Daily Story| ಹರಿತಲೇಖನಿ ದಿನಕ್ಕೊಂದು ಕಥೆ: ವೀರ ಅಭಿಮನ್ಯು

Daily Story: ಮಹಾಭಾರತದಲ್ಲಿ ಒಂದೊಂದು ಪಾತ್ರವೂ ಒಂದೊಂದು ನೈಪುಣ್ಯವನ್ನು ಬಿಂಬಿಸುತ್ತದೆ. ವಿವೇಚನೆಗೆ ಧರ್ಮರಾಯನಾದರೆ, ಬಿಲ್ವಿದ್ಯೆಗೆ ಅರ್ಜುನ, ಬಲಪರಾಕ್ರಮಕ್ಕೆ ಭೀಮನಾದರೆ ಪ್ರತಿಜ್ಞೆಗೆ ಭೀಷ್ಮ ಪಿತಾಮಹರನ್ನು ಉದಾಹರಿಸಲಾಗುತ್ತದೆ. ಕಪಟತನಕ್ಕೆ ಶಕುನಿಯಾದರೆ ಶೌರ್ಯಕ್ಕೆ ಅಭಿಮನ್ಯು ಹೆಸರುವಾಸಿಯಾಗಿದ್ದಾರೆ.

ಇಡಿಯ ಮಹಾಭಾರತದಲ್ಲಿ ಸೌಂದರ್ಯಕ್ಕೆ ಯಾವುದೇ ಮಹತ್ವ ಕಂಡುಬರುವುದಿಲ್ಲ, ಕೇವಲ ಪರಾಕ್ರಮ, ವೀರಮರಣ, ನ್ಯಾಯ ನೀತಿ, ಮುಂತಾದ ಸತ್ಯಾಸತ್ಯತೆಗಳೇ ಹೆಚ್ಚಾಗಿ ನಮಗೆ ಕಂಡುಬರುತ್ತದೆ. ಇಲ್ಲಿ ಮನುಷ್ಯನ ಬಾಹ್ಯರೂಪಕ್ಕಿಂತಲೂ ಆಂತರಿಕ ಗುಣಕ್ಕೆ ಹೆಚ್ಚಿನ ಮಹತ್ವ ನೀಡಬೇಕೆಂದು ಮಹಾಭಾರತ ಕಲಿಸುವ ಸತ್ಯ.

ಅರ್ಜುನ ಮತ್ತು ಸುಭದ್ರೆಯ ಮಗ ಅಭಿಮನ್ಯುನೇ ಇಂದಿನ ನಮ್ಮ ಲೇಖನದ ಕಥಾನಾಯಕ. ಬಿಲ್ವಿದ್ಯೆಯಲ್ಲಿ ಅತ್ಯಂತ ಪ್ರಾವೀಣ್ಯತೆಯನ್ನು ಹೊಂದಿದ್ದ ಈತ ಪಾಂಡವರಲ್ಲೇ ಕಳಶವಿಟ್ಟಂತಹ ವ್ಯಕ್ತಿತ್ವ ಹೊಂದಿದ್ದ.

ಒಮ್ಮೆ ಸುಭದ್ರೆ ಅಭಿಮನ್ಯುವನ್ನಿನ್ನೂ ಗರ್ಭದಲ್ಲಿಟ್ಟುಕೊಂಡಿದ್ದಾಗ ಕೃಷ್ಣನು ಯುದ್ಧದ ಅತ್ಯಂತ ಕ್ಲಿಷ್ಟಕರವಾದ ಚಕ್ರವ್ಯೂಹದ ಬಗ್ಗೆ ವಿವರ ನೀಡುತ್ತಿದ್ದ. ಇದರಲ್ಲಿ ವೃತ್ತಕಾರದಲ್ಲಿ ಸೈನ್ಯ ವ್ಯೂಹ ರಚಿಸುವುದು, ಅದರೊಳಗೆ ನುಸುಳುವುದು ಎಷ್ಟು ಕಷ್ಟವೋ ಅದರಿಂದ ಜೀವಸಹಿತ ಹೊರಬರುವುದು ಇನ್ನೂ ಕಷ್ಟ. ವ್ಯೂಹದೊಳಗೆ ನುಗ್ಗುವ ಪರಿಯನ್ನು ಹೇಳುತ್ತಿದ್ದಂತೆಯೇ ಗರ್ಭದಲ್ಲಿದ್ದ ಅಭಿಮನ್ಯು ಇದನ್ನು ಕೇಳಿಸಿಕೊಂಡು ತನ್ನ ಮನದಾಳದಲ್ಲಿ ಆಗಲೇ ಸ್ಥಾಪಿಸಿದ್ದ.

ಎಲ್ಲವನ್ನು ಬಲ್ಲ ಕೃಷ್ಣ ಕಥೆಯನ್ನು ಅರ್ಧದಲ್ಲೇ ನಿಲ್ಲಿಸಿದ…! ಆದರೆ ಅಷ್ಟು ಹೊತ್ತಿಗೆ ದಣಿವಿನಿಂದ ನಿದ್ದೆಗೆ ಜಾರಿದ ಸುಭದ್ರೆ ಮುಂದಿನ ಮಾತುಗಳನ್ನು ಕೇಳಿಸಿಕೊಳ್ಳಲಿಲ್ಲ.

