BY Vijayendra lashed out against CM Siddaramaiah government

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮತ್ತೆ ಆರಂಭವಾದ ಬಣ ಬಡಿದಾಟ, ನಾಳೆ ನಡೆಯಲಿರುವ ಬಿಜೆಪಿ (BJP) ಬಂಡಾಯ ನಾಯಕರ ಸಭೆ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬಿವೈ ವಿಜಯೇಂದ್ರ (BY Vijayendra) ಸುದ್ದಿಗೋಷ್ಠಿ, ಕೇಂದ್ರ ಸರ್ಕಾರದ ಸಮರ್ಥನೆ, ರಾಜ್ಯ ಸರ್ಕಾರದ ವಿರುದ್ಧ ಆರೋಪಕ್ಕೆ ಮಾತ್ರ ಸೀಮಿತವಾಗಿತ್ತು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರು, ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಆಕ್ಷೇಪಿಸಿದರು.

ಆಸ್ತಿ ನೋಂದಣಿ ಶುಲ್ಕವು ಶೇ 600ರಷ್ಟು ಹೆಚ್ಚಳವಾಗಿದೆ. ಆಸ್ತಿ ಗೈಡೆನ್ಸ್ ಮೌಲ್ಯವೂ ಶೇ 30ರಷ್ಟು ಏರಿಕೆ ಕಂಡಿದೆ. ವಾಹನಗಳ ನೋಂದಣಿ ದರವು ಶೇ 10ರಷ್ಟು ಜಾಸ್ತಿ ಆದರೆ, ಆಸ್ಪತ್ರೆಗಳ ಸೇವಾ ಶುಲ್ಕ ಶೇ 5ರಷ್ಟು ಏರಿದೆ. ವಿದ್ಯುತ್ ದರವು ಶೇ 14.5ರಷ್ಟು ಜಾಸ್ತಿಯಾಗಿದೆ. ನೀರಿನ ದರವು ಶೇ 30 ಏರಿದೆ. ಹಾಲಿನ ದರ ಶೇ 15ರಷ್ಟು ಹೆಚ್ಚಾಗಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ ರೂ. 1,90,000 ಕೋಟಿ ಸಾಲ ಮಾಡಿದೆ ಎಂಬುದನ್ನು ನಾಡಿನ ಜನರು ಗಮನಿಸಬೇಕಿದೆ. ವಿವಿಧ ಸರಕಾರಿ ಇಲಾಖೆಗಳ ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದರ ವಸೂಲಿ ಕುರಿತು ಸಂಬಂಧಿತ ಸಚಿವರ ಜೊತೆ ಚರ್ಚಿಸಿದ್ದಾಗಿ ಇಂಧನ ಸಚಿವ ಜಾರ್ಜ್ ಅವರೇ ಹೇಳಿದ್ದಾರೆ.

ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ ದಾರುಣ ಸ್ಥಿತಿಗೆ ರಾಜ್ಯ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಯಾರು ಹೊಣೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಲು ಆಗ್ರಹಿಸಿದರು.

ರಾಜ್ಯ ಸರಕಾರದ ಒತ್ತಾಯದ ಮೇರೆಗೆ ಮೆಟ್ರೊ ದರ ಗರಿಷ್ಠ ಮಟ್ಟಕ್ಕೆ ಏರಿಕೆ
ಬಸ್ಸಿನ ಪ್ರಯಾಣದರವೂ ಶೇ 15 ರಷ್ಟು ಹೆಚ್ಚಾಗಿದೆ. ಮೆಟ್ರೊ ಪ್ರಯಾಣ ದರ ಗರಿಷ್ಠ ಏರಿಕೆ ಒಂದು ದುಸ್ಸಾಹಸ ಎಂದು ಟೀಕಿಸಿದರು.

ರಾಜ್ಯ ಸರಕಾರದ ಒತ್ತಾಯದ ಮೇರೆಗೆ ಮೆಟ್ರೊ ಪ್ರಯಾಣ ದರ ಗರಿಷ್ಠ ಮಟ್ಟಕ್ಕೆ ಏರಿಸಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ದೂರಿದರು.

