KPCC President's seat will be given by the media..?

KPCC ಅಧ್ಯಕ್ಷ ಸ್ಥಾನ ಮೀಡಿಯಾಗಳು ಕೊಡ್ತಾರ..?: ಡಿಸಿಎಂ ಡಿಕೆ ಶಿವಕುಮಾರ್ ಕೌಂಟರ್ Video ನೋಡಿ

Channel Gowda
Hukukudi trust

ಬೆಂಗಳೂರು: “ಕೆಪಿಸಿಸಿ (KPCC) ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivarajkumar) ಅವರು ಖಾರವಾಗಿ ಪ್ರತಿಕ್ರಿಯಿಸಿದರು.

hulukudi maharathotsava
Aravind, BLN Swamy, Lingapura

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

Hulukudi mahajathre
Aravind, BLN Swamy, Lingapura

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ.

ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು.

“ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು.

ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ

“ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ.

ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ.

ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ

“ಈ ಪಕ್ಷವನ್ನು ಕೇವಲ ಡಿಕೆ ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ.

ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ.

ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ.

ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, “ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು.

ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು” ಎಂದು ತಿಳಿಸಿದರು.

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!