ಕರುಣೆ, ಮಾನವೀಯತೆ ಇಲ್ವಾ..? ಸಿನಿಮಾ ಮಂದಿಯ ಗ್ರಹಚಾರ ಬಿಡಿಸಿದ ಸಿಎಂ ರೇವಂತ್ ರೆಡ್ಡಿ: ವೈರಲ್ Video ನೋಡಿ Pushpa 2

ಹೈದರಾಬಾದ್: ಪುಷ್ಪಾ 2 (Pushpa 2) ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದು, ಆಕೆಯ ಮಗು ಬ್ರೈನ್ ಡೆಟ್ ಆಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಾ ಆಸ್ಪತ್ರೆಯಲ್ಲಿದೆ.

ಈ ಕುರಿತು ನಿನ್ನೆ ವಿಧಾನಸಭೆ ಅಧಿವೇಶನದಲ್ಲಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಸ್ತಾಪಿಸಿದ ನಂತರ ಪ್ರತಿಕ್ರಿಯಿಸಿದ ಸಿಎಂ ರೇವಂತ್ ರೆಡ್ಡಿ, ಪುಷ್ಪಾ ಸಿನಿಮಾ ನಾಯಕ ಅಲ್ಲು ಅರ್ಜುನ್ ಸೇರಿದಂತೆ ಇಡೀ ಚಿತ್ರರಂಗದ ವರ್ತನೆಯ ವಿರುದ್ಧ ಕೆರಳಿ, ಗ್ರಹಚಾರ ಬಿಡಿಸುವಂತೆ ಮಾತನಾಡಿದ್ದು, ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.

ಅಂದಿನ ಘಟನೆಯ ವೀಡಿಯೊಗಳನ್ನು ಉಲ್ಲೇಖಿಸಿ ಮಾತನಾಡಿದ ಸಿಎಂ, ಅನುಮತಿ ಇಲ್ಲದೆಯೇ ಭಾರೀ ಜನಸಂದಣಿಯ ನಡುವೆಯೂ ರೋಡ್‌ಶೋ ನಡೆಸಿ ಜನರತ್ತ ಕೈ ಬೀಸಿ ಅಲ್ಲು ಅರ್ಜುನ್‌ ಉದ್ರೇಕಿಸಿದ್ದಾರೆಂದು ಆರೋಪಿಸಿದ್ದಾರೆ.

ಡಿಸೆಂಬರ್ 4 ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಮತ್ತು ಇತರರ ಭೇಟಿಗೆ ಭದ್ರತೆ ಕೋರಿ ಥಿಯೇಟರ್ ಆಡಳಿತವು ಡಿಸೆಂಬರ್ 2 ರಂದು ಪೊಲೀಸರಿಗೆ ಪತ್ರವನ್ನು ಸಲ್ಲಿಸಿದೆ. ಆದರೆ, ಜನಸಂದಣಿ ನಿರ್ವಹಣೆಯಲ್ಲಿನ ತೊಂದರೆಗಳು ಮತ್ತು ಥಿಯೇಟರ್‌ನಲ್ಲಿ ಇರುವ ಅಂಶವನ್ನು ಉಲ್ಲೇಖಿಸಿ ಪೊಲೀಸರು ಅರ್ಜಿಯನ್ನು ತಿರಸ್ಕರಿಸಿದರು. ಈ ವೇಳೆ ಕೇವಲ ಒಂದು ಪ್ರವೇಶ ಮತ್ತು ನಿರ್ಗಮನ ಮಾತ್ರ ಅನುಮತಿ ನೀಡಲಾಗಿತ್ತು.

ಡಿ.04 ರಂದಯ ಥಿಯೇಟರ್‌ಗೆ ಪ್ರವೇಶಿಸುವ ಮತ್ತು ನಿರ್ಗಮಿಸುವ ಮೊದಲು, ನಟ ತನ್ನ ಕಾರಿನ ಸನ್‌ರೂಫ್ ಮೂಲಕ ನಿಂತು ರೋಡ್‌ಶೋನಲ್ಲಿ ಜನಸಂದಣಿಯತ್ತ ಕೈಬೀಸಿದರು, ಇದು ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ನೂಕುನುಗ್ಗಲು ಕಾರಣವಾಯಿತು ಎಂದು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ಹಲವಾರು ಚಿತ್ರಮಂದಿರಗಳಿರುವುದರಿಂದ ನಟ ತಲುಪಿದಾಗ ಸಾವಿರಾರು ಅಭಿಮಾನಿಗಳು ಏಕಕಾಲಕ್ಕೆ ಜಮಾಯಿಸಿದರು.

ಈ ಸಂದರ್ಭದಲ್ಲಿ ನಟನ ಖಾಸಗಿ ಭದ್ರತಾ ಸಿಬ್ಬಂದಿಗಳು ಅಭಿಮಾನಿಗಳನ್ನು ಪಕ್ಕಕ್ಕೆ ತಳ್ಳಿತು, ಇದು ಕಾಲ್ತುಳಿತದಂತಹ ಪರಿಸ್ಥಿತಿಗೆ ಕಾರಣವಾಯಿತು.

