Daily story Work without happiness

ಹರಿತಲೇಖನಿ ದಿನಕ್ಕೊಂದು ಕಥೆ: ಅನಿಶ್ಚಿತತೆ.. ಹತಾಶೆಯ ನಡುವೆ

Channel Gowda
Hukukudi trust

Daily story: ಗೋಪಾಲಣ್ಣ ವೃತ್ತಿಯಲ್ಲಿ ಮೇಷ್ಟ್ರು. ಅವರು ಹೇಳುತ್ತಿದ್ದರು, ‘ನಮ್ಮದೂ ಒಂದು ಕೆಲಸ ಏನ್ರೀ? ಹಾಡಿದ್ದೇ ಹಾಡು ಕಿಸಿಬಾಯಿದಾಸ ಎಂದ ಹಾಗೆ ಹೇಳಿದ್ದನ್ನೇ ಹೇಳುವುದು. ನನಗೆ ತಲೆ ಕೆಟ್ಟು­ಹೋಗಿದೆ’.

hulukudi maharathotsava
Aravind, BLN Swamy, Lingapura

ರಾಜಪ್ಪ ವೃತ್ತಿಯಲ್ಲಿ ವೈದ್ಯರು. ಅವರಿಗೂ ತಮ್ಮ ಕೆಲಸದ ಬಗ್ಗೆ ಬೇಜಾರು. ‘ನಾವೆಲ್ಲ ಜೀತದಾಳುಗಳು ಸರ್. ನಮ್ಮದು ಎನ್ನುವ ಸಮಯ­ವೇನಾದರೂ ಇದೆಯೇ? ಭಾನುವಾರ, ರಜಾದಿನ ಯಾವುದೂ ನಮಗಿಲ್ಲ. ದಿನ ಬೆಳಗಾದರೆ ರೋಗಿಗಳ, ಅಳುಮು­ಖದವರ ಜೊತೆಗೆ ಏಗಿ, ಮಾತು ನನಗೆ ನಗೋದೇ ಮರೆತು ಹೋಗಿದೆ’.

ಮಾಜಿ ಮಂತ್ರಿ ಹಾಗೂ ಸದಾ ಚಟುವಟಿಕೆ­ಯಲ್ಲಿ ಇರುವ ರಾಜಕಾರಣಿ ಗುಂಡಣ್ಣ ಹೇಳುತ್ತಾರೆ, ‘ನಮ್ಮ ವೃತ್ತಿಯಲ್ಲಿ ಯಾವುದೂ ಗ್ಯಾರಂಟಿ ಇಲ್ಲ.

Hulukudi mahajathre
Aravind, BLN Swamy, Lingapura

ನಮ್ಮದೇ­ನಿದ್ದರೂ ಸೀಜನಲ್ ಕೆಲಸ. ಐದು ವರ್ಷ ಅಧಿಕಾರದ ಪಲ್ಲಕ್ಕಿ ದೊರೆತರೆ ಮುಂದೆ ಅದೆಷ್ಟು ವರ್ಷ ಅಧಿಕಾರಕ್ಕೆ ಕಾಯ­ಬೇಕೋ? ಅದು ಮುಂದೆ ದೊರೆಯ­ದೆಯೇ ಹೋಗಬಹುದು. ಆದರೆ ನಮ್ಮ ಹಿಂಬಾಲಕರು ಒಂದೇ ಸಮನೆ ಪ್ರಾಣ ತೆಗೆ­ಯುತ್ತಾರೆ.

ನನಗೆ ಇದು ಸಾಕಾಗಿ ಹೋಗಿದೆ. ಎಲ್ಲವನ್ನೂ ಬಿಟ್ಟು ಸುಮ್ಮನೆ ಮನೆ­ಯಲ್ಲಿ ಕೂಡ್ರುವುದು ವಾಸಿ’. ಅದರೆ, ಮನೆಯಲ್ಲಿಯೇ ಕುಳಿತು ಮಕ್ಕಳನ್ನು ಬೆಳೆ­ಸುವ ಸೌಭಾಗ್ಯಮ್ಮನವರ ಅಭಿಪ್ರಾಯವೇ ಬೇರೆ.

‘ಛೇ, ಇದೊಂದು ಜೈಲು. ಹೊರ­ಗಿನ ಪ್ರಪಂಚದಲ್ಲಿ ಏನಾ­ಗುತ್ತದೆ ಎಂಬುದೇ ತಿಳಿಯದೆ ಮನೆ ಆಯ್ತು, ಕೆಲಸ ಆಯ್ತು ಎಂದುಕೊಂಡು ಜೀವನವಿಡೀ ಬಾವಿಯಲ್ಲಿಯ ಕಪ್ಪೆ­ಯಂತೆ ಕಳೆಯುವುದು ಯಾವ ಸುಖ?‘ ಎನ್ನುತ್ತಾರೆ ಅವರು.

