ಕಾಂಗ್ರೆಸ್ ಸರ್ಕಾರದ ಕುರಿತು ಭವಿಷ್ಯ ನುಡಿದ ಬಸವರಾಜ ಬೊಮ್ಮಾಯಿ..!| (basavaraj bommai)

ಹುಬ್ಬಳ್ಳಿ: ಸಿಎಂ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ‌. ಆದರೆ, ಕಾಂಗ್ರೆಸ್ ನಲ್ಲಿ ಸಿಎಂ, ಡಿಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆದು ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (basavaraj bommai) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ.

ಫೆವಿಕಾಲ್ ಕಿತ್ತಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಎಲ್ಲವನ್ನು ಇವರಿಬ್ಬರೇ ಮಾಡಿದರೆ ನಮ್ಮದೇನು ಪಾತ್ರ ಅಂತ ಗೃಹ ಸಚಿವ ಪರಮೇಶ್ವರ್ ಗೆ ಬಂದಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಹೀಗಾಗಿ ಈ ಸರ್ಕಾರ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ಭವಿಷ್ಯ ನುಡಿದರು.

ಜೀರೋ ಸರ್ಕಾರ

ಹಾಸನದಲ್ಲಿ ನಡೆದ ಕಾಂಗ್ರೆಸ್ ಜನ ಕಲ್ಯಾಣ ಉತ್ಸವದ ಕುರಿತು ಕೇಳಿದ ಪ್ರಶ್ನೆಗೆ ಯಾವ ಪುರುಷಾರ್ಥಕ್ಕೆ ಹಾಸನದಲ್ಲಿ ಸಮಾವೇಶ ಮಾಡಿದರು. ಜನಕಲ್ಯಾಣ ಮಾಡಲಿ ಅಂತ ಅವರಿಗೆ ಜನ ಅಧಿಕಾರ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ನವರು ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ಇವರು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಜೀರೋ ಸರ್ಕಾರ. ಅಭಿವೃದ್ಧಿಯಲ್ಲಿ ಜೀರೋ, ಸಾಮಾಜಿಕ ನ್ಯಾಯಾಲಯದಲ್ಲಿ ಜೀರೋ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಜೀರೋ.

ಹಣಕಾಸಿನ ದಿವಾಳಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದೆ. ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಮಾಡುತ್ತಿದೆ. ಕೋರ್ಟ್ ನಲ್ಲಿ ನಡೆಯುತ್ತಿರುವ ಕೇಸ್ ಮೇಲೆ ಪ್ರಭಾವ ಬೀರಲು ಸಮಾವೇಶ ಮಾಡಿದ್ದಾರೆ. ಸರ್ಕಾರಿ ದುಡ್ಡಿನಲ್ಲಿ ಸಮಾವೇಶ ಆಯೋಜನೆ ಮಾಡಿದ್ದಾರೆ.
ಅದೇ ದುಡ್ಡನ್ನು ಅಭಿವೃದ್ಧಿಗೆ ಬಳಕೆ ಮಾಡಬಹುದಿತ್ತು. ಸಮಾವೇಶ ಮಾಡಿಕೊಳ್ಳುವ ಮೂಲಕ ಸಿಎಂ ತಮಗೆ ಆನೆ ಬಲ ತುಂಬಿಕೊಳ್ಳುವುದಲ್ಲ. ಜನರಿಗೆ ಆನೆ ಬಲ ತುಂಬುವ ಕೆಲಸ ಆಗಬೇಕಿದೆ. ಅಸ್ಥಿರತೆಯಲ್ಲಿ ಸಿದ್ದರಾಮಯ್ಯ ಕಾಲ ದೂಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ

ವಕ್ಫ್ ವಿರುದ್ಧ ಬಿಜೆಪಿ ಹೋರಾಟ ನಾಟಕ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ, ವಿರೋಧಪಕ್ಷವಾಗಿ ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವುದು ನಮ್ಮ ಕೆಲಸ , ಸಿಎಂಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ ಎಂದರು.

