Murder news update: ಬಾಶೆಟ್ಟಿಹಳ್ಳಿ ದೇವರಾಜ್ ಹತ್ಯೆ ಪ್ರಕರಣ; 3ನೇ ಆರೋಪಿ ಬಂಧನ..!

ದೊಡ್ಡಬಳ್ಳಾಪುರ, Murder news update: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬ ರಿಯಲ್ ಎಸ್ಟೇಟ್ ಹಣದ ಮನಸ್ತಾಪದಿಂದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೆಳೆಯರಿಂದಲೇ ಕೊಲೆಯಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಡಪ ಮೂಲದ ನಾಗಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಕೊಲೆಯಾದ ವ್ಯಕ್ತಿ ಬಾಶೆಟ್ಟಿಹಳ್ಳಿ ನಿವಾಸಿ ದೇವರಾಜ ಅವರ ಶವವನ್ನು ನಾಶಪಡಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಸವಾಲಿನ ಈ ಪ್ರಕರಣವನ್ನು ಭೇದಿಸಿರುವ ಸಾಧಿಕ್ ಪಾಷಾ ನೇತೃತ್ವದ ಪೊಲೀಸರು, ಇದಕ್ಕೂ ಮುನ್ನ ಗೌರಿಬಿದನೂರಿನ ರಾಜಕುಮಾ‌ರ್ ಮತ್ತು ಅಂಧ್ರಪ್ರದೇಶದ ಕಂಡಪದ ಅನಿಲ್ ಮೋರೆ ಎಂಬುವರನ್ನು ಕೊಲೆ ಆರೋಪದಲ್ಲಿ ಬಂಧಿಸಿದ್ದಾರೆ.

ಹಿನ್ನಲೆ: ಬಾಶೆಟ್ಟಿಹಳ್ಳಿಯಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದ ದೇವರಾಜ ಎಂದು ಕುಟುಂಬಸ್ಥರು ಇದೇ ಅಕ್ಟೋಬರ್ 18 ರಂದು ಕಾಣೆಯಾಗಿದ್ದಾರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ತನಿಖೆ ಆರಂಭಿಸಿದ ಇನ್‌ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ದೇವರಾಜ ಮೊಬೈಲ್ ಕರೆಗಳ ಆಧಾರದ ಮೇಲೆ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ವಿಷಯ ಬಹಿರಂಗಗೊಂಡಿದೆ.

ಕಟ್ಟಡ ನಿರ್ಮಾಣ ಗುತ್ತಿಗೆದಾರ ಅನಿಲ್ ಮೋರೆ ಹಾಗೂ ರಾಜಕುಮಾರ್ ಈ ಇಬ್ಬರೂ ತನಗೆ ₹20 ಲಕ್ಷ ಕೊಡಬೇಕಿರುವ ಸಂಗತಿಯನ್ನು ದೇವರಾಜ ತಮ್ಮ ಪತ್ನಿ ಬಳಿ ಹೇಳಿಕೊಂಡಿದ್ದರು.

ಆರೋಪಿಗಳಾದ ರಾಜಕುಮಾರ್, ಅನಿಲ್ ಮೋರೆ ಮೃತ ದೇವರಾಜ ಸ್ನೇಹಿತರು. ಮೂವರು ಸೇರಿ ರಿಯಲ್ ಎಸ್ಟೇಟ್ ವಹಿವಾಟಿನಲ್ಲಿ ತೊಡಗಿದ್ದರು. ಹಣಕಾಸಿನ ವಿಷಯದಲ್ಲಿ ಜಗಳ ಮಾಡಿಕೊಂಡಿದ್ದರು. ಇದರಿಂದ ಉಂಟಾದ ಮನಸ್ತಾಪದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ನಡೆಸುವ ಸಂಚಿನಿಂದ ಆರೋಪಿಗಳು ದೆಹಲಿಯಿಂದ ಕಾರು ಖರೀದಿಸಿ ತಂದಿದ್ದರು. ಹಣ ನೀಡುವುದಾಗಿ ಪುಸಲಾಯಿಸಿ ದೇವರಾಜ ಅವರನ್ನು ಕಾರಿನಲ್ಲಿ ಕರೆದೊಯ್ದು ಸ್ನೇಹಿತರು ಕಾರಿನಲ್ಲಿಯೇ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ ಕೊಲೆ ಮಾಡಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಶವವನ್ನು ದೊಡ್ಡಬಳ್ಳಾಪುರ ಹೊರವಲಯದ ಇನ್ಫೊ ಸಿಟಿಯಲ್ಲಿ ಗುಂಡಿ ತೋಡಿ ಮುಚ್ಚಿ ಹಾಕಿದ್ದರು. ಪೊಲೀಸರ ತನಿಖೆ ಸುಳಿವು ಸಿಗುತ್ತಿದ್ದಂತೆಯೇ ಬಂಧಿತ ಮೂರನೇ ಆರೋಪಿ ನಾಗಪ್ರಸಾದ್ ಮೂಲಕ ಶವವನ್ನು ಹೊರತೆಗೆದಿದ್ದ ಆರೋಪಿಗಳು, ಅರೆಬರೆಯಾಗಿ ಸುಟ್ಟು ತಾಲ್ಲೂಕಿನ ಮಧುರೆ ಕೆರೆಗೆ ಎಸೆದಿದ್ದರು. ಕೊಲೆ ನಂತರ ಆರೋಪಿಗಳು ಕಾರನ್ನು ಕೋಲಾರ ಮೂಲದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳೊಂದಿಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮೃತನ ತಲೆ ಕೂದಲು, ಚಪ್ಪಲಿ ಮತ್ತಿತರ ವಸ್ತುಗಳು ಸಿಕ್ಕಿವೆ. ಈ ವಸ್ತುಗಳು ದೇವರಾಜ್ ಅವರಿಗೆ ಸೇರಿದ್ದು ಎಂದು ಕುಟುಂಬ ಸದಸ್ಯರು ಗುರುತಿಸಿದ್ದಾರೆ.

ಕಳೆದ ಶುಕ್ರವಾರ ಮಧ್ಯಾಹ್ನ ಮಧುರೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಅರೆ ಬೆಂದಿದ್ದ ಮೂಳೆಗಳು ದೊರೆತಿವೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ನಂತರ ಮೂಳೆ ಯಾರವು ಎಂದು ಖಚಿತವಾಗಲಿದೆ.

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ

[ccc_my_favorite_select_button post_id="105266"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!