JDS protests against Greater Bangalore Bill

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು: ರಿಯಲ್‌ ಎಸ್ಟೇಟೆ ದಂಧೆಗೆ, ಕನ್ನಡಿಗರನ್ನು ಒಡೆದು ಆಳಲು ಗ್ರೇಟರ್‌ ಬೆಂಗಳೂರು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ (JDS) ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ ೪೩,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ

[ccc_my_favorite_select_button post_id="104181"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!