ಹೊಸಕೋಟೆ: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ (Murder) ಮಾಡಿದ ಪಾಪಿ ಪತಿರಾಯ ಪೊಲೀಸ್ ಠಾಣೆಯಲ್ಲಿ ಶರಣಾಗಿರುವ ಘಟನೆ ತಾಲ್ಲೂಕಿನ ತಮ್ಮರಸನಹಳ್ಳಿಯ ಕೆರೆ ಸಮೀಪ ಘಟನೆ ನಡೆದಿದೆ.
32 ವರ್ಷದ ರಬಿಯಾ ಕೊಲೆಯಾದ ದುರ್ದೈವಿ ಹೆಂಡತಿಯಾಗಿದ್ದು, ಕೊಲೆ ಮಾಡಿದ ಆರೋಪಿಯನ್ನು 38 ವರ್ಷದ ನಿಜಾಮುದ್ದಿನ್ ಎಂದು ಗುರುತಿಸಲಾಗಿದೆ.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ತಮ್ಮರಸನಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ನಡುವೆ ಆಗಾಗ್ಗೆ ಜಗಳ ಆಗುತ್ತಿತ್ತು. ಜಗಳ ವಿಕೋಪಕ್ಕೆ ಹೋಗಿ ಕೊಲೆ ನಡೆದಿದೆ ಎನ್ನಲಾಗಿದೆ.
ಈ ಕುರಿತು ಸೂಲಿಬೆಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.