ಸುಭದ್ರೆ ನಿದ್ದೆಹೋದುದನ್ನು ತಿಳಿದ ಕೃಷ್ಣನು ತನ್ನ ಮಾತುಗಳನ್ನು ಅಲ್ಲಿಗೇ ನಿಲ್ಲಿಸಿದ. ಇದರಿಂದ ಅಭಿಮನ್ಯುವಿಗೆ ಚಕ್ರವ್ಯೂಹದಿಂದ ಹೊರಬರುವ ಮಾಹಿತಿ ಸಿಗದೇ ಹೋಯಿತು. ಮುಂದಿನ ಮಾಹಿತಿ ಸಿಗುವಂತೆ ಗರ್ಭದಲ್ಲಿಯೇ ಒದ್ದಾಗ ಸುಭದ್ರೆಗೆ ಎಚ್ಚರವಾದರೂ ಆಗ ತಡವಾಗಿತ್ತು. ಕೃಷ್ಣನು ತನ್ನ ಮಾತುಗಳನ್ನು ನಿಲ್ಲಿಸಿಯಾಗಿತ್ತು..!

ಈ ವೇಳೆಗೆ ಪಾಂಡವರ ಮತ್ತು ಕೌರವರ ನಡುವೆ ಕುರುಕ್ಷೇತ್ರದ ಯುದ್ಧ ಪ್ರಾರಂಭವಾಗಿತ್ತು. ಮಹಾಭಾರತ ಯುದ್ಧ ಪ್ರಾರಂಭವಾದಾಗ ಅಭಿಮನ್ಯುವಿಗೆ ಕೇವಲ 16 ವರ್ಷ ವಯಸ್ಸು. ಆತನು ಅತ್ಯಂತ ಪರಾಕ್ರಮಿಯಾಗಿದ್ದರೂ ಶತ್ರುಗಳು ಈತನಿಗಿಂತ ಹೆಚ್ಚು ಅನುಭವ ಹಾಗೂ ತಂತ್ರಗಾರಿಕೆಯನ್ನು ಹೊಂದಿದ್ದು, ಈತನಿಗೆ ಯುದ್ಧದಲ್ಲಿ ಏಕಾಂಗಿಯಾಗಿ ಹೋರಾಡಲು ಹೆಚ್ಚಿನ ತರಬೇತಿ ಹಾಗೂ ಅನುಭವದ ಕೊರತೆಯಿತ್ತು.

ಅತೀ ಮುಖ್ಯವಾದ ಸಂಗತಿಯೆಂದರೆ, ಕುರುಕ್ಷೇತ್ರ ಯುದ್ಧ 13ನೇ ದಿನವಾದ ಅಂದು ಆತನು ಪಾಂಡವರ ಜಯದ ಹಾಗೂ ಸೋಲಿನ ನಡುವಿನ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದನು. ಈತನಿಲ್ಲದಿದ್ದರೆ ಯುಧಿಷ್ಟಿರನು ಕೌರವರ ಮುಷ್ಠಿಗೆ ಬಲಿಯಾಗಿ ಹೋಗುತ್ತಿದ್ದನು ಹಾಗೂ ಪಾಂಡವರ ಸೋಲು ಖಚಿತವಾಗುತ್ತಿತ್ತು.

ಅಭಿಮನ್ಯುವಿಗೆ ಚಕ್ರವ್ಯೂಹವನ್ನು ಬೇಧಿಸುವ ತಂತ್ರಗಾರಿಕೆಯ ಕೊಂಚ ಮಾತ್ರ ತಿಳಿದಿತ್ತು. ಯುದ್ಧದಲ್ಲಿ ಎದುರಿಗೆ ಬಂದವರ ಮೇಲೆ ನಿರಾಯಾಸವಾಗಿ ದಾಳಿ ಮಾಡುತ್ತಿದ್ದನು. ಹಾಗೇ ಚಕ್ರವ್ಯೂಹದ ಒಳಕ್ಕೆ ನುಗ್ಗಿದಾಗ ಅವನಿಗೆ ನಂತರ ಅನುಸರಿಸಬೇಕಾದ ವಿಧಾನವು ಹೊಳೆಯಲಿಲ್ಲ. ಆತನಿಗೆ ಚಕ್ರವ್ಯೂಹದ ಒಳಕ್ಕೆ ನುಗ್ಗುವ ತಂತ್ರವು ಮಾತ್ರ ಗೊತ್ತಿದ್ದು, ಅದರಿಂದ ಜಯಶಾಲಿಯಾಗಿ ಹೊರಬರುವ ವಿದ್ಯೆ ತಿಳಿದಿರಲಿಲ್ಲ. ಆದ್ದರಿಂದಲೇ, ಆತ ವಿವಿಧ ವಿಧಾನದಲ್ಲಿ ಮುನ್ನುಗ್ಗದೇ, ಏನೂ ತೋಚದೆ ನಿಂತಲ್ಲಿಯೇ ಎದುರಾಳಿಗಳೊಂದಿಗೆ ಹೋರಾಡುವ ಸ್ಥಿತಿ ಒದಗಿತು.

ಹೀಗಿರುವಾಗ ಪಾಂಡವರ ಸೈನ್ಯವಾಗಲೀ ಅಥವಾ ಅವನ ಬುದ್ಧಿಶಕ್ತಿಯಾಗಲೀ ಸಹಾಯಕ್ಕೆ ಬರಲಿಲ್ಲ. ಕೊನೆಯದಾಗಿ ಚಕ್ರವ್ಯೂಹದಲ್ಲೇ ಏಕಾಂಗಿಯಾಗಿ ಹೋರಾಡಿ ವೀರಮರಣವನ್ನಪ್ಪಿದನು.

ಇಂದಿಗೂ ಅಭಿಮನ್ಯುವಿನ ಹೋರಾಟ ಮತ್ತು ಪರಾಕ್ರಮ ಮಹಾಭಾರತದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ.

ಕೃಪೆ; ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ) ಸಾಮಾಜಿಕ ಜಾಲತಾಣದಲ್ಲಿನ ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!