ದೊಡ್ಡಬಳ್ಳಾಪುರ (Doddaballapura): ತಾಲೂಕಿನ ವಿವಿಧ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಇದರ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ನಗರದ ಗಂಗಾಧರಪುರ, ರೋಜೀಪುರದಲ್ಲಿನ ಪ್ರಸನ್ನ “ವೀರಾಂಜನೇಯ ಸ್ವಾಮಿ” ದೇವಾಲಯದಲ್ಲಿ ಮಧ್ಯಾಹ್ನ 12ಕ್ಕೆ ಹನುಮಜಯಂತಿ ಅಂಗವಾಗಿ ರಥೋತ್ಸವ ನಡೆಯಿತು.
ಇದರ ಅಂಗವಾಗಿ ಕಳೆದ 11 ದಿನಗಳಿಂದ ಹನುಮಜಯಂತಿ ಅಂಗವಾಗಿ ವಿವಿಧ ಭಜನಾ ಮಂಡಳಿಗಳ ವತಿಯಿಂದ ರಾತ್ರಿ ಹಗಲು ನಿರಂತರವಾಗಿ ಭಜನೆಗಳು ನಡೆದಿದ್ದು ಹನುಮ ಜಯಂತಿಯಂದು ಮುಕ್ತಾಯವಾಗಲಿವೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಬೆಳಿಗ್ಗೆ 5 ಗಂಟೆಗೆ ಪಂಚಮೃತ ಅಭಿಷೇಕ, 7 ಗಂಟೆಗೆ ಸುರಭಿ ಭಜನಾ ಮಂಡಲಿಯವರಿಂದ ಭಜನೆ ಕಾರ್ಯಕ್ರಮ, 8.30ಕ್ಕೆ ಶ್ರೀ ರಾಮತಾರಕ ಹೋಮ, ಸಂಜೆ ನೆಲದಾಂಜನೇಯ ಸ್ವಾಮಿ ಪ್ರಾಕಾರೋತ್ಸವ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆಯಿತು.
ಅರಳು ಮಲ್ಲಿಗೆ ಬಾಗಿಲು ಸರ್.ಎಂ.ವಿಶ್ವೇಶ್ವರಯ್ಯ ವೃತ್ತದ ಶ್ರೀ ಪ್ರಸನ್ನ ಆಂಜಿನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಬೆಳಿಗ್ಗೆ 6ಗಂಟೆಗೆ ಮಹಾಭಿಷೇಕ, 9 ಗಂಟೆಗೆ ವಿಶೇಷ ಅಲಂಕಾರ, 10 ಗಂಟೆಗೆ ವಿಷ್ಣು ಸಹಸ್ರ ನಾಮ ಪಾರಾಯಣ,ದೇವರ ನಾಮಗಳ ಗಾಯನ ನಡೆಯಿತು. ರಾತ್ರಿ 9 ಗಂಟೆಗೆ ಆಂಜನೇಯಸ್ವಾಮಿ ಮೆರವಣಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.
ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಹೂವಿನ ಅಲಂಕಾರ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ರೈಲ್ವೆ ನಿಲ್ದಾಣ ವೃತ್ತದ ಬಳಿಯ ಪ್ರಸನ್ನ ಆಂಜನೇಯಸ್ವಾಮಿ, ತಾಲೂಕಿನ ಕೊಡಿಗೆಹಳ್ಳಿಯ ಅಭಯ ಆಂಜನೇಯಸ್ವಾಮಿ ದೇವಾಲಯ, ಮಜರಾಹೊಸಹಳ್ಳಿಯ ಆಂಜನೇಯಸ್ವಾಮಿ, ಸಿದ್ದೇನಾಯಕನ ಹಳ್ಳಿ, ಅರಳುಮಲ್ಲಿಗೆ ಕೆರೆ ಏರಿ ಅಭಯ ಆಂಜನೇಯಸ್ವಾಮಿ.

ದೊಡ್ಡಬಳ್ಳಾಪುರ ತಾಲೂಕಿನ ಅಮಾಮ್ ಗ್ರಾಮದಲ್ಲಿ ವಾಲಿ ಸುಗ್ರೀವ ಸಮೇತ ಶ್ರೀ ಆಂಜನೇಯ ಸ್ವಾಮಿಯ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು.
ಮೂಡ್ಲು ಕಾಳೆನಹಳ್ಳಿ, ರಾಗಿರಾಯನ ಗುಡ್ಡ, ಕೆರೆ ಏರಿ ಆಂಜನೇಯಸ್ವಾಮಿ ಮೊದಲಾಗಿ ನಗರ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ಜರುಗಿತು.

ಶಾಂತಿನಗರದ ಮುಖ್ಯ ರಸ್ತೆಯಲ್ಲಿರುವ ಶ್ರೀ ಮುತ್ಯಾಲಮ್ಮ ಸಾಂಸ್ಕೃತಿಕ ಸೇವಾ ಸಮಿತಿ ಹಾಗೂ ಶ್ರೀ ಮಹಾವೀರ ಆಂಜಿನೇಯ ಸ್ವಾಮಿ ದೇವಾಲಯದ ವತಿಯಿಂದ ಕನ್ನಡ ರಾಜ್ಯೋತ್ಸವ, ಹನುಮ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.