ಕೇಂದ್ರದಿಂದ 10 ಕೆಜಿ ಅಕ್ಕಿ ಕೊಟ್ಟಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ ಅಂತ ನಾವೆಲ್ಲೂ ಹೇಳಿಲ್ಲ. ಕಾಂಗ್ರೆಸ್ ನವರೇ 10 ಕೆಜಿ ಕೊಡುವುದಾಗಿ ಹೇಳಿದ್ದರು. ಆದರೆ, ಒಂದಗಳು ಅಕ್ಕಿಯನ್ನೂ ರಾಜ ಸರ್ಕಾರ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿದೆ ಅಂತ ಹೇಳಲು ಇವರಿಗೆ ನಾಚಿಕೆ ಎಂದು ಹೇಳಿದರು.

ಕೋರ್ ಕಮಿಟಿಯಲ್ಲಿ ಚರ್ಚೆ

ಬಿಜೆಪಿ ಬಣ ರಾಜಕಾರಣ ಸೇರಿದಂತೆ ಇತ್ಯಾದಿ ವಿಷಯಗಳು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಲಿವೆ. ಈಗಾಗಲೇ ಸದಸ್ಯತ್ವ ಅಭಿಯಾನ ಮುಗಿಸಿದ್ದೇವೆ.

ಸದಸ್ಯತ್ವ ಅಭಿಯಾನದ ನಂತರ ರಾಜಕೀಯವಾಗಿ ಹಲವಾರು ಬೆಳವಣಿಗೆಗಳು ನಡೆದಿವೆ
ಸಂಘಟನಾತ್ಮಕ ಬೆಳವಣಿಗೆ, ರಾಜಕೀಯ ಸ್ಥಿತಿಗತಿಗಳ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸುತ್ತೇವೆ. ಬಿಜೆಪಿಯ ಆಂತರಿಕ ವಿಚಾರಗಳೂ ಚರ್ಚೆಯಾಗಲಿವೆ ಎಂದರು.

ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಯಾಗಲಿ

ಬೆಳಗಾವಿ ಅಧಿವೇಶನ ಸಹ ಆರಂಭವಾಗುತ್ತಿದೆ. ಅಧಿವೇಶನದಲ್ಲಿ ಯಾವ ಹಗರಣಗಳನ್ನು ಕೈಗೆತ್ತಿಕೊಳ್ಳಬೇಕೆಂಬ ಕುರಿತು ಚರ್ಚೆಯಾಗಲಿದೆ.

ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಲೆಂದೇ ಬೆಳಗಾವಿ ಅಧಿವೇಶನ ಮಾಡಲಾಗುತ್ತದೆ. ಆ ರೀತಿ ನಡೆದುಕೊಳ್ಳುವ ಜವಾಬ್ದಾರಿ ಸರ್ಕಾರದ್ದು. ಆದರೆ ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕ ನೀರಾವರಿ ಯೋಜನೆ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಉತ್ತರ ಕರ್ನಾಟಕ ಸಮಸ್ಯೆಗಳು ಚರ್ಚಿಸುವ ನಿಟ್ಟಿನಲ್ಲಿ ಸದನ ಸಾಗಲಿ ಎಂದು ಹೇಳಿದರು.

ಸಂಸತ್ ಎದುರು ಉದ್ಯಮಿ ಅದಾನಿ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೇ ಅದಾನಿ ಜೊತೆ ವ್ಯವಹಾರ ಮಾಡಲಾಗಿದೆ. ಅದರ ಬಗ್ಗೆ ಕಾಂಗ್ರೆಸ್ ಮೊದಲು ಸ್ಪಷ್ಟೀಕರಣ ಕೊಡಲಿ ಎಂದು ತಿರುಗೇಟು ನೀಡಿದರು‌.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!