ಬೆಂಗಳೂರು ಗ್ರಾಮಾಂತರ ಜಿಲ್ಲೆ DC; ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಕಚೇರಿಗಳು, ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯದ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ಕಛೇರಿಯ ಸಮಯದಲ್ಲಿ ಆಗಮಿಸುತ್ತಿರುತ್ತಾರೆ.
ಕೆಲವೊಮ್ಮೆ ಸಾರ್ವಜನಿಕರು, ಸರ್ಕಾರ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳು ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ / ಧರಣಿ ಮಾಡುವ ಮೊದಲು ಜಿಲ್ಲಾಧಿಕಾರಿಯವರಿಂದ ಮತ್ತು ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದುಕೊಂಡು ಕಛೇರಿ ಸಮಯದಲ್ಲಿ ಶಾಂತಿಯುತ, ಸಾಂಕೇತಿಕ ಪ್ರತಿಭಟನೆ ಮಾಡಬಹುದಾಗಿರುತ್ತದೆ.
ಜಿಲ್ಲಾಡಳಿತ ಭವನದ ಸಮೀಪದಲ್ಲಿ ಯಾವುದೇ ಖಾಸಗಿ ವಸತಿ ಸಮುಚ್ಚಯಗಳಾಗಲಿ, ಸರ್ಕಾರಿ ವಸತಿ ಗೃಹಗಳಾಗಲಿ ಇರುವುದಿಲ್ಲ, ಸಾರ್ವಜನಿಕ ಸಂಚಾರ ತೀರಾ ವಿರಳವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಬಹುದಾದ್ದರಿಂದ, ಸಾರ್ವಜನಿಕರ ಸುರಕ್ಷತೆ / ಭದ್ರತಾ ಹಿತದೃಷ್ಟಿಯಿಂದ ಸರ್ಕಾರಿ ಕಛೇರಿಯ ಅವಧಿ ಮೀರಿ ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರತಿಭಟನೆ ಅಥವಾ ಧರಣಿ ಮಾಡಬಾರದೆಂದು ಸಾರ್ವಜನಿಕರಲ್ಲಿ ಮನವಿ.
ಒಂದು ವೇಳೆ ಯಾವುದೇ ಅನುಮತಿ ಇಲ್ಲದೆ ಪ್ರತಿಭಟನೆ / ಧರಣಿ ನಡೆಸಿದಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹವರ ವಿರುದ್ಧ ದಂಡ ಪ್ರಕ್ರಿಯಾ ಸಂಹಿತೆ, 1973 ಕಲಂ 129(1) k(2) ರೀತ್ಯಾ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.