Daily story: Traitor

ಹರಿತಲೇಖನಿ ದಿನಕ್ಕೊಂದು ಕಥೆ: ದೇಶದ್ರೋಹಿ

Daily story: ಹಿಂದೆ ದೇವಗಿರಿ ಹೆಸರಿನ ರಾಜ್ಯವಿತ್ತು. ರಾಜಾ ರಾಮದೇವನು ಆ ರಾಜ್ಯವನ್ನು ಆಳುತ್ತಿದ್ದನು. ಒಮ್ಮೆ ಅಲ್ಲಾಉದ್ದೀನ ಖಿಲಜಿಯು ದೇವಗಿರಿಯ ಮೇಲೆ ದಾಳಿ ಮಾಡಲು ಬಂದನು ಮತ್ತು ರಾಜನಿಗೆ ತನ್ನ ದೂತರ ಮೂಲಕ ಶರಣಾಗುವಂತೆ ಸಂದೇಶವನ್ನು ಕಳುಹಿಸಿದನು.

ಆ ಸಂದೇಶದಲ್ಲಿ ಅಲ್ಲಾಉದ್ದೀನನು, ರಾಜಾ ರಾಮದೇವನಿಗೆ ಅವನ ಸಂಪೂರ್ಣ ರಾಜ್ಯವನ್ನು ಅಲ್ಲಾಉದ್ದೀನನಿಗೆ ಒಪ್ಪಿಸಿ, ಅವನಿಗೆ ಶರಣಾಗಬೇಕೆಂದು ಬರೆದಿದ್ದನು.

ಈ ಸಂದೇಶವನ್ನು ಕೇಳಿ ರಾಜಾ ರಾಮದೇವನಿಗೆ ಸಹಿಸಲು ಆಗಲಿಲ್ಲ. ತನ್ನ ರಾಜ್ಯದ ಮೇಲೆ ಯಾರೋ ಆಕ್ರಮಣ ಮಾಡಿರುವುದನ್ನು ಅವನು ಹೇಗೆ ತಾನೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಬಹುದು.

ಅವನು ಬಹಳ ಪರಾಕ್ರಮಿ ರಾಜನಾಗಿದ್ದನು. ಅವನು ಅಲ್ಲಾಉದ್ದೀನನ ಪ್ರಸ್ತಾವನೆ ಒಪ್ಪಿಕೊಳ್ಳಲಿಲ್ಲ. ಇದನ್ನು ಕೇಳಿ ಅಲ್ಲಾಉದ್ದೀನ ಕೋಪಗೊಂಡನು ಮತ್ತು ತನ್ನ ದೊಡ್ಡ ಸೈನ್ಯದೊಂದಿಗೆ ದೇವಗಿರಿಯ ಮೇಲೆ ಆಕ್ರಮಣ ಮಾಡಿದನು.

ದೇವಗಿರಿಯ ಕೋಟೆ ಒಂದು ಅಭೇದ್ಯ ಕೋಟೆಯಾಗಿತ್ತು. ಆ ಕೋಟೆಯನ್ನು ಬಹಳ ಸುಲಭವಾಗಿ ಗೆಲ್ಲಲು ಸಾಧ್ಯವಿರಲಿಲ್ಲ. ಅರ್ಥಾತ್ ಆ ಕೋಟೆಯೊಳಗೆ ಯಾರಿಗೂ ಸುಲಭವಾಗಿ ನುಸುಳಲು ಸಾಧ್ಯವಿರಲಿಲ್ಲ. ಸ್ವಲ್ಪ ದಿನದಲ್ಲಿಯೇ ಇಬ್ಬರೂ ರಾಜರ ನಡುವೆ ಬಹಳ ಭಯಾನಕ ಯುದ್ಧ ನಡೆಯಿತು.

ರಾಜಾ ರಾಮದೇವನ ಸೈನಿಕರು ಯುದ್ಧ ಮಾಡುವುದರಲ್ಲಿ ಬಹಳ ನಿಪುಣರಾಗಿದ್ದರು. ಯುದ್ಧದಲ್ಲಿ ರಾಜಾ ರಾಮದೇವನ ಸೇನೆಯು ಬಹಳ ಪರಾಕ್ರಮವನ್ನು ತೋರಿಸಿತು.

