ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ (Accident) ಸಂಭವಿಸಿ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ನಡೆದಿದೆ.
ಹನುಮಂತ ಆಂಜನೇಯ (35 ವರ್ಷ), ಗಂಗಮ್ಮ (28 ವರ್ಷ), ಹಣಮಂತ (1 ವರ್ಷ), ಹನುಮಂತನ ಸಹೋ ದರನ ಮಕ್ಕಳಾದ ಪವಿತ್ರಾ (5 ವರ್ಷ) ಹಾಗೂ ರಾಯಪ್ಪ (3 ವರ್ಷ) ಸಾವನ್ನಪ್ಪಿದ ದುರ್ದೈವಿಗಳು.
ಮೃತರೆಲ್ಲರೂ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದವರು. ಒಂದೇ ಬೈಕ್ ನಲ್ಲಿ ಈ ಐವರೂ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ (Accident) ಸಂಭವಿಸಿದೆ.
ಘಟನೆ ವಿವರ: ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಗುದ್ದಿದ ರಭಸಕ್ಕೆ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರು ಸುರಪುರ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಬೈಕ್ ಚಾಲಕ ಲಾರಿ ಹಿಂದಿಕ್ಕಲು ಹೋಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಎಸ್ಪಿ, ಸುರಪುರ ಡಿವೈಎಸ್ಪಿ, ಸಿಪಿಐ, ಸುರಪುರ, ಪಿಐ ಭೇಟಿ ನೀಡಿದ್ದರು.
ದೇವರ ಕಾರ್ಯಕ್ರಮಕ್ಕೆ ಹೊರಟವರು ಮಸಣ ಸೇರಿದರು. ಹನುಮಂತ ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲ್ಲೂಕಿನ ಗುರುಗುಂಟಾದಿಂದ ಕೆಲ ವರ್ಷಗಳ ಹಿಂದೆ ಶಹಾಪುರ ತಾಲ್ಲೂಕಿನ ಹಳಿಸಗರ ಗ್ರಾಮಕ್ಕೆ ಬಂದು ಗಂಗಮ್ಮಳನ್ನು ವಿವಾಹವಾಗಿದ್ದರು.
ಶುಕ್ರವಾರ ನಡೆಯಲಿದ್ದ ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.