Karnataka has a great connection with Shivaji Maharaja: Basavaraja Bommai

ಕರ್ನಾಟಕಕ್ಕೂ ಶಿವಾಜಿ ಮಹಾರಾಜರಿಗೂ ಬಹಳ ಸಂಬಂಧ ಇದೆ: ಬಸವರಾಜ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ಶಿವಾಜಿ ಮಹಾರಾಜರು ರಾಷ್ಟ್ರ ಭಕ್ತರು, ಅವರು ಯಾವುದೇ ಪ್ರದೇಶ, ಭಾಷೆಗೆ ಸೀಮಿತವಾದವರಲ್ಲ, ದೇಶ ಭಕ್ತರಿಗೆ ಜಾತಿ, ಮತ, ಪ್ರದೇಶದ ಮಿತಿ ಇರುವುದಿಲ್ಲ. ಶಿವಾಜಿ ಮಹಾರಾಜರು ಇದೆಲ್ಲವನ್ನೂ ಮೀರಿದವರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದಲ್ಲಿ ಕ್ಷತ್ರೀಯ ಮರಾಠಾ ಸಮಾಜ ತಾಲೂಕ ಹಾಗೂ ಶಹರ ಘಟಕದ ವತಿಯಿಂದ ಏರ್ಪಡಿಸಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 398 ನೇಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಭಾರತ ದೇಶದಲ್ಲಿ ಹುಟ್ಟಿರುವ ನಾವೆಲ್ಲ ಪುಣ್ಯವಂತರು, ಯಾರು ಇತಿಹಾಸ ತಿಳಿಯುವರೋ ಅವರು ಭವಿಷ್ಯ ಬರೆಯುತ್ತಾರೆ. ಯಾರಿಗೆ ಇತಿಹಾಸ ಇಲ್ಲ ಅವರಿಗೆ ಭವಿಷ್ಯವಿಲ್ಲ ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ನೋಡಿದಾಗ ಅವರು ಭಾರತ ಮಾತೆಯ ರಕ್ಷಣೆಗೆ ಹುಟ್ಟಿದ್ದರು.

ಭವಾನಿ ತಾಯಿ ಪ್ರತ್ಯಕ್ಷವಾಗಿ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜರಿಗೆ ದಿವ್ಯ ಶಕ್ತಿ ಹಾಗೂ ದೈವಿ ಶಕ್ತಿ ಇತ್ತು. ಯಾರಿಗೆ ದೈವಿ ಶಕ್ತಿ ಇರುತ್ತದೆಯೋ ಅವರು ಜೀವನದಲ್ಲಿ ಇಡೀ ಜಗತ್ತನ್ನು ಎದುರು ಹಾಕಿಕೊಳ್ಳಲು ಸಿದ್ದರಿರುತ್ತಾರೆ ಎನ್ನುವುದಕ್ಕೆ ಶಿವಾಜಿ ಮಹಾರಾಜರು ಉದಾಹರಣೆ ಎಂದರು.

ನಾನು ಪುಣಾದ ಸಿಂಹಗಢಕ್ಕೆ ಭೇಟಿ ನೀಡಿದ್ದೆ ಶಿವಾಜಿ ಮಹಾರಾಜರ ಹೋರಾಟ ಅಲ್ಲಿಂದ ಪ್ರಾರಂಭವಾಗಿ ದೈತ್ಯ ಮೊಗಲ್ ಸಾಮ್ರಜ್ಯ ಎದುರಿಸಿದ್ದರು. ಮೊಗಲ್ ಸಾಮ್ರಾಜ್ಯ ಪರ್ಷಿಯಾದಿಂದ ಹಿಡಿದು ಭೂತಾನ್ ವರೆಗೂ ಇತ್ತು.

ಆಗ ದಕ್ಚಿಣದಲ್ಲಿ ಬಹುಮನಿ ಸಾಮ್ರಾಜ್ಯ ಇತ್ತು. ಅವರವರ ನಡುವೆ ಸಂಘರ್ಷವಾದಾಗ ಮೊಗಲರ ಕೈಮೇಲಾಯಿತು. ಅವರು ದಕ್ಚಿಣದಲ್ಲಿ ಸಾಮ್ರಜ್ಯ ವಿಸ್ತರಿಸಲು ತೀರ್ಮಾನಿಸಿದಾಗ ಅವರನ್ನು ಒಬ್ಬ ಯುವಕ ತಡೆಯುತ್ತಾನೆ ಎಂದು ಮೊಗಲರು ಎಂದೂ ಊಹಿಸಿರಲಿಲ್ಲ.

ಶಿವಾಜಿ ಮಹಾರಾಜರು ವಿನೂತನ ಯುದ್ದ ತಂತ್ರ ಅನುಸಿರಿಸಿ ಅವರು ವಿಂದ್ಯ ಪರ್ವತ, ನರ್ಮಾದಾ ನದಿ ಕೆಳಗೆ ಮೊಗಲರು ಬಾರದಂತೆ ನೋಡಿಕೊಂಡರು. ಆದ್ದರಿಂದ ಅವರಿಗೆ ದೊಡ್ಡ ಬೆಂಬಲ ಸಿಕ್ಕಿತ್ತು ಎಂದು ಹೇಳಿದರು.

ಕರ್ನಾಟಕಕ್ಕೂ ಸಂಬಂಧವಿದೆ

ಶಿವಾಜಿ ಮಹಾರಾಜರು ಕೇವಲ ಮಹಾರಾಷ್ಟ್ರಕ್ಕೆ ಸೀಮಿತವಾಗಿರಲಿಲ್ಲ. ಅವರ ಸಾಮ್ರಾಜ್ಯ ಕರ್ನಾಟಕ ಹಾಗೂ ತಮಿಳುನಾಡಿನ ತಂಜಾವೂರಿನವರೆಗೂ ವಿಸ್ತರಿಸಿದ್ದರು. ಕೆಲವೇ ಕೆಲವು ಜನರನ್ನು ಇಟ್ಟುಕೊಂಡು ಹೊರಾಟದ ಮುಖಾಂತರ ದೊಡ್ಡ ಸಾಮ್ರಾಜ್ಯ ಕಟ್ಟಿದರು.

ಕರ್ನಾಟಕಕ್ಕೂ ಶಿವಾಜಿ ಮಹಾರಾಜರಿಗೂ ಬಹಳ ಸಂಬಂಧ ಇದೆ. ಬೆಂಗಳೂರಿನಲ್ಲಿ ಅವರು ಇದ್ದದ್ದು. ಅವರ ಕುಟುಂಬದವರು ಇಲ್ಲಿ ಇದ್ದರು ಎನ್ನುವುದಕ್ಕೆ ಇತಿಹಾಸದಲ್ಲಿ ದಾಖಲೆ ಇದೆ ಎಂದರು.

ಶಿವಾಜಿಹಾಜರಾರು ರಾಷ್ಟ್ರ ಭಕ್ತರು, ಯಾವುದೇ ಪ್ರದೇಶ ಭಾಷೆಗೆ ಸೀಮಿತವಾದವರಲ್ಲ, ದೇಶ ಭಕ್ತರಿಗೆ ಜಾತಿ, ಮತಣ, ಪ್ರದೇಶದ ಮಿತಿ ಇರುವುದಿಲ್ಲ. ಶಿವಾಜಿ ಮಹಾರಾಜರು ಇದೆಲ್ಲವನ್ನು ಮೀರಿದವರು. ಈಗಲೂ ನಮ್ಮ ದೇಶಕ್ಕೆ ಹಲವಾರು ಕಂಟಕಗಳಿವೆ ಭಾರತವನ್ನು ಗುಲಾಮಗಿರಿಯಲ್ಲಿ ಇಡಬೇಕು ಎನ್ನುವ ಮನಸ್ಥಿತಿ ಇನ್ನೂ ಇದೆ. ಅದಕ್ಕೆ ನಮ್ಮ ಕೇಂದ್ರ ಸರ್ಕಾರ ಉತ್ತರ ಕೊಡುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು ಗುಲಾಮಗಿರಿಯಿಂದ ಹೊರ ಬನ್ನಿ ಎಂದು ಹೇಳಿದ್ದಾರೆ. ಒಂದು ವರ್ಗ ಯಾವಾಗಲೂ ಗುಲಾಮಗಿರಿ‌ ಮನಸ್ಥಿತಿಯಲ್ಲಿದ್ದಾರೆ‌ ಎಂದರು.

ನಮ್ಮ ದೇಶದ ಅಖಂಡತೆಗೆ ಸಮಗ್ರತೆಗೆ ಶಿವಾಜಿ ಮಹಾರಾಜರು ಪ್ರೇರಣೆಯಾಗಿದ್ದಾರೆ. ಅವರ ಜಯಂತಿ ಆಚರಣೆ ಮಾಡುವ ಉದ್ದೇಶವೇ ಅದು. ನಮ್ಮ ದೇಶದ ಪರಂಪರೆ, ಸಂಸ್ಕೃತಿ, ಆಧ್ಯಾತ್ಮಿಕ ಚಿಂತನೆ, ಎಲ್ಲರನ್ನು ಒಳಗೊಳ್ಳುವ ಮಾನವೀಯತೆ, ಅನ್ಯಾಯದ ವಿರುದ್ದ ಹೋರಾಡುವ ಮನಸ್ಥಿತಿ ಶಿವಾಜಿ ಮಹಾರಾಜರಲ್ಲಿ ಏನಿತ್ತೊ ಅದು ನಮ್ಮನ್ನು ಈಗಲೂ ಕಾಪಾಡುತ್ತಿದೆ.

ಎಲ್ಲ ದೇಶಕ್ಕೂ ಒಂದು ಕುರುಹು, ಗುರುತು, ಸ್ವಭಿಮಾನದ ಸಂಕೇತ ಇರುತ್ತದೆ. ವಿವಿಧತೆಯಲ್ಲಿ ಏಕತೆಯಲ್ಲಿ ನಮ್ಮ ದೇಶದ ಶಕ್ತಿ ಇದೆ. ಆ ಶಕ್ತಿಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಲು ಶಿವಾಜಿ ಮಹಾರಾಜರು ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಚಂದ್ರಪ್ಪಜ್ಜ ಕಾಳೆ, ಸುಭಾಸ ಚವ್ಹಾಣ ಸೇರಿದಂತೆ ಮರಾಠ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!