ಈ ಕಾರಣದಿಂದ ಅಲ್ಲಾಉದ್ದೀನನ ಸೇನೆಯ ಬಹಳಷ್ಟು ಸೈನಿಕರು ಸತ್ತರು. ಅಲ್ಲಾಉದ್ದೀನನಿಗೆ ಬೇರೆ ಯಾವುದೇ ದಾರಿ ಕಾಣದೇ ಅವನು ತನ್ನ ದೇಶಕ್ಕೆ ಮರಳಿ ಹೋದನು. ಅಲ್ಲಾಉದ್ದೀನನ ಮೇಲೆ ವಿಜಯವನ್ನು ಸಾಧಿಸಿರುವ ಖುಷಿಯಲ್ಲಿ ದೇವಗಿರಿಯಲ್ಲಿ ಬಹಳ ದೊಡ್ಡ ವಿಜಯೋತ್ಸವವನ್ನು ಆಚರಿಸಲಾಯಿತು.

ರಾಜಾ ರಾಮದೇವನ ಸೇನೆಯಲ್ಲಿ ಒಬ್ಬ ಪರಾಕ್ರಮಿ ಸೈನಿಕನಿದ್ದನು. ಅವನು ಮಾತೃಭೂಮಿಯ ರಕ್ಷಣೆಗಾಗಿ ಈ ಯುದ್ಧದಲ್ಲಿ ಅಲ್ಲಾಉದ್ದೀನನ ಸೇನೆಯೊಂದಿಗೆ ಹೋರಾಡುತ್ತ ತನ್ನ ಪ್ರಾಣವನ್ನು ಅರ್ಪಿಸಿದ್ದನು.

ಈ ವೀರ ಯೋಧನ ಮರಣದ ಬಳಿಕ ಅವನ ಮಗಳು ಒಬ್ಬಂಟಿಯಾದಳು. ಅವಳ ಹೆಸರು ವೀರಮತಿಯಾಗಿತ್ತು. ಅವಳನ್ನು ರಾಜಾ ರಾಮದೇವನು ತನ್ನ ಮಗಳಂತೆಯೇ ನೋಡಿಕೊಂಡನು. ವೀರಮತಿ ಮದುವೆಯ ವಯಸ್ಸಿನವಳಾದಾಗ ರಾಜನು ಕೃಷ್ಣರಾವ ಹೆಸರಿನ ಒಬ್ಬ ಯುವಕನೊಂದಿಗೆ ಅವಳ ವಿವಾಹವನ್ನು ನಿಶ್ಚಯಿಸಿದನು.

ಕೃಷ್ಣರಾವ್ ಅತ್ಯಂತ ಸ್ವಾರ್ಥಿ ಮತ್ತು ಲೋಭಿಯಾಗಿದ್ದನು. ಅವನು ಏನು ಮಾಡಿದನು ಗೊತ್ತೇ? ಅಲ್ಲಾಉದ್ದೀನ ರಾಜಾ ರಾಮದೇವನೊಂದಿಗೆ ಸೋತು ಮರಳಿ ತನ್ನ ದೇಶಕ್ಕೆ ಹೋಗುತ್ತಿರುವಾಗ ಇದೇ ಕೃಷ್ಣರಾವ ಅವನನ್ನು ಭೇಟಿಯಾಗಿ, ‘ನೀವು ನನ್ನ ಒಂದು ಷರತ್ತನ್ನು ಒಪ್ಪಿಕೊಂಡರೆ, ನಾನು ನಿಮಗೆ ದೇವಗಿರಿಯನ್ನು ಗೆಲ್ಲುವ ರಹಸ್ಯವನ್ನು ಹೇಳುತ್ತೇನೆ, ಮತ್ತು ರಾಜಾ ರಾಮದೇವನ ಸೇನೆ, ಅವನ ಶಕ್ತಿಯ ಸಂಪೂರ್ಣ ಮಾಹಿತಿಯನ್ನು ನೀಡುತ್ತೇನೆ’ ಎಂದು ಹೇಳಿದನು.

ಅವನ ಷರತ್ತು ಏನೆಂದರೆ, ‘ನೀವು ದೇವಗಿರಿಯನ್ನು ಗೆದ್ದು, ನನ್ನನ್ನು ಅದರ ರಾಜನನ್ನಾಗಿ ಮಾಡಬೇಕು’ ಎಂದು ಆಗಿತ್ತು.

ಅಲ್ಲಾಉದ್ದೀನ ವಿಚಾರ ಮಾಡಿ, ಕೃಷ್ಣರಾವ್‌ನೊಂದಿಗೆ ಒಪ್ಪಂದವನ್ನು ಮಾಡಿಕೊಂಡನು. ಅಲ್ಲಾಉದ್ದೀನನು ಒಪ್ಪಿಗೆ ಸೂಚಿಸಿದ ಬಳಿಕ ಕೃಷ್ಣರಾವ್ ಅವನಿಗೆ ಕೋಟೆಯ ಎಲ್ಲ ರಹಸ್ಯಗಳನ್ನು ಹೇಳಿದನು. ಅದರ ಬಳಿಕ ಅಲ್ಲಾಉದ್ದೀನನು ದೇವಗಿರಿಯ ಮೇಲೆ ಮತ್ತೊಮ್ಮೆ ದಂಡೆತ್ತಿ ಬಂದನು.

ಈ ಸಮಾಚಾರ ತಿಳಿಯುತ್ತಲೇ ರಾಜಾ ರಾಮದೇವನು ಎಲ್ಲ ವೀರ ಸರದಾರರ ಸಭೆಯನ್ನು ಕರೆದನು. ಸಭೆಯಲ್ಲಿ ರಾಜನು ‘ಸೋತ ಶತ್ರುವು ಎಂದಿಗೂ ಇಷ್ಟು ಬೇಗ ಮರಳಿ ಬರುವುದಿಲ್ಲ. ಹಾಗಿರುವಾಗ ಇವನು ಹೇಗೆ ಬಂದನು? ಇದರರ್ಥವೇನೆಂದರೆ ನಮ್ಮಲ್ಲಿಯೇ ಯಾರೋ ಅಲ್ಲಾಉದ್ದೀನನೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ. ಆದರೆ ಚಿಂತಿಸಬಾರದು, ನಾವು ಅವನನ್ನು ಮತ್ತೆ ಸೋಲಿಸೋಣ’ ಎಂದು ಹುರಿದುಂಬಿಸಿದನು.

ಇದನ್ನು ಕೇಳಿ ಎಲ್ಲರೂ ತಮ್ಮ ತಮ್ಮ ತಲವಾರನ್ನು ಎತ್ತಿ ಮತ್ತು ‘ಈ ಹೋರಾಟದಲ್ಲಿ ನಾವು ನಮ್ಮ ಸಂಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತೇವೆ ಮತ್ತು ದೇವಗಿರಿಯನ್ನು ರಕ್ಷಿಸುತ್ತೇವೆ’ ಎಂದು ಪಣತೊಟ್ಟರು.

ಅದೇ ಸಭೆಯಲ್ಲಿ ಕೃಷ್ಣರಾವ್ ಕೂಡ ಇದ್ದನು ಮತ್ತು ಅವನು ಸುಮ್ಮನೆ ಕುಳಿತುಕೊಂಡು ಎಲ್ಲವನ್ನೂ ಕೇಳಿಸಿಕೊಳ್ಳುತ್ತಿದ್ದನು. ಇದನ್ನು ನೋಡಿ ಎಲ್ಲರಿಗೂ ಆಶ್ಚರ್ಯವಾಯಿತು. ಎಲ್ಲರೂ ಅವನನ್ನು ಸುಮ್ಮನೆ ಕುಳಿತಿರುವ ಕಾರಣವನ್ನು ಕೇಳಿದರು.

