Doddaballapura: ಸಂಭ್ರಮದ ಶ್ರೀ ವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರೆ

Channel Gowda
Hukukudi trust

ದೊಡ್ಡಬಳ್ಳಾಪುರ, (Doddaballapura): ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವರಪ್ರದ ಬೇಟೆ ರಂಗನಾಥಸ್ವಾಮಿ ಕೋಲು ಬೇಟೆ ಜಾತ್ರ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

hulukudi maharathotsava
Aravind, BLN Swamy, Lingapura

ಹುಲಿಕುಂಟೆ ಗ್ರಾಮದ ಬೇಟೆ ಕೊಡುವ ಕದಿರು ಆಲದ ಮರದ ದಿನ್ನೆಯವರೆಗೆ ಸಾಗಿದ ರಂಗನಾಥಸ್ವಾಮಿ ಉತ್ಸವದಲ್ಲಿ ರಾಜ್ಯದ ವಿವಿಧಡೆಗಳಿಂದ ಆಗಮಿಸಿದ್ದ ಸಹಸ್ರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು. ಪೇಟಧಾರಿ ಬೇಟೆ ರಂಗನಾಥಸ್ವಾಮಿಯನ್ನು ಹೂವುಗಳಿಂದ ಸಿಂಗರಿಸಲಾಗಿತ್ತು.

ಹುಲಿಕುಂಟೆ,ಮಾವಿನಕುಂಟೆ,ಸೀತಕಲ್ಲು,ಚಿಕ್ಕಬೆಳವಂಗಲ ಮತ್ತಿತರೆ ಗ್ರಾಮಗಳಿಂದ ಕೋಲು, ಕುಡುಗೋಲು, ಭರ್ಜಿಗಳನ್ನು ಹಿಡಿದುಕೊಂಡು ತಂಡೋಪ ತಂಡವಾಗಿ ಆಗಮಿಸಿ ಕೋಲು ಬೇಟೆ ಸಂಪ್ರದಾಯವನ್ನು ಸಾಂಕೇತಿಕವಾಗಿ ಆಚರಿಸಿದರು.

Hulukudi mahajathre
Aravind, BLN Swamy, Lingapura

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಯಲ್ಲಿ ಕೋಲುಬೇಟೆ, ವಿವಿಧ ರೀತಿಯ ತಿಂಡಿ ತಿನಿಸುಗಳ ಅಂಗಡಿಗಳು ಗಮನ ಸೆಳೆದವು.
ಸುಮಾರು 600 ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಇತಿಹಾಸ ಹೊಂದಿರುವ ಹುಲಿಕುಂಟೆ ಕೋಲುಬೇಟೆ ಕಾರಣಕ್ಕೆ ಮಹತ್ವದ್ದೆನಿಸಿದೆ.

ಮಾಗಡಿ ತಾಲ್ಲೂಕಿನ ಜನತೆಯ ಆರಾದ್ಯ ದೈವವಾದ ಮಾಗಡಿ ರಂಗನಾಥ, ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸುತ್ತಲಿನ ಜನರು ಪೂಜಿಸುವ ಹಣಬೆ ರಂಗನಾಥ ಮತ್ತು ಹುಲಿಕುಂಟೆ ಸುತ್ತಲಿನ ಜನತೆಯ ಆರಾದ್ಯ ದೈವ ಹುಲಿಕುಂಟೆ ಬೇಟೆ ರಂಗನಾಥ ಈ ಮೂರು ಐತಿಹಾಸಿಕ ವ್ಯಕ್ತಿಗಳ ಶಕ್ತಿ ಸಂಚಯನದ ಸಾಕಾರ ರೂಪವೇ ಹುಲಿಕುಂಟೆ ಬೇಟೆ ರಂಗನಾಥ.

ಮೂರೂ ಜನ ವ್ಯಕ್ತಿಗಳು ಸೇರಿ ತಮ್ಮ ಶಕ್ತಿಯನ್ನು ಕ್ರೋಢೀಕರಿಸಿ ಹುಲಿಕುಂಟೆಯಲ್ಲಿ ‘ಬೇಟೆ ರಂಗನಾಥಸ್ವಾಮಿ’ ಹೆಸರಿನ ಗುಡಿಯೊಂದನ್ನು ಕಟ್ಟಿ ವಿಗ್ರಹವೊಂದನ್ನು ಸ್ಥಾಪಿಸಿ ಯುದ್ಧವೊಂದಕ್ಕೆ ಸಿದ್ಧರಾಗುತ್ತಾರೆ.

ರಂಗನಾಥಸ್ವಾಮಿಯೇ ಬೇಟೆಯ ನಾಯಕ ಎಂದು ಈ ಆಚರಣೆಯನ್ನು ಸಾಂಕೇತಿಕವಾಗಿ ಈಗಲೂ ನಡೆಸುತ್ತ ಬರಲಾಗುತ್ತಿದೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ರಂಗನಾಥಸ್ವಾಮಿಗೆ ಮೊದಲ ಬಲಿ ಸಿಗುತ್ತದೆ. ಆ ಮೊದಲ ಬಲಿ ಸಿಕ್ಕ ಜಾಗದಲ್ಲಿ ಒಂದು ಮಂಟಪ ಕಟ್ಟಿ ಸ್ವಾಮಿಯನ್ನು ಶಾಂತಗೊಳಿಸಲಾಗುತ್ತದೆ.

ಈಗಲೂ ಅದೇ ಜಾಗದಲ್ಲಿ ಬೇಟೆ ಮುಗಿಸಿಕೊಂಡು ಬಂದ ಬೇಟೆ ರಂಗನಾಥಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಕುರಿತ ಆಚರಣೆಗೆ ‘ಕೋಲು ಬೇಟೆ’ ಎಂದೇ ಕರೆಯಲಾಗುತ್ತದೆ. ಪ್ರತಿ ವರ್ಷದ ಶೂನ್ಯ ಮಾಸದ ಕಡೆಯ ಗುರುವಾರ ಈ ಆಚರಣೆ ನಡೆಯುತ್ತದೆ.

ಬೆಳೆಗಳ ಕೊಯ್ಲು ಮುಗಿದು ದಾನ್ಯ ಮನೆಗೆ ಬರುವ ಕಾಲವಾದ್ದರಿಂದ ದಾನ್ಯಗಳನ್ನು ಹೊಲಗಳಲ್ಲಿಯೇ ಕೂಡಿಡುವ ಪರಿಪಾಟವಿದ್ದುದರಿಂದ ಸುತ್ತಲಿನ ಪ್ರದೇಶದ ಪ್ರಾಣಿಗಳನ್ನು ನಿಯಂತ್ರಿಸುವ ಕಾರಣಕ್ಕೆ ಸುತ್ತಲಿನ ಜನ ಬೇಟೆಯಾಡಿ ಪ್ರಾಣಿಗಳನ್ನು ನಿಯಂತ್ರಿಸುವ ಪದ್ಧತಿ ಬೆಳೆದು ಬಂದಿರಬಹುದು ಎನ್ನಲಾಗಿದೆ.

ಹಳ್ಳಿಗಳ ಜನ ಸುತ್ತಲಿನ ಕಾಡುಗಳನ್ನು ತಿರುಗಿ,ಕೋಲು ಹಿಡಿದುಕೊಂಡು ಈ ಸ್ಥಳಕ್ಕೆ ಬಂದು ಸೇರಿ ಸಾಂಪ್ರದಾಯಿಕ ಕೋಲು ಬೇಟೆ ಆಚರಣೆಯನ್ನು ಮಾಡಲಾಗುತ್ತದೆ.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!