HD Kumaraswamy ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ..!

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಬುಧವಾರ ಸಚಿವ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾದ ಕುಮಾರಸ್ವಾಮಿ ಅವರು; ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಸಚಿವರಲ್ಲಿ ಮನವಿ ಮಾಡಿದರು.

ಕುಮಾರಸ್ವಾಮಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಗಡ್ಕರಿ ಅವರು; ಆದಷ್ಟು ಬೇಗ ಯೋಜನೆಯ ಪ್ರಸ್ತಾವನೆಯನ್ನು ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee – PPPAC) ಮುಂದೆ ಮಂಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸುವುಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದರು.

ಏನಿದು ಉಪನಗರ ವರ್ತುಲ ರಸ್ತೆ?

ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ನಾನಾ ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ.

ನಾಲ್ಕರಿಂದ ಆರು ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.

ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ.

2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ.

ಕುಮಾರಸ್ವಾಮಿ ಅವರು ಹೇಳಿದ್ದೇನು?

ಎಂಟು ವರ್ಷಗಳಿಂದ ಬಾಕಿ ಇದ್ದ ಭೂಸ್ವಾಧೀನ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ಪಾವತಿ ಮಾಡಲು ಸಚಿವ ಗಡ್ಕರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!