ಹಾಗಾದರೆ ನಮ್ಮಲ್ಲಿ ಬಹಳಷ್ಟು ಜನ ತಮಗೆ ಇಷ್ಟ­ವಿಲ್ಲದ ಕೆಲಸವನ್ನೇ ಮಾಡುತ್ತ ಜನ್ಮ ಸವೆಸುತ್ತಾ­ರೆಯೇ? ಹೀಗೆ ಮನಸ್ಸಿಲ್ಲದೇ ಮಾಡಿದ ಕೆಲಸ ಪ್ರಯೋಜನವಾದೀತೇ? ಇದೇ ತರಹದ ಚಿಂತನೆ ಇಂಗ್ಲೆಂಡಿನ ಒಬ್ಬ ತರುಣನನ್ನು ಬಹುವಾಗಿ ಕಾಡಿತ್ತು.

ಆತ ಒಂದು ದಿನ ಮನೆಯಲ್ಲಿ ಏಕಾಂಗಿಯಾಗಿ ಕುಳಿತು ಚಿಂತಿಸಿದ. ಮನೆ ಶಾಂತ­ವಾಗಿತ್ತು. ಗಡಿಯಾರದ ಮುಳ್ಳಿನ ಸದ್ದು ಕೇಳುವಷ್ಟು ಶಾಂತ. ಆತನ ತಲೆಯಲ್ಲಿ ಒಂದೇ ಕೊರೆತ. ನನ್ನ ಕೆಲಸ ನನಗೆ ತೃಪ್ತಿ, ಸಂತೋಷ ತರದಿದ್ದರೆ ಅದನ್ನು ಮಾಡು­ವುದು ಏಕೆ?.

ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ

ಆತ ಕಣ್ಣು ಮುಚ್ಚಿ ಕುರ್ಚಿಗೆ ತಲೆಯಾನಿಸಿ ತನ್ನ ಆಗಿ ಹೋದ ಬದುಕನ್ನೇ ಗಮನಿಸಿದ. ಇದುವರೆಗೆ ಏನು ಮಾಡಿದೆ ನಾನು? ನನ್ನ ಇಡೀ ಬದುಕೇ ಬಡತನ, ಅನಾರೋಗ್ಯ, ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ ಹರಿದು ಹಂಚಿ ಹೋಗಿದೆ.

ತಾನು ಮೊದಲು ಪಾದ್ರಿಯಾಗಬೇಕೆಂದು ತರ­ಬೇತಿ ಪಡೆದು ಸೇರಿದ­ವನು. ಆದರೆ, ಅಲ್ಲಿ ಕಲಿಸಿದ ಧರ್ಮದ ಅತಿರೇಕದ ಹಾಗೂ ಅತ್ಯಂತ ಸಂಕುಚಿತ ಅರ್ಥವನ್ನು ಕಂಡು ರೋಸಿ ಅದನ್ನು ಬಿಟ್ಟು ಬಂದೆ. ನಂತರ ಶಿಕ್ಷಕ ವೃತ್ತಿಯನ್ನು ಸೇರಿದೆ.

ಆ ವೃತ್ತಿಗೆ ಬೇಕಾದ ತಾಳ್ಮೆ, ಪ್ರೀತಿಗಳ ಕೊರತೆ ನನ್ನಲ್ಲಿ ಇದ್ದಿದ್ದರಿಂದ ಅದನ್ನು ತೊರೆದು ನಿಂತೆ. ಆದಾದ ನಂತರ ಹತ್ತಾರು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿದರೂ ಯಾವುದರಲ್ಲಿಯೂ ಸಂತೋಷ ದಕ್ಕಲಿಲ್ಲ.

ಕೊನೆಗೆ ನಾನು ಬಯಸಿ ಕೈ ಹಿಡಿದದ್ದು ಈ ಬರಹ. ತನ್ನ ಬರವಣಿಗೆ ಸಂತೋಷ ಕೊಡುವುದ­ರೊಂದಿಗೆ ಅದನ್ನು ಓದಿದ ಸಹಸ್ರಾರು ಜನರಿಗೆ ನೀಡುತ್ತಿದ್ದ ಸಂತೋಷ, ತನ್ನಲ್ಲಿ ತೃಪ್ತಿಯನ್ನು ಹೆಚ್ಚಿಸಿತ್ತು.

