ದೊಡ್ಡಬಳ್ಳಾಪುರ (Doddaballapura); ದೇಶದ ಪೇಟೆ ವೀರಶೈವ ಸಂಘದವರಿಂದ ಬುಧವಾರ ಶ್ರೀ ಜಗದ್ಗುರು ರೇಣುಕಾಚಾರ್ಯರವರ ಜಯಂತಿ ಪ್ರಯುಕ್ತ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿರುವ ಶ್ರೀ ರೇಣುಕಾಚಾರ್ಯರ ವಿಗ್ರಹ ಮೂರ್ತಿಗೆ ಅಭಿಷೇಕ ನಡೆಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮಹಾಮಂಗಳಾರತಿ, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇಶದ ಪೇಟೆ ವೀರಶೈವ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಮಹಿಳಾ ಅಕ್ಕಮಹಾದೇವಿ ಸಂಘ, ಬಸವೇಶ್ವರ ಯುವಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.