರಣ್ಣ ಇಂಜಗನೇರಿ ಅವರು ಕಾರ್ಯಕ್ರಮ ನಿರೂಪಿಸಿದರು. ಡಾ.ಎಂ.ಎಂ.ಲಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಸದಸ್ಯ ಡಾ.ಬಾಳಣ್ಣ ಶೀಗಿಹಳ್ಳಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಹಿರಿಯರು, ಗಣ್ಯವ್ಯಕ್ತಿಗಳು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ ರೂ ಚೆಕ್ ನೀಡಿದ ಸಿಎಂ

ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ

ಬೆಂಗಳೂರು; 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ (shabana azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಾವೇರಿ

[ccc_my_favorite_select_button post_id="103935"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದ ರೌಡಿಶೀಟರ್‌ನ ಬರ್ಬರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ಮುನಿರಾಜು (24 ವರ್ಷ), ರಾಜೇಶ್ (21 ವರ್ಷ), ಯತೀಶ್ ಗೌಡ (26 ವರ್ಷ), ವಿನಯ್ ಕುರ್ಮಾ (25 ವರ್ಷ) ಹಾಗೂ

[ccc_my_favorite_select_button post_id="103919"]
ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ ದಹನ

ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ

ಚಿಕ್ಕಬಳ್ಳಾಪುರ: ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ, ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದು ತಾಯಿ-ಮಗ ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ

[ccc_my_favorite_select_button post_id="103908"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!