ಭಾರತೀಯ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ: ಎನ್.ಚಲುವರಾಯಸ್ವಾಮಿ (N.Chaluvaraya Swamy)

ಬೆಂಗಳೂರು: ಭವಿಷ್ಯದ ದೃಷ್ಟಯಿಂದ ಸ್ಟಾರ್ಟ್ ಅಪ್ ಗಳ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಲು ಇಂತಹ ಕಾರ‍್ಯಕ್ರಮಗಳನ್ನು ಆಯೋಜಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ.
ಈ ನಮ್ಮ ಪರಿಸರದ ವ್ಯವಸ್ಥೆಯೊಳಗೆ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಕೃಷಿಯಲ್ಲಿ ನಾವೀನ್ಯತೆಯ ಸಹಯೋಗ ಮತ್ತು ಸ್ಟಾರ್ಟ್ ಅಪ್ ಗಳ ವೇಗವರ್ಧನೆ ಮಾಡುವ ಗುರಿಯನ್ನು ಈ ಕಾನ್ಕ್ಲೇವ್ ಹೊಂದಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ (N.Chaluvaraya Swamy) ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕೃಷಿ ನಾವೀನ್ಯತೆ ಮತ್ತು ಉದ್ಯಮ ಶೀಲತೆಯನ್ನು ಉತ್ತೇಸುವ ಸಲುವಾಗಿ ಅಗ್ರಿ ಸ್ಟಾರ್ಟ್ ಅಪ್ ಕಾನ್ ಕ್ಲೇವ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಈ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಜ್ಞಾನ ವಿನಿಮಯಕ್ಕೆ ವೇದಿಕೆಯನ್ನು ಸೃಷ್ಟಿಸುತ್ತದೆ. ಅಲ್ಲದೇ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಎಂದು ತಿಳಿಸಿದರು.

ಇಂತಹ ಸಮ್ಮೇಳದ ಮೂಲಕ ಕೃಷಿಯನ್ನು ಮರು ರೂಪಿಸುವುದಲ್ಲದೇ ಅತ್ಯಾಧುನಿಕ ಕೃಷಿ ತಂತ್ರಜ್ಞಾನಕ್ಕೆ ಪರಿಹಾರ ಸೂಚಿಸುವಲ್ಲಿಯೂ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಸಚಿವರು, ಸ್ಟಾರ‍್ಟ್ಅಪ್ ಗಳು ಹೂಡಿಕೆದಾರರ, ಕಾರ್ಪೋರೇಟ್ ಗಳ ಮತ್ತು ನೀತಿ-ನಿರೂಪಕರ ನಡುವೆ ಸೇತುವೆ ಸಂಪರ್ಕವಾಗಿದೆ ಎಂದು ತಿಳಿಸಿದರು.

ಮುಂದಿನ ಪೀಳಿಗೆಗೆ ಕೃಷಿ ಹಾಗೂ ಕೃಷಿ ಉದ್ಯಮಿಗಳನ್ನು ಪ್ರೇರೇಪಿಸುವ ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಇಂತಹ ಸಮಾವೇಶ ಪ್ರೇರಣೀಯ. ಇತ್ತಿಚಿನ ದಿನಗಳಲ್ಲಿ ಪ್ರಕೃತಿ ಹಾಗೂ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯಂತ ವಿಚಾರಗಳನ್ನು ಚರ್ಚಿಸುವುದಕ್ಕೆ ಈ ವೇದಿಕೆ ಸೂಕ್ತವಾಗಿದೆ ಎಂದು ಕೃಷಿ ಸಚಿವರು ಹೇಳಿದರು..