ಕೃಷ್ಣರಾವ್‌ನು ಈ ರೀತಿ ಸುಮ್ಮನೆ ಕುಳಿತಿರುವುದನ್ನು ನೋಡಿ ವೀರಮತಿಗೆ ಬಹಳ ಕೋಪ ಬಂತು ಮತ್ತು ಅವಳು ಹುಲಿಯಂತೆ ಅವನ ಮೇಲೆ ಎರಗಿದಳು. ಅವಳು ‘ಇವನೇ ನಮ್ಮ ದೇಶದ ದ್ರೋಹಿಯಾಗಿದ್ದಾನೆ’ ಎಂದು ಹೇಳಿ ಮಿಂಚಿನ ಗತಿಯಲ್ಲಿ ತನ್ನ ಸೊಂಟಕ್ಕೆ ಕಟ್ಟಿದ ತಲವಾರನ್ನು ತೆಗೆದಳು ಮತ್ತು ಕೃಷ್ಣರಾವ್‌ನ ಎದೆಯನ್ನು ತಿವಿದಳು.

ವೀರಮತಿಗೆ ಕೃಷ್ಣರಾವ್‌ನ ಪ್ರಾಮಾಣಿಕತೆಯ ಬಗ್ಗೆ ಮೊದಲೇ ಸಂದೇಹವಿತ್ತು. ಆದ್ದರಿಂದ ವೀರಮತಿಯು ಅವನ ಮೇಲೆ ಒಂದು ಕಣ್ಣಿಟ್ಟಿದ್ದಳು. ಯಾವಾಗ ವೀರಮತಿಗೆ ಅವನು ಅಲ್ಲಾಉದ್ದೀನನೊಂದಿಗೆ ಸೇರಿಕೊಂಡಿರುವ ವಿಷಯ ತಿಳಿಯಿತೋ, ಆಗದಿಂದ ಅವಳು ಕೋಪದಿಂದ ಕುದಿಯುತ್ತಿದ್ದಳು. ಅವನ ಪಾಪದ ಶಿಕ್ಷೆಯನ್ನು ನೀಡಲೇ ಬೇಕಾಗಿತ್ತು. ಅವಕಾಶ ದೊರೆಯುತ್ತಲೇ ಅವಳು ಶಿಕ್ಷಿಸಿದಳು.

ಸಾಯುವಾಗ ಕೃಷ್ಣರಾವ್ ‘ನಾನು ನಿನ್ನ ಪತಿಯಾಗಿದ್ದರೂ ನನ್ನನ್ನೇಕೆ ಕೊಂದೆ’ ಎಂದು ಕೇಳಿದನು. ಆಗ ವೀರಮತಿಯು ‘ನನ್ನ ವಿವಾಹ ನಿಮ್ಮೊಂದಿಗೆ ಆಗುವುದರಲ್ಲಿತ್ತು ಹಾಗೂ ನಾನು ನಿಮ್ಮನ್ನು ನನ್ನ ಪತಿಯೆಂದು ಒಪ್ಪಿಕೊಂಡಿದ್ದೆನು. ಆದರೆ ನಿಮ್ಮಂತಹ ದೇಶದ್ರೋಹಿಯನ್ನು ಕೊಂದು ನಾನು ನನ್ನ ರಾಷ್ಟ್ರ ಕರ್ತವ್ಯವನ್ನು ನಿಭಾಯಿಸಿದ್ದೇನೆ. ಈಗ ನಾನು ಪತ್ನಿಯ ಧರ್ಮವನ್ನು ಪಾಲಿಸುತ್ತೇನೆ’ ಎಂದು ಹೇಳಿ ಅವಳು ತಲವಾರನ್ನು ತಿರುಗಿಸಿ ಮತ್ತು ತನ್ನ ಹೊಟ್ಟೆಯನ್ನೇ ತಿವಿದು ಮರುಕ್ಷಣವೇ ಪ್ರಾಣ ತ್ಯಜಿಸಿ ಕೃಷ್ಣರಾವ್‌ನ ಶವದ ಪಕ್ಕದಲ್ಲಿ ಬಿದ್ದಳು.