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಳದಿಂದ ಹೊರಹೋಗುವಂತೆ ತಿಳಿಸಲು ಥಿಯೇಟರ್ ಆಡಳಿತವು ಆರಂಭದಲ್ಲಿ ಪೊಲೀಸ್ ಅಧಿಕಾರಿಯನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆದರೆ, ಅಧಿಕಾರಿಗಳು ನಟನನ್ನು ತಲುಪಿ ಅವರನ್ನು ಹೊರಹೋಗುವಂತೆ ಹೇಳಿದರು, ಏಕೆಂದರೆ ಅವರು ಹೊರಡದ ಹೊರತು ಜನರು ಹೋಗಲಿಲ್ಲ. ಆದರೆ ನಟ ಮಾತು ಕೇಳಲಿಲ್ಲ.

ನಂತರ ಸ್ಥಳಕ್ಕಾಗಮಿಸಿದ ಹಿರಿಯ ಪೊಲೀಸ್ ಅಧಿಕಾರಿ, ನಟನಿಗೆ ತಕ್ಷಣ ಸ್ಥಳದಿಂದ ಹೊರಹೋಗುವಂತೆ ಹೇಳಿದರು, ಹೋಗದಿದ್ದರೆ, ಪರಿಸ್ಥಿತಿ ಹತೋಟಿ ಮೀರಿದ್ದರಿಂದ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಬೇಕಾಗುತ್ತದೆ ಎಂದು ವಾರ್ನ್ ಮಾಡಿದರು.

ಈ ವೇಳೆ ಚಿತ್ರಮಂದಿರದಿಂದ ಹೊರಡುವಾಗಲೂ, ನಟ ಮತ್ತೆ ಪ್ರೇಕ್ಷಕರತ್ತ ಕೈ ಬೀಸಿದರು. “ಇವ ಯಾವ ರೀತಿಯ ವ್ಯಕ್ತಿ (ನಟ)” ಎಂದು ಅಲ್ಲು ಅರ್ಜುನ್ ವಿರುದ್ಧ ಕಿಡಿಕಾರಿದರು.

ಸಿನಿಮಾ ಮಂದಿ ವಿರುದ್ಧ ಸಿಎಂ ಕಿಡಿ

ಅಲ್ಲು ಅರ್ಜುನ್ ಅವರ ಬಂಧನದ ನಂತರ ಒಂದು ರಾತ್ರಿ ಜೈಲಲ್ಲಿ ಇದ್ದನೆಂದು ನಮ್ ಸರ್ಕಾರನ ಬೈದ್ರು, ನನ್ನ ಬೈದ್ರು.. ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಸಿನಿಮಾ ಮಂದಿ ದೌಡಾಯಿಸಿದ್ರು, ಏನಾಗಿದೆ ಆತನಿಗೆ ಕಾಲೋಗಿದೆಯಾ..? ಕೈ ಹೋಗಿದೆಯಾ..? ಕಿಡ್ನಿಗೇನಾದ್ರೂ ಪೆಟ್ಟು ಬಿದ್ದಿದೆಯಾ..? ಆತನ ಅಷ್ಟು ಜನ ಮಾತಾಡುಸ್ತಾರೆ.. ಆದರೆ ಇದೇ ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಭೇಟಿ ಮಾಡುವ ಸಹಾನುಭೂತಿ ತೋರಿಸಲಿಲ್ಲ.

ಅಂದಿನ ಘಟನೆಯಲ್ಲಿ ಗಾಯಗೊಂಡು ಮೆದುಳು ಸತ್ತಂತಹ ಪರಿಸ್ಥಿತಿಯನ್ನು ಆ ಮಗು ಎದುರಿಸುತ್ತಿದ್ದಾರೆ ಇವರೆಂತವರು ಅಧ್ಯಕ್ಷ ಎಂದು ಚಿತ್ರರಂಗದ ಗಣ್ಯರನ್ನು ಸಿಎಂ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಈ ಮಟ್ಟಕ್ಕೆ ಅಮಾನವೀಯರಾಗಬಾರದು ಎಂದು ನಾನು ಚಿತ್ರರಂಗದ ಪ್ರಮುಖರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

ಆ ತಾಯಿ ಸಾವನಪ್ಪಿದ ಸಂದರ್ಭದಲ್ಲಿ ಹಿಡಿದ ಮಗುವಿನ ಕೈಯನ್ನು, ಸತ್ತ ನಂತರವು.. ಬಿಟ್ಟಿರಲಿಲ್ಲ ಅಧ್ಯಕ್ಷ. ಆ ತಾಯಿ ಆ ಸಂದರ್ಭದಲ್ಲಿ ಪಟ್ಟ ಹಿಂಸೆ ಇವರಿಗ್ಯಾರಿಗಾದರು ಅರ್ಥ ಆಗುತ್ತದೆಯೇ ಎಂದು ಸಿಎಂ ರೇವಂತ್ ರೆಡ್ಡಿ ಭಾವುಕರಾಗಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಟ ಅಲ್ಲು ಅರ್ಜುನ್ ಹಾಗೂ ತೆಲುಗು ಸಿನಿಮಾ ಮಂದಿಯ ವಿರುದ್ಧ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ

[ccc_my_favorite_select_button post_id="105266"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!