ಡಿಸೆಂಬರ್ 31, 2023 ರ ಹೊತ್ತಿಗೆ 1,17,254 ಮನ್ನಣೆ ಪಡೆದ ಸ್ಟಾರ‍್ಟ್ಅಪ್ ಗಳೊಂದಿಗೆ 3 ನೇ ಅತಿದೊಡ್ಡ ಸ್ಥಾನವನ್ನು ಪಡೆದುಕೊಂಡಿರುವ ಭಾರತವು ಸ್ಟಾರ‍್ಟ್ಅಪ್ ನವ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಅಲ್ಲದೇ
ಈ ಸ್ಟಾರ‍್ಟ್ಅಪ್ ಗಳು 56 ವೈವಿಧ್ಯಮಯ ಕೈಗಾರಿಕಾ ವಲಯಗಳಲ್ಲಿ ವ್ಯಾಪಿಸಿದ್ದು 12.42 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿ ಮಾಡಿದೆ ರೂ.349.37 ಬಿಲಿಯನ್ ಮೊತ್ತದ ಕೃಷಿ ಸ್ಟಾರ‍್ಟ್ ಅಪ್ ಗಳು ಶೇ 5% ರಷ್ಟಿದ್ದು, ಕೃಷಿ ಮತ್ತು ಆಹಾರ ವ್ಯವಸ್ಥೆಗಳಲ್ಲಿ ನಿರ್ಣಾಯಕ ಸವಾಲುಗಳಿಗೆ ಇದು ಪರಿಹಾರವಾಗಿದೆ ಎಂದು ತಿಳಿಸಿದರು.

ಪ್ರಸ್ತುತ, ಭಾರತವು 2,800 ಮಾನ್ಯತೆ ಪಡೆದ ಅಗ್ರಿ-ಟೆಕ್ ಸ್ಟಾರ‍್ಟ್ಅಪ್ ಗಳಿಗೆ ನೆಲೆಯಾಗಿದೆ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಕೃಷಿ ಆವಿಷ್ಕಾರದ ಕೇಂದ್ರಗಳಾಗಿದ್ದು, ಈ ಸ್ಟಾರ್ಟ್ ಅಪ್ ಗಳಲ್ಲಿ ಸುಮಾರು 60% ರಷ್ಟು ಶ್ರೇಣಿ-1 ಮತ್ತು ಶ್ರೇಣಿ-2 ನಗರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಸಚಿವರು ತಿಳಿಸಿದರು..

ಕೃಷಿ-ತಂತ್ರಜ್ಞಾನದ ಬೆಳವಣಿಗೆಗೆ ಸ್ಟಾರ್ಟ್ ಅಪ್ ಗಳು ಪ್ರೇರಕವಾಗಿದ್ದು,
ಸರ್ಕಾರದ ಮೂಲಕ PM KISAN ಮತ್ತು ಅಗ್ರಿ-ಇನ್ಫ್ರಾ ಫಂಡ್ ನಂತಹ ಕಾರ‍್ಯಕ್ರಮಗಳು ಕೃಷಿಯಲ್ಲಿ ತಂತ್ರಜ್ಞಾನದ ಏಕೀಕರಣವನ್ನು ಪ್ರೋತ್ಸಾಹಿಸುತ್ತಿದ್ದು, ಹೂಡಿಕೆದಾರರ ಆಸಕ್ತಿಯಿಂದ ಆಹಾರ ಭದ್ರತೆ ಮತ್ತು ಸುಸ್ಥಿರ ಅಭ್ಯಾಸಗಳ ಮೇಲೆ ಜಾಗತಿಕ ಗಮನ ಹರಿಸುವಿಕೆಯಿಂದ ಈ ವಲಯವು ಹೂಡಿಕೆಯಲ್ಲಿ ತೀವ್ರ ಏರಿಕೆಯನ್ನು ಕಂಡಿದೆ.

ತಾಂತ್ರಿಕ ಪ್ರಗತಿಯಿಂದ AI ತಂತ್ರಜ್ಞಾನ ಕಲಿಕೆ ಮತ್ತು ಕೃಷಿಯಲ್ಲಿ IOT ಅಪ್ಲಿಕೇಷನ್ ಗಳ ಅಸಮರ್ಥತೆಗಳನ್ನು ಪರಿಹರಿಸಲು ಸಹಾಯ ಮಾಡುತ್ತಿದ್ದು,
ರಫ್ತು ಅವಕಾಶಗಳಿಂದ ಜಾಗತಿಕವಾಗಿ ಭಾರತೀಯ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಉತ್ಪಾದನೆ ಮತ್ತು ಪೂರೈಕೆಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದು ಸಚಿವರು ತಿಳಿಸಿದರು..

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ 50 ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳ ವಸ್ತು ಪ್ರದರ್ಶನವನ್ನು ಸಚಿವರು ಇದೇ ವೇಳೆ ವೀಕ್ಷಿಸಿ ಮಾಹಿತಿ ಪಡೆದುಕೊಂಡರು

ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಸುರೇಶ್, ಕೃಷಿ ವಿವಿಯ ನಿರ್ದೇಶಕರುಗಳು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು..

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!