ನೆಲಮಂಗಲ: ಲಾರಿಗಳ ನಡುವಿನ ಅಪಘಾತದ ನಂತರ ಕಂಟೇನರ್ವೊಂದು ಡಿವೈಡರ್ ಹಾರಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ (Accident) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಮಕ್ಕಳು, ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ವಿಜಯಪುರದ ಉದ್ಯಮಿ 48 ವರ್ಷದ ಚಂದ್ರ ಯಾವಪ್ಪವೋಳ, 16 ವರ್ಷದ ಧ್ಯಾನ್, 12 ವರ್ಷದ ದೀಕ್ಷಾ, 36 ವರ್ಷದ ವಿಜಯ ಲಕ್ಷ್ಮಿ, 42 ವರ್ಷದ ಗೌರಬಾಯಿ, 6 ವರ್ಷದ ಆರ್ಯ ಮೃತ ದುರ್ದೈವಿಗಳು.
ಟಿ.ಬೇಗೂರು ಬಳಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ.
ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್ ಬಿದ್ದಿದ್ದರಿಂದ ಅದರಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದ ಮೃತದೇಹಗಳು ಕೂಡ ಛಿದ್ರವಾಗಿವೆ. ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ನೆಲಮಂಗಲ ಪೊಲೀಸರ ಭೇಟಿ ನೀಡಿದ್ದು, ಕ್ರೇನ್ ಬಳಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದೆ.
Traffic advisory:
— SP Bengaluru District Police (@bngdistpol) December 21, 2024
Slow-moving traffic in Bengaluru-Tumkur national highway due to vehicle accidents between canter and car near Beguru in Nelmangla.
Kindly co-operate. pic.twitter.com/0x6FmlOKyo
ಕಂಟೈನರ್ ಲಾರಿ ಮೇಲೆ ಬಿದ್ದ ಪರಿಣಾಮ ಇನ್ನೋವಾ ಕಾರು ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.