ಬಸ್ ಟಿಕೆಟ್ ಬೆಲೆ ಏರಿಕೆಗೆ HDK ಕಿಡಿ: ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲವೆಂದು ಬೇಸರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ ಎಂದು ಹರಿಹಾಯ್ದರು.

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಅವರು ಕಿಡಿಕಾರಿದರು.

ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ ಪ್ರಯಾಣ ದರ ಏರಿಕೆಗೇ ಅಡ್ಜೆಸ್ಟ್ ಆಗುತ್ತಾರೆ. ಇದು ನೈಜ ಪರಿಸ್ಥಿತಿ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ

ಇದೇ ಕಾಂಗ್ರೆಸ್ ಸರಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿತ್ತು. ಜನರು ಪ್ರತಿಭಟನೆ ಮಾಡಿದರೆ? ಇಲ್ಲ, ಅದಕ್ಕೆ ಅಡ್ಜೆಸ್ಟ್ ಆದರು. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದರು. ಗೈಡ್ ಲೈನ್ಸ್ ವ್ಯಾಲ್ಯೂ, ಮದ್ಯದ ದರವನ್ನು ಏರಿಕೆ ಮಾಡಿದರು. ಹಾಲಿನ ದರವನ್ನು ಏರಿಕೆ ಮಾಡುತ್ತಾರಂತೆ. ಈಗ ನೀರಿನ ದರವೂ ಏರಿಕೆ ಆಗುತ್ತದೆ ಎನ್ನುವ ಮಾಹಿತಿ ಬರುತ್ತಿದೆ.

ಎಲ್ಲಾ ದರಗಳನ್ನು ಸರಕಾರ ಏರಿಕೆ ಮಾಡುತ್ತಿದೆ. ಆದರೆ, ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ, ಪ್ರತಿಭಟನೆ ಮಾಡುತ್ತಿಲ್ಲ. ಬೆಲೆ ಏರಿಕೆಗೆ ಜನರ ಸಮ್ಮತಿ ಇದೆ ಎಂದು ಸರಕಾರ ಭಾವಿಸಿದಂತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಹೊಸ ವರ್ಷದಲ್ಲಿ ರಾಜ್ಯ ಸರಕಾರ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ ಘೋಷಣೆ ಮಾಡಬೇಕಿತ್ತು. ಆದರೆ, ಬೆಲೆ ಏರಿಕೆ ಘೋಷಣೆ ಮಾಡಿದೆ. ಬೆಲೆ ಏರಿಕೆಗೆ ವರ್ಷಪೂರ್ತಿ ತಯಾರಾಗಿ ಎಂದು ಸರ್ಕಾರ ಜನರಿಗೆ ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.

ಅನಿವಾರ್ಯ ಇದ್ದಾಗ ಮಾತ್ರ ಬೆಲೆ ಏರಿಕೆ ಮಾಡುವುದನ್ನು ನೋಡಿದ್ದೇವೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಅನಿವಾರ್ಯವಿದ್ದಾಗ ಬೆಲೆ ಏರಿಕೆ ಮಾಡುವುದು, ಕಡಿಮೆ ಮಾಡುವುದು ಸಾಮಾನ್ಯ. ಆದರೆ, ಇವರು ಮಾಡಿರುವ ತಪ್ಪಿಗೆ ಜನರ ಮೇಲೆ ಬರೆ ಎಳೆಯುತ್ತಿದ್ದಾರೆ. ಎಲ್ಲಾ ಸಮಸ್ಯೆಗಳನ್ನೂ ಸರಕಾರವೇ ಮೈ ಮೇಲೆ ಎಳೆದುಕೊಂಡಿದೆ ಎಂದು ಅವರು ಟೀಕಿಸಿದರು.

ವಿದ್ಯುತ್ ಇಲಾಖೆ ಏನಾಗುತ್ತದೋ?

ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆ ಏನಾಗುತ್ತದೋ ನೋಡಬೇಕು. ಸರಕಾರದ ಅಸಮರ್ಪಕ ನಿರ್ವಹಣೆಯಿಂದ ಇಲಾಖೆ ಹಾಳಾಗುತ್ತಿದೆ. ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಮಾಡಿದ್ದಾರೆ. ಇದುವರೆಗೆ ಎಷ್ಟು ಯುವ ಜನರಿಗೆ ಹಣ ಹೋಗಿದೆ. ಈ ಸರಕಾರ ಸ್ವೇಚ್ಚಾಚ್ಚರವಾಗಿ ಹಣ ಖರ್ಚು ಮಾಡುತ್ತಿದೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವರು ಕಿವಿಮಾತು ಹೇಳಿದರು.

ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಸರಕಾರ. ಈ‌ ಸರಕಾರ ಬಂದ ದಿನದಿಂದ ಇದೇ ನಡೆಯುತ್ತಿದೆ. ಹೀಗೆ ಹೇಳುತ್ತಾ ಹೋದರೆ ಬಹಳಷ್ಟು ಹೇಳಬಹುದು. ಸಂಕ್ರಾಂತಿ ಕಳೆಯಲಿ, ಆಮೇಲೆ ಈ ಸರಕಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!