ದೊಡ್ಡಬಳ್ಳಾಪುರ (Doddaballapura); ಕೌಟುಂಬಿಕ ಕಲಹದಿಂದ ಬೇಸತ್ತ ಯುವತಿ ನೇಣಿಗೆ ಶರಣಾಗಿರುವ (Suicide) ಘಟನೆ ಶಾಂತಿ ನಗರದಲ್ಲಿ ನಡೆದಿದೆ
ಮೃತ ಯುವತಿಯನ್ನು 18 ವರ್ಷದ ಚಂದುಶ್ರೀ ಎಂದು ಗುರುತಿಸಲಾಗಿದೆ.
ಶಾಂತಿನಗರದ 1ನೇ ಕ್ರಾಸ್ ನಲ್ಲಿ ಇಂದು ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ಸ್ಪೆಕ್ಟರ್ ಅಮರೇಶ್ ಗೌಡ ತಿಳಿಸಿದ್ದಾರೆ.
ಮನೆಯಲ್ಲಿ ನೇಣಿಗೆ ಬಿಗಿದುಕೊಂಡಿದ್ದ ಯುವತಿಯನ್ನು ಆಸ್ಪತ್ರೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.