BJP ಬಣ ಬಡಿದಾಟ; ಕೇಂದ್ರದ ತಂಡ ರಾಜ್ಯಕ್ಕೆ ದೌಡು.. ವಿಜಯೇಂದ್ರ ಹೇಳಿದ್ದೇನು ನೋಡಿ

ಬೆಂಗಳೂರು: ಕರ್ನಾಟಕದಲ್ಲಿ ಸೀಮಿತವಾಗಿದ್ದ ಬಿಜೆಪಿ (BJP) ಬಣ ಬಡಿದಾಟ ಇದೀಗ ರಾಷ್ಟ್ರ ರಾಜಧಾನಿಗೆ ಶಿಫ್ಟ್ ಆಗಿದೆ.

ಯತ್ನಾಳ್ ಅವರಿಗೆ ಶೋಕಾಸ್‌ ನೋಟಿಸ್‌ ನೀಡುತ್ತಿದ್ದಂತೆ, ರಾಜ್ಯದಲ್ಲಿ ಆರಂಭವಾಗಿರುವ ಅಂತಃಕಲಹವನ್ನು ದೆಹಲಿ ಮಟ್ಟದಲ್ಲಿಯೇ ಅಂತ್ಯ ಹಾಕುವ ಲೆಕ್ಕಾಚಾರದಲ್ಲಿ ಯತ್ನಾಳ್ ಬಣದ ನಾಯಕರು ಸಜ್ಜಾಗಿದ್ದಾರೆ.

ಸೋಮವಾರ ಬೆಳಗ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಕೇಂದ್ರದ ಮಾಜಿ ಸಚಿವ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಶೋಕಾಸ್‌ ನೋಟಿಸ್ ನೀಡಿ 10 ದಿನದಲ್ಲಿ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ ವಿಜಯೇಂದ್ರ, ಶೋಕಾಸ್ ನೋಟಿಸ್ ಅನ್ನು ಸ್ವಾಗತಿಸಿದರೆ, ಯತ್ನಾಳ್ ಮಾತ್ರ ಅಪ್ಪನ ಸಹಿಯನ್ನೆ ನಕಲು ಮಾಡಿದ ಮಗ ನೋಟೀಸ್ ಮಾಡಲ್ವೇ..? ಈ ನೋಟಿಸ್ ನಕಲಿಯಾಗಿರಬಹುದು ಎನ್ನುವ ಮೂಲಕ ಹೊಸ ವಿವಾದಕ್ಕೆ ಕಾರಣವಾಗಿದ್ದಾರೆ.

ಮೇಲ್ನೋಟಕ್ಕೆ ನೋಟಿಸ್ ನೀಡಿರುವುದು ವಿಜಯೇಂದ್ರ ಬಣಕ್ಕೆ ಮೇಲುಗೈ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಈ ನೋಟಿಸ್ ಮೂಲಕ ಯಡಿಯೂರಪ್ಪ ಅವರನ್ನು ಸಮಾಧಾನಿಸುವುದಕ್ಕೆ ಮಾತ್ರ ಇದು ಸೀಮಿತವಾಗಲಿದೆ ಎನ್ನಲಾಗುತ್ತಿದೆ.

ಕೇಂದ್ರ ತಂಡ ದೌಡು

ಬಿಜೆಪಿಯಲ್ಲಿ ಸಂಘಟನಾ ಪರ್ವ ನಡೆಯುತ್ತಿದೆ. ರಾಜ್ಯಾದ್ಯಂತ ಅಭಿಯಾನ ಬಿರುಸಿನಿಂದ ಸಾಗಿದ್ದು, ಮೌಲ್ಯಮಾಪನಕ್ಕೆ ಕೇಂದ್ರ ದಿಂದ ತಂಡ ಬೆಂಗಳೂರರಿಗೆ ಬಂದಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತಾಡಿದ ವಿಜಯೇಂದ್ರ, ಕೇಂದ್ರ ಸಂಘಟನಾ ಕಾರ್ಯದರ್ಶಿ ತರುಣ್ ಚುಗ್ ಆಗಮಿಸಿದ್ದಾರೆ. ಸದಸ್ಯತ್ವ ಅಭಿಯಾನದ ಬಗ್ಗೆ ಎಲ್ಲರೂ ಸುದೀರ್ಘ ಚರ್ಚೆ ನಡೆಸಲಿದ್ದೇವೆ. ಈ ಭೇಟಿಗೆ ರಾಜಕೀಯ ಬಣ್ಣ ಬೇಡ ಎಂದು ತಿಳಿಸಿದರು.

ಇದನ್ನೂ ಓದಿ; ಅಖಂಡ BJP ನಮ್ಮೊಂದಿಗಿದೆ.. ಅಪ್ಪಾಜಿ ಅನ್ನೋ ನನ್ಮಕ್ಕಳು ಅವರೊಂದಿಗಿದ್ದಾರೆ: ಯತ್ನಾಳ್ ಗುಡುಗು

ರಾಜ್ಯ ಬಿಜೆಪಿಯಲ್ಲಿನ ಅಂತರಿಕ ಭಿನ್ನಾಭಿಪ್ರಾಯದ ವಿಷಯಗಳನ್ನ ಚರ್ಚಿಸುವುದಿಲ್ಲ. ಇದರಲ್ಲಿ ರಾಜಕೀಯ ಬೇಡ, ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಮುಂದೆ ಅಸಮಾಧಾನ ಇರುವವರು ಮಾತನಾಡುತ್ತಾರೆ. ಇವತ್ತಿನ ಸಭೆಯಲ್ಲಿ ಕೇವಲ ಸಂಘಟನೆ ವಿಚಾರ ಚರ್ಚೆ ಆಗಲಿದೆ ಎಂದು ಹೇಳಿದರು.

ಯಾವುದೇ ರಾಜಕೀಯ ಅಸಮಾಧಾನ ಇದ್ದರೂ ಪಕ್ಷದ ವೇದಿಕೆಯಲ್ಲಿ ಎಲ್ಲರೂ ಚರ್ಚಿಸಬಹುದು. ಜಿಲ್ಲಾಧ್ಯಕ್ಷರು ಅವರ ಅಭಿಪ್ರಾಯ ಹೇಳಿಕೊಳ್ಳಲು ಸ್ವಾತಂತ್ರ್ಯ ಇದೆ. ಆದರೆ ಇವತ್ತಿನ ಕಾರ್ಯಕ್ರಮದಲ್ಲಿ ಕೇವಲ ಸಂಘಟನೆ ವಿಚಾರ ಚರ್ಚೆಗೆ ಮಾತ್ರ ಆದ್ಯತೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ

[ccc_my_favorite_select_button post_id="104181"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!