ಸೋಮವಾರ, ಫೆಬ್ರವರಿ 10, 2025, ದೈನಂದಿನ ರಾಶಿ ಭವಿಷ್ಯ.. Astrology
ಮೇಷ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾ ಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕಟಕ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳಬೇಕು.
ಒಂದು ತಾಳ್ಮೆ, ಮತ್ತೊಂದು ಸಹನೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ. ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸ ಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)
ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತ ರಾಗದಿರಿ. ಮನಸ್ಸಿನಿಂದ ಆಲೋಚಿಸಬೇಡಿ. ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)
ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿ ಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗ ಳ ಮೇಲೆ ಗಮನಹರಿಸುವ ಸ ಮಯ ಬಂದಿದೆ.ಅದರತ್ತ ಗಮನಹರಿಸಿ.ವಿಳಂಬ ನೀತಿ ಅನುಸರಿಸದಿರಿ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗು ವುದು.)
ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. (ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)
ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ.ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)
ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM