ಬುಧವಾರ, ಮಾರ್ಚ್ 26, 2025, ದೈನಂದಿನ ರಾಶಿ ಭವಿಷ್ಯ
ಮೇಷ ರಾಶಿ: ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ. ಬೆಳ್ಳಗೆ ಇರುವು ದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಷಭ ರಾಶಿ: ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮಿಥುನ ರಾಶಿ: ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕಟಕ ರಾಶಿ: ದಿನನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವು ದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಸಿಂಹ ರಾಶಿ: ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕನ್ಯಾ ರಾಶಿ: ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ, ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ತುಲಾ ರಾಶಿ: ನಿರಾಶಾದಾಯಕ ನಡವಳಿಕೆ ಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವು ದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿ ದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. (ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಶ್ಚಿಕ ರಾಶಿ: ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸುಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)
ಧನಸ್ಸು ರಾಶಿ: ದೂರ ಸಂಚಾರದಿಂದ ದೇಹಾ ಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವ ರಣ.ಅನುಕೂಲ. ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರ ದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥ ನೆ ಮಾಡಿ ಒಳಿತಾಗುವುದು.)
ಮಕರ ರಾಶಿ: ವಾದ ವಿವಾದಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಕುಂಭ ರಾಶಿ: ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮೀನ ರಾಶಿ: ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಬಾಯಿಸಬಲ್ಲಿರಿ. ಪಿತ್ರಾರ್ಜಿತ
ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)
ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM