Police helpline number 112 should be prominently displayed in schools: K. Naganna Gowda

ಶಾಲೆಗಳಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು: ಕೆ.ನಾಗಣ್ಣ ಗೌಡ

ಬೆಂ.ಗ್ರಾ.ಜಿಲ್ಲೆ: ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ (K.Naganna Gowda) ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ
ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬದುಕುವ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹಕ್ಕು ಪ್ರಮುಖ ಅಂಶಗಳಾಗಿದೆ. ವಿವಿಧ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು, ಹಕ್ಕುಗಳ ಉಲ್ಲಂಘನೆ ನಡೆಯುತ್ತಾ ಬಂದಿರುವುದು ಆಘಾತಕಾರಿ.

ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಶಾಲೆಗೆ ಹಾಜರಾಗುತ್ತಿರುವ ಮಕ್ಕಳು ಮತ್ತು ಶಾಲೆಗೆ ಬರದೇ ಇರುವ ಮಕ್ಕಳ ಬಗ್ಗೆ ಗಮನ ಹರಿಸಬೇಕು. ಶಾಲೆಗೆ ಬರದೇ ಇರುವ ಮಕ್ಕಳು ಕಂಡು ಬಂದಾಗ ಆ ಮಗುವು ಶಾಲೆಗೆ ಬರದೇ ಇರಲು ಕಾರಣ ತಿಳಿದು ಅದನ್ನು ಪರಿಹರಿಸಬೇಕು.

ಶಾಲೆಗಳಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಜೊತೆಗೆ ದೂರು ಪೆಟ್ಟಿಗೆಯನ್ನು ಇರಿಸಲು ಹೇಳಿದರು.

ಬಾಲ್ಯ ವಿವಾಹ, ಭಿಕ್ಷಾಟನೆ, ಮಕ್ಕಳ ಮಾರಾಟ, ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಉಚಿತ ಕರೆ ಮಾಡಿ ದೂರು ನೀಡಬಹುದಾಗಿದೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ದೇಶದ ಅಭಿವೃದ್ಧಿಗೆ ಪೂರಕ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ. ಬಿ ಬಸವರಾಜು, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾದ ರಮೇಶ್ ಟಿ. ಕೆ, ಮುಖ್ಯ ಯೋಜನಾಧಿಕಾರಿಗಳಾದ ರಾಮ ಕೃಷ್ಣಯ್ಯ, ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮು ಮಲ್ಲಯ್ಯ, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಬಚಪನ್ ಬಚಾವೊ ರಾಜ್ಯ ಸಂಚಾಲಕರು ಬಿನೂ ವರ್ಗಿಸ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು,ಸಿಬ್ಬಂದಿ ವರ್ಗ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.ಸ್ಪರ್ಧೆ ಗಮನ

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿ ಕಾರು ಮತ್ತು ಮೊಪೆಡ್ ನಡುವೆ ಡಿಕ್ಕಿ (Accident) ಸಂಭವಿಸಿ, ಮೊಪೆಡ್ ಸವಾರ ಗಾಯಗೊಂಡಿದ್ದಾನೆ. ಘಾಟಿ ಕ್ಷೇತ್ರದ ಸುಂಕ ವಸೂಲಿ ಕೇಂದ್ರದ ಬಳಿ

[ccc_my_favorite_select_button post_id="104015"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!