Daily story A pandit named Sujnani

Daily story| ಹರಿತಲೇಖನಿ ದಿನಕ್ಕೊಂದು ಕಥೆ: ಸುಜ್ಞಾನಿ ಎಂಬ ಪಂಡಿತ

Daily story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಅವನ ಆಸ್ಥಾನಕ್ಕೆ ಒಮ್ಮೆ ಸುಜ್ಞಾನಿ ಎಂಬ ಪಂಡಿತ ಬಂದ. ಅವನು ರಾಜನನ್ನು ಕುರಿತು, “ಮಹಾರಾಜರೇ, ನಿಮ್ಮ ಆಸ್ಥಾನದ ಪಂಡಿತರು ಕೇಳಿದ ಯಾವುದೇ ಪ್ರಶ್ನೆಗೆ ತೃಪ್ತಿಕರ ಉತ್ತರ ನೀಡುವೆ. ನಿಮಗೆ ಸರಿ ಎನಿಸಿದರೆ ತಕ್ಕ ಕಾಣಿಕೆ ನೀಡಿರಿ” ಎಂದು ಬೇಡಿಕೊಂಡನು.

ರಾಜನ ಒಪ್ಪಿಗೆಯ ಮೇರೆಗೆ ಸಭೆ ಕರೆಯಲಾಯಿತು. ಒಬ್ಬ ಆಸ್ಥಾನದ ಪಂಡಿತನು ಸುಜ್ಞಾನಿಯನ್ನು ಕುರಿತು. “ಸಕಲ ಮಾನವ, ಪಕ್ಷಿ, ಪ್ರಾಣಿ, ಕ್ರಿಮಿ ಕೀಟಗಳು ಹಾಗೂ ಗಿಡ ಮರಗಳನ್ನು ಕಾಪಾಡುವ ಕರುಣಾಮ ತಾಯಿ ಯಾರು? ಎಂದು ಕೇಳಿದನು. ಸುಜ್ಞಾನಿ ಪಂಡಿತನು.

“ಭೂಮಿ ತಾಯಿ. ಮಾನವನಿಗೆ ಮನೆ ಕಟ್ಟಲು ಕಲ್ಲು – ಮಣ್ಣು, ಕಟ್ಟಿಗೆ ಕೊಡುವವಳು ಭೂಮಿತಾಯಿ. ಜೋಳ – ಗೋಧಿ ಮುಂತಾದ ಆಹಾರ ಧಾನ್ಯ ಬೆಳೆಯುವವಳು ಅವಳು. ಗಿಡಗಳ ಮೂಲಕ ಹಣ್ಣು, ಕಾಯಿ ನೀಡುವಳು. ಹೊಳೆ, ಕೆರೆ, ಸರೋವರ ಮೂಲಕ ನೀರು ಕೊಡುವವಳು ಭೂಮಿ ತಾಯಿಯೇ” ಎಂದು ಉತ್ತರಿಸಿದನು.

ಎರಡನೇಯ ಪಂಡಿತನು, “ಸಕಲ ಜೀವಿಗಳನ್ನು ರಕ್ಷಣೆ ಮಾಡುವ ನಿಜವಾದ ರಾಜನು ಯಾರು” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು “ನಿಜವಾದ ರಾಜನೆಂದರೆ ಮಳೆರಾಜನೆ. ಮಳೆರಾಜನು ಸುರಿಸುವ ಮಳೆ ನೀರಿನಿಂದಲೇ ರೈತ ಆಹಾರ ಧಾನ್ಯ ಬೆಳೆಯುತ್ತಾನೆ.

ಲತೆಗಳು ಹೂ ಕೊಡುವವು. ಗಿಡಗಳು ಹಣ್ಣು ಕೊಡುವವು. ಹೊಳೆ ಕೆರೆಗಳು ನೀರು ಕೊಡುವುದು ಮಳೆ ರಾಜನ ಕೃಪೆಯಿಂದಲೇ. ಈ ರೀತಿಯಲ್ಲಿ ಸಕಲ ಜೀವಿಗಳನ್ನು ರಕ್ಷಿಸುವ ರಾಜನೆಂದರೆ ಮಳೆರಾಜನೆ” ಎಂದು ಉತ್ತರಿಸಿದನು.

ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?

ಮೂರನೇಯ ಪಂಡಿತನು. “ಮಾನವ ಶರೀರವನ್ನು ಆರೋಗ್ಯಪೂರ್ಣವಾಗಿ ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು.

“ನಮ್ಮ ಶಾರೀರಿಕ ಆರೋಗ್ಯ ಚೆನ್ನಾಗಿರಲು ಒಳ್ಳೆಯ ಶುಚಿಯಾದ ಆಹಾರ ಹಾಗೂ ಸ್ವಚ್ಛ ನೀರೆ ಬೇಕು. ಅನುಭವಿಗಳು ಇದನ್ನೇ “ಕೂಳು ಕುತ್ತು, ನೀರು ಪಿತ್ತು” ಅಂದಿದ್ದಾರೆ. ಅಂದರೆ ಅಶುದ್ಧ ಆಹಾರ ಹಾಗೂ ಹೊಲಸು ನೀರು ನಮ್ಮ ಶರೀರವನ್ನು ರೋಗಮಾಯ ಮಾಡುತ್ತವೆ.

