Impact of Yatnal ouster will be known soon: Shivaram Hebbar

ಯತ್ನಾಳ್ ಉಚ್ಛಾಟನೆಯ ಪರಿಣಾಮ ಶೀಘ್ರದಲ್ಲೇ ತಿಳಿಯಲಿದೆ: ಶಿವರಾಮ ಹೆಬ್ಬಾರ್

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basana Gouda Patila Yatnal) ಅವರನ್ನು ಆರು ವರ್ಷಗಳ ಅವಧಿಗೆ ಉಚ್ಚಾಟಿಸಿರುವ ಹೈಕಮಾಂಡ್‌ ನಿರ್ಧಾರಕ್ಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತೊಂದೆಡೆ ಪಕ್ಷದ ಹೈಕಮಾಂಡ್ ನಿರ್ಧಾರದಿಂದ ಕೆರಳಿರುಚ ಯತ್ನಾಳ್ ಬಣದ ನಾಯಕರು ಇಂದು ಸಭೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಯತ್ನಾಳ್ ಬಣದಲ್ಲಿ ಕಾಣಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ, ಶ್ರೀರಾಮುಲು ಸೇರಿದಂತೆ ಹಲವು ನಾಯಕರು ಹೈಕಮಾಂಡ್ ತನ್ನ ನಿಲುವನ್ನು ಬದಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಂಚಮಸಾಲಿ ಸಮುದಾಯದ ಜಯಮೃತ್ಯುಂಜಯ ಸ್ವಾಮೀಜಿ, ಏಪ್ರಿಲ್ 10ರೊಳಗೆ ಯತ್ನಾಳ್‌ ಉಚ್ಚಾಟನೆ ನಿರ್ಧಾರವನ್ನು ಹಿಂಪಡೆಯಲು ಗಡುವು ನೀಡಿದ್ದಾರೆ.

ಪರಿಣಾಮ ಗೊತ್ತಾಗಲಿದೆ

ಮತ್ತೊಂದೆಡೆ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆಯ ಪರಿಣಾಮ ಇನ್ನು ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಪರೋಕ್ಷವಾಗಿ ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆ ಯಾಕಾಯಿತು ಎನ್ನುವುದು ಗೊತ್ತಿಲ್ಲ. ಅದು ಪಕ್ಷದ ನಿರ್ಣಯ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ, ಎರಡು ಮೂರು ದಿನಗಳಲ್ಲಿ ಅದರ ಪರಿಣಾಮ ಗೊತ್ತಾಗಲಿದೆ’ ಎಂದರು.

‘ಇನ್ನು ಬಿಜೆಪಿ ನಮ್ಮನ್ನು ಉಚ್ಛಾಟನೆ ಮಾಡಲ್ಲ. ಪಕ್ಷ ಏನೇ ನಿರ್ಧರಿಸಿದರೂ ನಾನು ಸ್ವಾಗತಿಸುವೆ.

ವಿಧಾನಸಭೆ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಆಯಿತು. ಶಾಸಕರಾದ ಸುನೀಲ್‌ ಕುಮಾರ್‌, ಆ‌ರ್.ಅಶೋಕ್‌ ಅವರಿಗೆ ಏನೂ ಆಗಲಿಲ್ಲ. ಪಾಪದ ಶಾಸಕರು ಮಾತ್ರ ಅಮಾನತುಗೊಂಡರು.

ದೊಡ್ಡ ನಾಯಕರಿಗೆ ಏನೂ ಆಗಲ್ಲ. ಅವರು ಆರಾಮಾಗಿ ಇರುತ್ತಾರೆ. ಶಾಸಕ ಸೋಮಶೇಖರ್‌ ಅವರ ಹೇಳಿಕೆಗೆ ನೂರಕ್ಕೆ ನೂರಾ ಒಂದರಷ್ಟು ನನ್ನ ಬೆಂಬಲವಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. Cmsiddaramaiah

[ccc_my_favorite_select_button post_id="105143"]
ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ. Accident

[ccc_my_favorite_select_button post_id="105131"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!