ವೀರಮತಿಯ ಮನಸ್ಸಿನಲ್ಲಿ ಎಷ್ಟು ರಾಷ್ಟ್ರಪ್ರೇಮವಿತ್ತು! ಅವಳು ತಾನು ಮದುವೆಯಾದ ಪತಿ ದೇಶದ್ರೋಹಿಯಾಗಿದ್ದಾನೆ ಎಂದು ಗಮನಕ್ಕೆ ಬರುತ್ತಲೇ ಅವಳು ತನ್ನ ಸ್ವಂತ ವಿಚಾರವನ್ನು ಮಾಡಲಿಲ್ಲ.

ದೇಶದ್ರೋಹಿಯನ್ನು ಕೊಂದು ಅವನನ್ನು ಶಿಕ್ಷಿಸಿದಳು. ಇದರರ್ಥವೇನೆಂದರೆ, ವೀರಮತಿಗೆ ಅವಳ ಸ್ವಾರ್ಥಕ್ಕಿಂತ ದೇಶದ ರಕ್ಷಣೆಯು ಹೆಚ್ಚು ಮಹತ್ವಪೂರ್ಣವಾಗಿತ್ತು. ಪತಿಗೆ ಶಿಕ್ಷೆ ನೀಡುವುದರೊಂದಿಗೆ ಅವಳು ಪತ್ನಿಯ ಧರ್ಮವನ್ನು ಪಾಲಿಸಿದಳು ಮತ್ತು ತನ್ನ ಪ್ರಾಣವನ್ನೂ ತ್ಯಜಿಸಿದಳು.

ಕೃಪೆ: ಹಿಂದು ಜಾಗೃತಿ.

ರಾಜಕೀಯ

18 ಶಾಸಕರ ಅಮಾನತು.. ಬಿಜೆಪಿಯ ಮುಂದಿನ ನಡೆ ತಿಳಿಸಿದ ಬಿ.ವೈ.ವಿಜಯೇಂದ್ರ

18 ಶಾಸಕರ ಅಮಾನತು.. ಬಿಜೆಪಿಯ ಮುಂದಿನ ನಡೆ ತಿಳಿಸಿದ ಬಿ.ವೈ.ವಿಜಯೇಂದ್ರ

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ B.Y.Vijayendra

[ccc_my_favorite_select_button post_id="104725"]
ದೊಡ್ಡಬಳ್ಳಾಪುರದಲ್ಲಿ ಶಾಂತಿ ಸಭೆ.. ಡೀಸಿ ಮತ್ತು ಪೊಲೀಸರು ಹೇಳಿದ್ದು ಇಷ್ಟು

ದೊಡ್ಡಬಳ್ಳಾಪುರದಲ್ಲಿ ಶಾಂತಿ ಸಭೆ.. ಡೀಸಿ ಮತ್ತು ಪೊಲೀಸರು ಹೇಳಿದ್ದು ಇಷ್ಟು

ಯುಗಾದಿ, ರಂಜಾನ್ ಮತ್ತು ಶ್ರೀರಾಮ ಶೋಭಯಾತ್ರೆ ಹಿನ್ನೆಲೆಯಲ್ಲಿ ಆಚರಣೆ ಹಿನ್ನೆಲೆಯಲ್ಲಿ ನಗರದ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ಶುಕ್ರವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬಾ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.

[ccc_my_favorite_select_button post_id="104694"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ದೊಡ್ಡಬಳ್ಳಾಪುರದಲ್ಲಿ ಅಗ್ನಿ ಅವಘಡ.. ಕಾರು ಭಸ್ಮ

ದೊಡ್ಡಬಳ್ಳಾಪುರದಲ್ಲಿ ಅಗ್ನಿ ಅವಘಡ.. ಕಾರು ಭಸ್ಮ

ವಿದ್ಯುತ್ ಟ್ರಾನ್ಸ್ ಪಾರ್ಮರ್ ಬಳಿ ಆಕಸ್ಮಿಕವಾಗಿ ತಗುಲಿದ‌ ಬೆಂಕಿಗೆ ಅಪರಾಧ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಒಂದು ಕಾರು ಸುಟ್ಟು ಭಸ್ಮವಾಗಿದೆ. Doddaballapura

[ccc_my_favorite_select_button post_id="104720"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!