ಸತ್ವಯುತ ಬಿಸಿ ಬಿಸಿ ಹಿತಮಿತವಾದ ಆಹಾರ ಹಾಗೂ ಪರಿಶುದ್ಧವಾದ ನೀರು ಆರೋಗ್ಯಪೂರ್ಣ ಬೆಳವಣಿಗೆಯ ಎರಡು ಮುಖ್ಯ ವಸ್ತುಗಳಾಗಿವೆ” ಎಂದು ಉತ್ತರಿಸಿದನು.

ನಾಲ್ಕನೇಯ ಆಸ್ಥಾನ ಪಂಡಿತನು, “ನಿಸರ್ಗದಲ್ಲಿ ಜೀವಿಸುವ ಪಕ್ಷಿ, ಪ್ರಾಣಿ, ಮನುಷ್ಯ, ಸಸ್ಯ, ಕ್ರಿಮಿ ಕಿಟಾದಿಗಳು ನಿಜವಾದ ದೇವರು ಯಾರು? ಎಂದು ಕೇಳಿದನು. ಸುಜ್ಞಾನಿಯು, “ಆಹಾರವಿಲ್ಲದೆ – ನೀರಿಲ್ಲದೆ ಯಾವು ಜೀವಿಯು ಬದುಕಲಾರದು. ಆಹಾರ ಧಾನ್ಯಗಳು ಹುಲುಸಾಗಿ ಬೆಳೆಯಲು ಸೂರ್ಯನ ಬಿಸಿಲು, ಬೆಳಕು ಅವಶ್ಯಕ.

ಸೂರ್ಯನ ಪ್ರಖರ ಕಿರಣಗಳಿಂದ ಸಮುದ್ರದ ನೀರು ಕಾಯ್ದು ಉಗಿಯಾಗಿ, ಅದ್ರವಾಗಿ ಮೇಲೆ ಹೋಗುತ್ತದೆ. ಆ ಉಗಿಗೆ ತಂಪು ತಗುಲಿದಾಗ, ಮೋಡಗಳಿಂದ ಮಳೆ ಸುರಿಯುತ್ತದೆ.

ಈ ರೀತಿ ಸುರಿದ ಮಳೆಯಿಂದ ಬೆಳೆಗಳು ಬೆಳೆದು ನಮ್ಮ ಆಹಾರವಾಗಿ ಜೀವಿಸಲು ನೆರವಾಗುತ್ತವೆ. ಮಳೆಯಿಂದ ಪಡೆದ ನೀರು ಕುಡಿಯಲು ಉಪಯೋಗವಾಗುತ್ತದೆ. ಹೀಗೆ ನಮ್ಮನ್ನು ಕಾಪಾಡುವ ನಿಜವಾದ ದೇವರೆಂದರೆ ಸೂರ್ಯದೇವೆನೆ” ಎಂದು ವಿವರಿಸಿದನು.

ಐದನೇ ಪಂಡಿತನು, “ಮನುಷ್ಯ ನಿಜವಾದ ಪ್ರಾಣ ಯಾವುದು? ಎಂದು ಕೇಳಿದನು. ಸುಜ್ಞಾನಿಯು, “ಪ್ರಾಣವೆಂದರೆ ಉಸಿರು. ಉಸಿರಾಟ ನಿಂತರೆ ಮನುಷ್ಯ ಸತ್ತಂತೆಯೇ.

ಆದ್ದರಿಂದ ಮನುಷ್ಯ ನಿಜವಾದ ಪ್ರಾಣ ಎಂದರೆ ಉಸಿರಾಟವೇ ಆಗಿದೆ. ಅನುಲೋಮ – ವಿಲೋಮ ಕ್ರಿಯೆ ಹಾಗೂ ಕಪಾಲಭಾತಿ ಮೊದಲಾದ ಪ್ರಾಣಾಯಾಮ, ಯೋಗ ಕ್ರಿಯೆಗಳು ಆರೋಗ್ಯಪೂರ್ಣ ಜೀವನಕ್ಕೆ ಪಂಚ ಪ್ರಾಣವೆಂದು ತಿಳಿಯಬೇಕು” ಎಂದು ಹೇಳಿದನು.

ರಾಜನೂ, ಆಸ್ಥಾನ ಪಂಡಿತರು ಸುಜ್ಞಾನಿ ಪಂಡಿತನ ವಾಕ್ ಚಾತುರ್ಯವನ್ನು ತುಂಬಾ ಮೆಚ್ಚಿಕೊಂಡರು. ಅವನಿಗೆ ಯೋಗ್ಯ ಕಾಣಿಕೆ ನೀಡಿ ಗೌರವಿಸಿದರು.

ಕೃಪೆ: ಸಾಮಾಜಿಕತಾಣ. (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!