ಚೆನ್ನೈ, ಲಕ್ನೋ, ಮುಂಬೈ, ಕೋಲ್ಕತ್ತ, ದೆಹಲಿಯಲ್ಲಿ ಮೆಟ್ರೋ ದರ ಏರಿಕೆ ಆಗಿಲ್ಲ. ರಾಜ್ಯ ಸರಕಾರದ ಆಗ್ರಹದಿಂದ ಇಲ್ಲಿ ಹೀಗಾಗಿದೆ ಎಂದು ಗಮನಕ್ಕೆ ತಂದರು.

ಸರಕಾರವು ಗ್ಯಾರಂಟಿಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ; ಇದರಿಂದ ಬೆಂಗಳೂರಿನ ಜನತೆ ಅತಿ ಹೆಚ್ಚು ಆಸ್ತಿ ತೆರಿಗೆ ಕಟ್ಟುತ್ತಿದ್ದಾರೆ. ವಾಹನ, ನೀರಿನ ದರ ಹೆಚ್ಚು ಪಾವತಿಸುತ್ತಿದ್ದಾರೆ. ಆದಾಯ ತೆರಿಗೆಯನ್ನೂ ಹೆಚ್ಚು ಕಟ್ಟುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಮೆಟ್ರೊ ದರ ಏರಿಕೆ ವಿಚಾರದಲ್ಲೂ ಕಾಂಗ್ರೆಸ್ ಪಕ್ಷ ಕೇಂದ್ರದತ್ತ ಬೊಟ್ಟು ಮಾಡುವ ಚಾಳಿ ಮುಂದುವರೆಸಿದೆ ಎಂದು ದೂರಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2 ವರ್ಷಗಳಲ್ಲಿ 2ನೇ ಬಾರಿಗೆ ಮತ್ತೆ ಹಾಲಿನ ದರ ಏರಿಸಲು, ವಿದ್ಯುತ್ ದರ ಹೆಚ್ಚಿಸಲು ಸರಕಾರದ ಮಟ್ಟದಲ್ಲಿ ಚರ್ಚೆಗಳು ಆರಂಭವಾಗಿವೆ ಎಂದು ಆಕ್ಷೇಪಿಸಿದರು.

ಒಂದೆಡೆ ಮುಖ್ಯಮಂತ್ರಿಗಳು ನಾಡು ಸುಭಿಕ್ಷವಾಗಿದೆ; ರಾಜ್ಯದ ಜನರು ಸಂತೋಷದಲ್ಲಿದ್ದಾರೆ; ರೈತರು, ಬಡವರು ನೆಮ್ಮದಿಯಿಂದ ಇದ್ದಾರೆ. ಗ್ಯಾರಂಟಿಗಳ ಅನುಷ್ಠಾನದ ಪರಿಣಾಮವಾಗಿ ಎಲ್ಲ ವರ್ಗದ ಜನರು ಸಂತಸದಿಂದಿದ್ದಾರೆ ಎಂಬ ಭ್ರಮೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಇದ್ದಾರೆ ಎಂಬುದು ಚರ್ಚಾ ವಿಷಯವಾಗಿದೆ ಎಂದರು.

ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ. ಇನ್ನೊಂದೆಡೆ ಗೃಹಲಕ್ಷ್ಮಿ ಯೋಜನೆ 2 ಸಾವಿರ ರೂ. ಐದಾರು ತಿಂಗಳಿಂದ ಸಿಗುತ್ತಿಲ್ಲ; 5 ಕೆಜಿ ಅಕ್ಕಿಯ ಹಣವನ್ನೂ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 7ರಂದು 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿ ಅಥವಾ ದಾಖಲೆಯನ್ನು ಸಿದ್ದರಾಮಯ್ಯನವರು ನಿರ್ಮಾಣ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಪಿ.ಸಿ. ಮೋಹನ್, ಮಾಜಿ ಸಚಿವರಾದ ಗೋಪಾಲಯ್ಯ, ಶಾಸಕ ಉದಯ ಗರುಡಾಚಾರ್, ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!