ಆ ತರುಣನ ಹೆಸರು ಥಾಮಸ್ ಕಾರ್ಲೈಲ್. ಇಂಗ್ಲೆಂಡಿನಲ್ಲಿ ಹತ್ತೊಂಬ­ತ್ತನೇ ಶತಮಾನದಲ್ಲಿ ಮಿಂಚಿಹೋದ ಅಸಾಮಾನ್ಯ ಪ್ರತಿಭೆ ಕಾರ್ಲೈಲ್. ಆತನ ಬರವಣಿಗೆ ಅದೆಷ್ಟು ಜನರನ್ನು ಲೇಖಕ­ರಾಗಲು ಪ್ರಚೋದಿಸಿತ್ತೋ? ರಾಬರ್ಟ್‌ ಬ್ರೌನಿಂಗ್, ಡಿಕೆನ್ಸ್, ಟೆನಿಸನ್, ಥ್ಯಾಕರೆ ಇವರೆಲ್ಲ ಕಾರ್ಲೈಲ್‌ನಿಂದ ಪ್ರಭಾವಿತ­ರಾದವರು.

ರಸ್ಕಿನ್ ಮತ್ತು ಡಾರ್ವಿನ್‌ ಅವರಂತೂ ಈತನ ಶಿಷ್ಯರೇ ಆಗಿದ್ದರು. ಎಮರ್ಸನ್ ಮತ್ತು ಸರ್ ವಿಲಿಯಂ ಆಸ್ಲರ್ ಕೂಡ ಕಾರ್ಲೈಲ್ ತಮ್ಮ ಸಾಹಿತ್ಯ ನಿರ್ಮಾಣದ ಶಿಲ್ಪಿ ಎಂದು ಭಾವಿಸುತ್ತಿದ್ದರು.

ಕಾರ್ಲೈಲ್ ಬಹಳಷ್ಟು ಬರೆದಿ­ದ್ದರೂ ಪ್ರತಿಯೊಬ್ಬರೂ ಮೆಚ್ಚು­ವುದು ಅವನ ಎಂಟು ಪದಗಳ ಒಂದು ಸಾಲನ್ನು. ಆ ಸಾಲು ತುಂಬ ಸುಲಭ ಹಾಗೂ ಅತ್ಯಂತ ಮಾರ್ಮಿಕ. ‘ಬ್ಲೆಸೆಡ್ ಈಸ್ ಹೀ ಹೂ ಹ್ಯಾಸ್ ಪೌಂಡ್ ಹಿಸ್ ವರ್ಕ’. ಅಂದರೆ, ‘ತನಗೊಪ್ಪಿದ ಕೆಲಸವನ್ನು ಪಡೆದವನೇ ಧನ್ಯ’. ಇದರ ಅರ್ಥ ಬಹು ಆಳಕ್ಕೆ ಹೋಗುವಂಥದ್ದು.

ನಮ್ಮ ಬದುಕಿ­ನಲ್ಲಿ ನನಗೊಪ್ಪಿತವಾದ, ಮನಸ್ಸಿಗೆ ಹಿಡಿಸುವ ಕೆಲಸವನ್ನು ಹುಡುಕಿ­ಕೊಂಡು ಹೋಗಬೇಕು ಇಲ್ಲವೇ ದೊರೆತ ಕೆಲಸದಲ್ಲಿ ಸಂತೋಷವನ್ನು ಹುಡುಕ­ಬೇಕು.

ಸಂತೋಷವಿಲ್ಲದೆ ಮಾಡಿದ ಕೆಲಸದಿಂದ ಮಾಡಿದವನ ಸಮಯ ವ್ಯರ್ಥ ಹಾಗೂ ಉಳಿದವರಿಗೆ ಅಪ್ರಯೋಜಕ. ನಮ್ಮ ಕೆಲಸ ಸಣ್ಣದು, ಪ್ರಯೋಜನ­ವಿಲ್ಲದ್ದು ಎಂದು ಗೊಣ­ಗುವುದು ಬೇಡ. ಗೊಣಗಾಟ ಅಳು­ಬರು­ಕರ ಬದುಕು. ಮಾಡುವುದನ್ನೇ ಸೊಗಸಾಗಿ, ಉತ್ಸಾಹದಿಂದ, ಸಂತೋಷ­ದಿಂದ ಮಾಡೋಣ.

ಆ ಕೆಲಸ ಇನ್ನೊಂದು ಹತ್ತು ಜನರಿಗೆ ಸಂತೋಷ ಕೊಡಲಿ. ಅವರಿಗೆ ದೊರೆತ ಸಂತೋಷ ನಮ್ಮ ಹೃದಯದಲ್ಲಿ ತೃಪ್ತಿಯನ್ನು ಹತ್ತು ಪಟ್ಟು ಹೆಚ್ಚಿಸುತ್ತದೆ, ಬದುಕು ಧನ್ಯವಾ­ಗುತ್ತದೆ, ಎಲ್ಲರಿಗೂ ಪ್ರಿಯವಾಗುತ್ತದೆ ಆಲ್ಲವೇ? ಯೋಚಿಸಿ, ಚಿಂತಿಸಿ, ಆಲೋಚಿಸಿ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

AI ಚಿತ್ರ ಬಳಸಲಾಗಿದೆ..

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!